• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಷಾ ವಿರುದ್ಧ ಷಡ್ಯಂತ್ರ ಮಾಡಿದವರಿಗೆ ಶಾಸ್ತಿ… ಲೋಯಾ ಸಾವಿನ ತನಿಖೆಯಿಲ್ಲ ಎಂದ ಕೋರ್ಟ್

TNN Correspondent Posted On April 20, 2018
0


0
Shares
  • Share On Facebook
  • Tweet It

ದೆಹಲಿ: ಶತಾಯಗತಾಯ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿರುವ ಪ್ರತಿಪಕ್ಷಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ವಿರುದ್ಧ ಹೂಡಿದ್ದ ಷಡ್ಯಂತ್ರಕ್ಕೆ ಕೋರ್ಟ್ ತಕ್ಕ ಉತ್ತರವನ್ನು ಆದೇಶ ಮೂಲಕವೇ ತಿಳಿಸಿದೆ. ಈ ಮೂಲಕ ಅಮಿತ್ ಷಾ ವಿರುದ್ಧ ಸೋಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ನ್ಯಾಯಾಧೀಶ ಎಚ್.ಬಿ.ಲೋಯಾ ಸಾವಿಗೆ ಸಂಬಂಧಿಸಿದಂತೆ ಯಾವುದೇ ತನಿಖೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೇ ರಾಜಕೀಯ ದುರುದ್ದೇಶವಿಟ್ಟುಕೊಂಡು ಪಿಐಎಲ್ ಸಲ್ಲಿಸಿದವರಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ರಾಜಕೀಯ ಹಿತಾಸಕ್ತಿ ಇಟ್ಟುಕೊಂಡು ಸುಪ್ರೀಂ ಕೋರ್ಟ್ ಗೆ ದೂರು ಸಲ್ಲಿಸಲಾಗಿದೆ. ಇದರಿಂದ ನ್ಯಾಯಾಂಗದ ಘನತೆಗೆ ಕುಂದು ಉಂಟಾಗುತ್ತಿದೆ. ಅಲ್ಲದೇ ನ್ಯಾಯಾಲಯದ ಸಮಯ ವ್ಯರ್ಥವಾಗುತ್ತಿದೆ. ವಿನಾಕಾರಣ ರಾಜಕೀಯ ಹಿತಾಸಕ್ತಿಗಾಗಿ ಅರ್ಜಿ ಸಲ್ಲಿಸಿದವರ ವಿರುದ್ಧ ನ್ಯಾಯಾಂಗ ನಿಂಧನೆ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಕೋರ್ಟ್ ಛೀಮಾರಿ ಹಾಕಿದೆ.

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ನ್ಯಾಯಾಧೀಶ ಎಚ್.ಬಿ.ಲೋಯಾ ಸಾವಿಗೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಸೇರಿ ಹಲವು ಬಿಜೆಪಿ ವಿರೋಧಿ ಶಕ್ತಿಗಳು ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದವು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯಲ್ಲಿ ರಾಜಕೀಯ ಹಿತಾಸಕ್ತಿಯಿದ್ದು, ಗೊತ್ತು ಗುರಿಯಿಲ್ಲದೇ ಆರೋಪಗಳನ್ನು ಮಾಡಲಾಗಿದೆ ಎಂದು ತರಾಟೆಗೆ ತೆಗೆದುಕೊಂಡಿತಲ್ಲದೇ ಯಾವುದೇ ತನಿಖೆ ಅವಶ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಅಮಿತ್ ಷಾ ವಿರುದ್ಧ ನಡೆಸುತ್ತಿದ್ದ ಷಡ್ಯಂತ್ರಕ್ಕೆ ಸುಪ್ರೀಂ ಕೋರ್ಟ್ ಕೊನೆ ಮೊಳೆ ಹೊಡೆದಿದೆ.

ಮಗನೇ ಕೊಲೆಯಲ್ಲ ಎಂದಿದ್ದ: ಜಸ್ಟಿಸ್ ಲೋಯಾ ಸಾವು ಸಹಜವಾಗಿದೆ. ನನ್ನ ತಂದೆಯ ಸಾವಿನಲ್ಲಿ ಯಾವುದೇ ರೀತಿಯ ಅನುಮಾನಗಳಿಲ್ಲ. ವಿನಾಕಾರಣ ತಂದೆಯ ಸಾವನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಡಿ ಎಂದು ಲೋಯಾ ಪುತ್ರ ಕೆಲ ದಿನಗಳ ಹಿಂದೆಯೇ ಸ್ಪಷ್ಟಪಡಿಸಿದ್ದರು. ಆದರೂ ವಿರೋಧ ಪಕ್ಷಗಳು ತನಿಖೆಗೆ ಆಗ್ರಹಿಸಿ, ಪೈಐಎಲ್ ಸಲ್ಲಿಸಿದ್ದವು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search