• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಾಯ್ ವಾಲಾನನ್ನು ಹೀಯಾಳಿಸುವವರೇ ಕೇಳಿ.. ಪುಣೆಯ ಟೀ ಮಾರಾಟಗಾರರ ತಿಂಗಳ ಆದಾಯ 12 ಲಕ್ಷ

TNN Correspondent Posted On April 18, 2018
0


0
Shares
  • Share On Facebook
  • Tweet It

ಪುಣೆ: ಭಾರತ ಪ್ರಧಾನಿ ನರೇಂದ್ರ ಮೋದಿ ಒಂದು ಕಾಲದಲ್ಲಿ ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದ್ದರು. ಮುಂದೇ ಅವರು ಸಮಾಜಸೇವೆಯಲ್ಲಿ ಸಕ್ರಿಯರಾಗಿ ಗುಜರಾತ್ ಮುಖ್ಯಮಂತ್ರಿಯಾಗಿ ನಿರಂತರವಾಗಿ ಮೂರು ಭಾರಿ ಆಯ್ಕೆಯಾದರು. ಅಲ್ಲದೇ ಇದೀಗ ಪ್ರಧಾನ ಮಂತ್ರಿಗಳಾಗಿ ವಿಶ್ವವೇ ಮೆಚ್ಚುವ ಆಡಳಿತ ನೀಡುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಟೀ ಮಾರುವುದನ್ನು ಹೀಯಾಳಿಸಿದ ಕಾಂಗ್ರೆಸ್ಸಿಗರು ತಮ್ಮ ಹೀನ ಮನಸ್ಥಿತಿ ಹೊರ ಹಾಕಿದ್ದರು. ಅಲ್ಲದೇ ಇತ್ತೀಚೆಗೆ ನರೇಂದ್ರ ಮೋದಿ ಸ್ವಾಭಿಮಾನಿಯಾಗಿ ಬದುಕುವುದನ್ನು ಇಟ್ಟುಕೊಂಡು ಪಕೋಡ ಮಾರುವ ಉದ್ಯೋಗವೂ ಉತ್ತಮ ಎಂದು ಹೇಳಿದ್ದರು.

ಮೋದಿ ಅವರ ಪಕೋಡ ಹೇಳಿಕೆಯನ್ನು ಹೀಯಾಳಿಸುವ ಮೂಲಕ ಕಾಂಗ್ರೆಸ್ಸಿಗರು ತಳಮಟ್ಟದಲ್ಲಿ ಪಕೋಡ ಮಾರುತ್ತಿರುವವರಿಗೆ ಅಪಮಾನ ಮಾಡಿತ್ತು.  ಇದೀಗ ಮತ್ತೊಂದು ಸುದ್ದಿಯೊಂದು ಪುಣೆಯಿಂದ ಬಂದಿದ್ದು ಒಬ್ಬ ಟೀ ಮಾರಾಟಗಾರ ತಿಂಗಳಿಗೆ 12 ಲಕ್ಷ ಆದಾಯ ಪಡೆಯುವ ಮೂಲಕ ಟೀ ಮಾರಾಟಗಾರರನ್ನು ಹೀಯಾಳಿಸುವವರಿಗೆ ತನ್ನ ಸಾಧನೆಯಿಂದಲೇ ಉತ್ತರ ನೀಡಿದ್ದಾರೆ.

ಶಾಲೆಯಲ್ಲಿ ಗೆಳೆಯರೊಂದಿಗೆ ಲಾಸ್ಟ್ ಬೆಂಚ್ ನಲ್ಲಿ ಕುಳಿತುಕೊಳ್ಳುತ್ತಿದ್ದ ವ್ಯಕ್ತಿ, ಎಲ್ಲರೂ ಕೀಳಾಗಿ ಕಾಣುತ್ತಿದ್ದ ಯುವಕ ಇದೀಗ ತನ್ನ ಟೀ ಅಂಗಡಿಯಲ್ಲಿ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿ ತಿಂಗಳಿಗೆ 12 ಲಕ್ಷ ಆದಾಯ ಪಡೆಯುತ್ತಿದ್ದಾನೆ. ಪುಣೆ ನಗರದಲ್ಲಿ ಪ್ರಖ್ಯಾತಿ ಪಡೆದಿರುವ ನವ್ಲೇ ಟೀ ಅಂಗಡಿಯ ಮಾಲೀಕನೇ ಈ ಸಾಧಕ ನವನಾಥ ಯವ್ಲೇ.

ತನ್ನ ಟೀ ಅಂಗಡಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಬೇಕು ಎಂಬುದು ನವನಾಥ ಯವ್ಲೇ ಅವರು ಗುರಿ ಹೊಂದಿದ್ದಾರೆ. ಅಲ್ಲದೇ ಈ ಉದ್ಯೋಗ ನನಗೆ ಲಾಭ ನೀಡುವ ಜೊತೆಗೆ ಹಲವರಿಗೆ ಉದ್ಯೋಗ ದೊರಕಿಸಿಕೊಟ್ಟಿದೆ. ಪಕೋಡಾ ಮಾರಾಟ, ಟೀ ಮಾರಾಟವೂ ಸಹ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಅಲ್ಲದೇ ವೇಗವಾಗಿ ಕಡಿಮೆ ಖರ್ಚಿನಲ್ಲಿ ಉದ್ಯಮ ಆರಂಭಿಸಬಹು ಎನ್ನುತ್ತಾರೆ ನವನಾಥ ಯವ್ಲೇ.

2011ರಲ್ಲಿ ಗೆಳೆಯದೊಂದಿಗೆ ಟೀ ಉದ್ಯಮ ಆರಂಭಿಸಿದ ಯವ್ಲೇ ‘ನಾಲ್ಕು ವರ್ಷ ನಮ್ಮ ಟೀ ಹೇಗೆ ಇರಬೇಕು ಎಂಬುದರ ಕುರಿತು ಸಂಶೋಧನೆ ನಡೆಸಿ, ಚರ್ಚೆ ನಡೆಸಿದ ನಂತರ ನಮ್ಮ ಬ್ರ್ಯಾಂಡ್ ಸೃಷ್ಟಿಸಿದ್ದೇವೆ. ಇದೀಗ ಪುಣೆಯಲ್ಲಿ   ಎರಡು ಕೇಂದ್ರಗಳನ್ನು ಆರಂಭಿಸಿದ್ದು, ನಿತ್ಯ ಮೂರು ಸಾವಿರದಿಂದ ನಾಲ್ಕು ಸಾವಿರ ಟೀ ಕಪ್ ಮಾರಾಟ ಮಾಡುತ್ತೇವೆ. ತಿಂಗಳಿಗೆ 10 ರಿಂದ 12 ಲಕ್ಷ ಆದಾಯ ಪಡೆಯುತ್ತಿದ್ದೇವೆ. ಇದನ್ನು ವಿಶ್ವದರ್ಜೆಯ ಬ್ರ್ಯಾಂಡ್ ಆಗಿ ರೂಪಿಸುವ ಇರಾದೆ ಎನ್ನುತ್ತಾರೆ ನವನಾಥ ಯವ್ಲೇ.

https://www.youtube.com/watch?v=PkaXGpbiSyU

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search