• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಧಿಕಾರ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಕೇಜ್ರಿವಾಲ್ ಸರ್ಕಾರ ಹೇಗೆ ತಪರಾಕಿ ನೋಡಿ!

TNN Correspondent Posted On April 18, 2018
0


0
Shares
  • Share On Facebook
  • Tweet It

ದೆಹಲಿ: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಇತ್ತೀಚೆಗಷ್ಟೇ ಶಾಸಕರ ಅಮಾನತುಗೊಳಿಸಿದ್ದು ನುಂಗಲಾರದ ತುತ್ತಾಗಿತ್ತು. ಈ ನೋವು ಮರೆಮಾಚುವ ಮುನ್ನವೇ ಈಗ ವ್ಯಾಪ್ತಿ ಮೀರಿ ಕಾರ್ಯನಿರ್ವಹಿಸಿದ ಆರೋಪದಲ್ಲಿ ಕೇಂದ್ರ ಸರ್ಕಾರದಿಂದ ಹಿನ್ನಡೆ ಅನುಭವಿಸಿದೆ.

ಹೌದು, ಕೇಂದ್ರ ಸರ್ಕಾರದ ಶಿಫಾರಸು ಮೇರೆಗೆ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ದೆಹಲಿ ಸರ್ಕಾರದ ಹಲವು ಸಚಿವರಿಗೆ ನೇಮಿಸಲಾಗಿದ್ದ ಸಲಹೆಗಾರರ ನೇಮಕ ರದ್ದುಗೊಳಿಸಿದೆ.

ಅಮರ್ ದೀಪ್ ತಿವೇರಿ, ಅರುಣೋದಯ್ ಪ್ರಕಾಶ್, ಆತಿಶಿ ಮರ್ಲೇನಾ, ದಿನಕರ್ ಆದಿಬ್, ರಾಮ್ ಕುಮಾರ್ ಝಾ, ಸಮೀರ್ ಮಲ್ಹೋತ್ರಾ, ರಾಘವ್ ಚಂದಾ, ಪ್ರಶಾಂತ್ ಸಕ್ಸೇನಾ ಸೇರಿ ಹಲವು ಸಲಹೆಗಾರರ ನೇಮಕವನ್ನು ಸಾಮಾನ್ಯ ಆಡಳಿತ ವಿಭಾಗ ಮಂಗಳವಾರ ರದ್ದುಗೊಳಿಸಿದೆ.

ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಹಾಗೂ ತನ್ನ ಅಧಿಕಾರದ ವ್ಯಾಪ್ತಿಯಲ್ಲಿ ಬರದ ಕಾರ್ಯವನ್ನು ಮಾಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ದೆಹಲಿ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗಕ್ಕೆ ಪತ್ರ ಬರೆದಿತ್ತು. ಈ ಪತ್ರದ ಅನ್ವಯ ಸಲಹೆಗಾರರ ನೇಮಕವನ್ನು ರದ್ದುಗೊಳಿಸಲಾಗಿದೆ.

ನೇಮಕ ರದ್ದಾದವರಲ್ಲಿ ಇಬ್ಬರು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಲಹೆಗಾರರಾಗಿ ಇದ್ದರು ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಸದಾ ಒಂದಿಲ್ಲೊಂದು ಅಚಾತುರ್ಯ ಹೇಳಿಕೆ, ವಿವಾದ, ಸದಾ ಸುದ್ದಿಯಲ್ಲಿರಲು ಬಯಸುವ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ನಡೆಯಿಂದ ಮುಖಭಂಗವಾದಂತಾಗಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search