• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಧಿಕಾರ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಕೇಜ್ರಿವಾಲ್ ಸರ್ಕಾರ ಹೇಗೆ ತಪರಾಕಿ ನೋಡಿ!

TNN Correspondent Posted On April 18, 2018


  • Share On Facebook
  • Tweet It

ದೆಹಲಿ: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಇತ್ತೀಚೆಗಷ್ಟೇ ಶಾಸಕರ ಅಮಾನತುಗೊಳಿಸಿದ್ದು ನುಂಗಲಾರದ ತುತ್ತಾಗಿತ್ತು. ಈ ನೋವು ಮರೆಮಾಚುವ ಮುನ್ನವೇ ಈಗ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಆರೋಪದಲ್ಲಿ ಕೇಂದ್ರ ಸರ್ಕಾರದಿಂದ ಹಿನ್ನಡೆ ಅನುಭವಿಸಿದೆ.

ಹೌದು, ಕೇಂದ್ರ ಸರ್ಕಾರದ ಶಿಫಾರಸು ಮೇರೆಗೆ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ದೆಹಲಿ ಸರ್ಕಾರದ ಹಲವು ಸಚಿವರಿಗೆ ನೇಮಿಸಲಾಗಿದ್ದ ಸಲಹೆಗಾರರ ನೇಮಕ ರದ್ದುಗೊಳಿಸಿದೆ.

ಅಮರ್ ದೀಪ್ ತಿವೇರಿ, ಅರುಣೋದಯ್ ಪ್ರಕಾಶ್, ಆತಿಶಿ ಮರ್ಲೇನಾ, ದಿನಕರ್ ಆದಿಬ್, ರಾಮ್ ಕುಮಾರ್ ಝಾ, ಸಮೀರ್ ಮಲ್ಹೋತ್ರಾ, ರಾಘವ್ ಚಂದಾ, ಪ್ರಶಾಂತ್ ಸಕ್ಸೇನಾ ಸೇರಿ ಹಲವು ಸಲಹೆಗಾರರ ನೇಮಕವನ್ನು ಸಾಮಾನ್ಯ ಆಡಳಿತ ವಿಭಾಗ ಮಂಗಳವಾರ ರದ್ದುಗೊಳಿಸಿದೆ.

ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹಾಗೂ ತನ್ನ ಅಧಿಕಾರದ ವ್ಯಾಪ್ತಿಯಲ್ಲಿ ಬರದ ಕಾರ್ಯವನ್ನು ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗಕ್ಕೆ ಪತ್ರ ಬರೆದಿತ್ತು. ಈ ಪತ್ರದ ಅನ್ವಯ ಸಲಹೆಗಾರರ ನೇಮಕವನ್ನು ರದ್ದುಗೊಳಿಸಲಾಗಿದೆ.

ನೇಮಕ ರದ್ದಾದವರಲ್ಲಿ ಇಬ್ಬರು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಲಹೆಗಾರರಾಗಿ ಇದ್ದರು ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಸದಾ ಒಂದಿಲ್ಲೊಂದು ಅಚಾತುರ್ಯ ಹೇಳಿಕೆ, ವಿವಾದ, ಸದಾ ಸುದ್ದಿಯಲ್ಲಿರಲು ಬಯಸುವ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ನಡೆಯಿಂದ ಮುಖಭಂಗವಾದಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search