• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಧಿಕಾರ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಕೇಜ್ರಿವಾಲ್ ಸರ್ಕಾರ ಹೇಗೆ ತಪರಾಕಿ ನೋಡಿ!

TNN Correspondent Posted On April 18, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಇತ್ತೀಚೆಗಷ್ಟೇ ಶಾಸಕರ ಅಮಾನತುಗೊಳಿಸಿದ್ದು ನುಂಗಲಾರದ ತುತ್ತಾಗಿತ್ತು. ಈ ನೋವು ಮರೆಮಾಚುವ ಮುನ್ನವೇ ಈಗ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಆರೋಪದಲ್ಲಿ ಕೇಂದ್ರ ಸರ್ಕಾರದಿಂದ ಹಿನ್ನಡೆ ಅನುಭವಿಸಿದೆ.

ಹೌದು, ಕೇಂದ್ರ ಸರ್ಕಾರದ ಶಿಫಾರಸು ಮೇರೆಗೆ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ದೆಹಲಿ ಸರ್ಕಾರದ ಹಲವು ಸಚಿವರಿಗೆ ನೇಮಿಸಲಾಗಿದ್ದ ಸಲಹೆಗಾರರ ನೇಮಕ ರದ್ದುಗೊಳಿಸಿದೆ.

ಅಮರ್ ದೀಪ್ ತಿವೇರಿ, ಅರುಣೋದಯ್ ಪ್ರಕಾಶ್, ಆತಿಶಿ ಮರ್ಲೇನಾ, ದಿನಕರ್ ಆದಿಬ್, ರಾಮ್ ಕುಮಾರ್ ಝಾ, ಸಮೀರ್ ಮಲ್ಹೋತ್ರಾ, ರಾಘವ್ ಚಂದಾ, ಪ್ರಶಾಂತ್ ಸಕ್ಸೇನಾ ಸೇರಿ ಹಲವು ಸಲಹೆಗಾರರ ನೇಮಕವನ್ನು ಸಾಮಾನ್ಯ ಆಡಳಿತ ವಿಭಾಗ ಮಂಗಳವಾರ ರದ್ದುಗೊಳಿಸಿದೆ.

ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹಾಗೂ ತನ್ನ ಅಧಿಕಾರದ ವ್ಯಾಪ್ತಿಯಲ್ಲಿ ಬರದ ಕಾರ್ಯವನ್ನು ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗಕ್ಕೆ ಪತ್ರ ಬರೆದಿತ್ತು. ಈ ಪತ್ರದ ಅನ್ವಯ ಸಲಹೆಗಾರರ ನೇಮಕವನ್ನು ರದ್ದುಗೊಳಿಸಲಾಗಿದೆ.

ನೇಮಕ ರದ್ದಾದವರಲ್ಲಿ ಇಬ್ಬರು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಲಹೆಗಾರರಾಗಿ ಇದ್ದರು ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಸದಾ ಒಂದಿಲ್ಲೊಂದು ಅಚಾತುರ್ಯ ಹೇಳಿಕೆ, ವಿವಾದ, ಸದಾ ಸುದ್ದಿಯಲ್ಲಿರಲು ಬಯಸುವ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ನಡೆಯಿಂದ ಮುಖಭಂಗವಾದಂತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search