• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚುನಾವಣೆಗೂ ಐದು ದಿನದ ಮೊದಲು ಮಂಗಳೂರಿನಲ್ಲಿ ಮೋದಿ ಮೋಡಿ, ಮಾಡಲಿದ್ದಾರೆ ಅಬ್ಬರದ ಪ್ರಚಾರ

TNN Correspondent Posted On April 18, 2018
0


0
Shares
  • Share On Facebook
  • Tweet It

ರಾಜ್ಯದಲ್ಲಿ ಬೇಸಗೆ ಬಿಸಿಲಿಗಿಂತ ಚುನಾವಣೆ ಕಾವೇ ಜಾಸ್ತಿ ಇದೆ ಎನ್ನುವಷ್ಟರ ಮಟ್ಟಿಗೆ ಚುನಾವಣೆ ರಂಗೇರಿದೆ. ಮೂರೂ ಪಕ್ಷಗಳು ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆಡಳಿತ ವಿರೋಧಿ ಅಲೆ ತಲೆನೋವಾಗಿದ್ದರೆ, ಜೆಡಿಎಸ್ ಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಅತ್ತ ಬಿಜೆಪಿ ಈ ಬಾರಿ ಗೆಲುವು ನಮ್ಮದೇ ಎಂದು ಆತ್ಮವಿಶ್ವಾಸದಲ್ಲಿದ್ದಾರೆ. ಜನಬೆಂಬಲವೂ ಮೇಲ್ನೋಟಕ್ಕೆ ಬಿಜೆಪಿಗೇ ಇದೆ ಎಂಬುದು ಕಾಣುತ್ತಿದೆ.

ಇದಕ್ಕೆ ರಾಜ್ಯದಲ್ಲಿ ಯಡಿಯೂರಪ್ಪನವರಿಗೆ ಇರುವ ಬೆಂಬಲ, ಚುನಾವಣಾ ಚಾಣಾಕ್ಯ ಅಮಿತ್ ಷಾ ಬಿಡುವಿಲ್ಲದ ಪ್ರವಾಸ, ನರೇಂದ್ರ ಮೋದಿ ಅವರ ಅಲೆಯೇ ಕಾರಣ ಎಂಬುದು ರಾಜಕೀಯ ತಜ್ಞರ ಅಂಬೋಣ.

ಇದಕ್ಕೆ ಪೂರಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣೆಗೆ ಐದು ದಿನ ಮೊದಲು ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದು, ಕರಾವಳಿಯಲ್ಲಿ ಈ ಬಾರಿ ಬಿಜೆಪಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಲು ಈ ಪ್ರಚಾರ ಸಹಕಾರಿಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಆದಾಗ್ಯೂ ಕರಾವಳಿಯಲ್ಲಿ ಬಿಜೆಪಿಗೆ ಉತ್ತಮ ಬೆಂಬಲ ವ್ಯಕ್ತವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗೆ ಐದು ದಿನ ಮೊದಲು, ಅಂದರೆ ಏಪ್ರಿಲ್ 7ರಂದು ಮಂಗಳೂರಿಗೆ ಆಗಮಿಸಲಿದ್ದು, ಅಬ್ಬರದ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಈ ಭಾಗದ ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಜನರಲ್ಲಿ ನಿರೀಕ್ಷೆ ಹುಟ್ಟಿದೆ.

ಮೇ 8ರಂದು ಸಹ ಮೋದಿ ಅವರು ಮಂಗಳೂರಿನ ವಿವಿಧ ಭಾಗಗಳಲ್ಲಿ ಮತಯಾಚನೆ, ರ್ಯಾಲಿ ನಡೆಸಲಿದ್ದು, ಸ್ಟಾರ್ ಪ್ರಚಾರಕರಿಂದ ಬಿಜೆಪಿಗೆ ಅನುಕೂಲವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಶತಾಯ ಗತಾಯ ಈ ಬಾರಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತಗೊಳಿಸುವ ಕನಸು ಹೊತ್ತಿರುವ ಬಿಜೆಪಿಗೆ ಮೋದಿ ಭೇಟಿ ಮತ್ತಷ್ಟು ಶಕ್ತಿ ತುಂಬಲಿದೆ ಎಂದೇ ಹೇಳಲಾಗುತ್ತಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search