• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಗವಾನ್ ಹನುಮಾನನಿಗೆ ನಮಸ್ಕರಿಸಿದ್ದಕ್ಕೆ ಬಿಜೆಪಿ ಮುಸ್ಲಿಂ ಎಂಎಲ್ ಸಿ ವಿರುದ್ಧ ಫತ್ವಾ, ಇದಲ್ಲವೇ ಅಸಹಿಷ್ಣುತೆ?

TNN Correspondent Posted On April 19, 2018
0


0
Shares
  • Share On Facebook
  • Tweet It

ಲಖನೌ: ಒಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಘನತೆಯನ್ನು ಬಾನೆತ್ತರಕ್ಕೆ ಹಾರಿಸಲು ಒಂದು ದಿನವೂ ರಜೆ ತೆಗೆದುಕೊಳ್ಳದೆ ದುಡಿಯುತ್ತಿದ್ದಾರೆ. ಪರಿಣಾಮ ದೇಶದ ಜಿಡಿಪಿ ದರ ಏರಿಕೆಯಾಗುತ್ತಿದೆ, ಪಾಕಿಸ್ತಾನ ಮಗುಮ್ಮಾಗಿ ಕುಳಿತಿದೆ, ಗಡಿಯಲ್ಲಿ ಉಪಟಳ ಮಾಡಲು ಚೀನಾ ಹೆದರುತ್ತಿದೆ. ಭಾರತದ ಆರ್ಥಿಕ ಪ್ರಗತಿ ಚೀನಾವನ್ನೇ ಹಿಂದಿಕ್ಕಲಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿವೆ.

ಹೀಗಿದ್ದರೂ ದೇಶದಲ್ಲಿರುವ ಕೆಲವು ಅತೃಪ್ತ ಆತ್ಮಗಳು, ಚುನಾವಣೆ ಸೋತವರು, ನರೇಂದ್ರ ಮೋದಿ ಅವರ ಮುಖ ಕಂಡರೇನೇ ಆಗದವರು ದೇಶದಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುತ್ತಾರೆ. ಅಲ್ಪಸಂಖ್ಯಾತರು, ದಲಿತರಿಗೆ ರಕ್ಷಣೆ ಇಲ್ಲ ಎಂದು ಬೊಗಳೆ ಬಿಡುತ್ತಾರೆ.

ಆದರೆ ಉತ್ತರ ಪ್ರದೇಶದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿರುವ ಮುಖಂಡರೊಬ್ಬರು ಭಗವಾನ್ ಹನುಮಾನನಿಗೆ ಪೂಜೆ ಸಲ್ಲಿಸಿದ್ದಕ್ಕೇ, ಆತನಿಗೆ ನಮನ ಸಲ್ಲಿಸಿದ್ದಕ್ಕೇ ಇಸ್ಲಾಮಿಕ್ ಸಂಘಟನೆ ಫತ್ವಾ ಹೊರಡಿಸಿದೆ. ಆದರೂ ಯಾರೂ ಇದು ಅಸಹಿಷ್ಣುತೆ, ದೇವರು ಎಲ್ಲರಿಗೂ ಒಂದೇ, ಫತ್ವಾ ಹೊರಡಿಸಿದ್ದು ತಪ್ಪು ಎಂದು ಬಾಯಿಬಿಡುತ್ತಿಲ್ಲ. ಧರ್ಮ, ಜಾತಿ ನೋಡಿ ಆಕ್ರೋಶ ವ್ಯಕ್ತಪಡಿಸುವ ಇಂತಹ ಇಬ್ಬಂದಿತನದ ಬುದ್ಧಿಜೀವಿಗಳಿಂದಲೇ ಇಂದು ತಾತ್ವಿಕ ವಿಚಾರ ಮರೀಚಿಕೆಯಾಗಿದೆ ಎನಿಸುತ್ತಿದೆ.

ಹೌದು, ಬುಕ್ಕಾಲ್ ನವಾಬ್ ಎಂಬ ಬಿಜೆಪಿ ಎಂಎಲ್ಸಿ ಹಿಂದೂ ದೇವರಾದ ಹನುಮಾನನಿಗೆ ಪ್ರಾರ್ಥನೆ ಸಲ್ಲಿಸಿದ್ದಕ್ಕೆ ಉತ್ತರ ಪ್ರದೇಶದ ದರೂಲ್ ಉಲುಮ್ ಅಶರ್ಫಿಯಾ ಎಂಬ ಮದರಸಾದ ಮುಖ್ಯಸ್ಥ ಮೌಲಾನಾ ಸಾಲಿಂ ಅಶ್ರಫ್ ಖಾಸ್ಮಿ ಎಂಬಾತ ಬುಕ್ಕಾಲ್ ವಿರುದ್ಧ ಫತ್ವಾ ಹೊರಡಿಸಿದ್ದು, ಆತ ಈಗ ಮುಸ್ಲಿಮನೇ ಅಲ್ಲ ಎಂದು ಘೋಷಿಸಲಾಗಿದೆ.

ಅಷ್ಟೇ ಅಲ್ಲ, ಇಸ್ಲಾಮಿನಲ್ಲಿ ಹಿಂದೂ ದೇವರನ್ನು ಪೂಜಿಸುವುದು ನಿಷಿದ್ಧವಂತೆ. ಹಾಗಾಗಿ ಬುಕ್ಕಾಲ್ ಅವರನ್ನು ಇಸ್ಲಾಮಿನಿಂದ ಬಹಿಷ್ಕರಿಸಲಾಗಿದೆ ಎಂದು ಮಾರುದ್ದ ತಿಪ್ಪೆ ಸಾರಿದ್ದಾನೆ ಈ ಮೌಲ್ವಿ. ದೇವರು ಎಲ್ಲರಿಗೂ ಒಂದೇ, ರಾಮ-ರಹೀಮ ಒಂದೇ ಎಂದು ಬದುಕುತ್ತಿರುವ ಭಾರತದಲ್ಲಿ ಇಂತಹ ಕುತ್ಸಿತ ಮನಸ್ಸುಗಳು ಇದ್ದರೂ ಯಾವ ಬುದ್ಧಿ ಜೀವಿಯೂ, ಯಾವ ಪ್ರಕಾಶ್ ರೈ, ಪ್ರಗತಿಪರರೂ ಧ್ವನಿ ಎತ್ತುವುದಿಲ್ಲವಲ್ಲ, ಏನೆನ್ನಬೇಕು ಇವರಿಗೆ?

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search