• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಂಗೀತಗಾರನೊಬ್ಬನಿಗೆ ಸಿಎಂ ಸಿದ್ದರಾಮಯ್ಯ ಸಂಬಂಧಿಕರು 1.5 ಲಕ್ಷ ರೂ, ವಂಚನೆ ಮಾಡಿದರೇ?

TNN Correspondent Posted On April 21, 2018
0


0
Shares
  • Share On Facebook
  • Tweet It

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣೆ ಪ್ರಚಾರದಲ್ಲಿ ಅಬ್ಬರವಾಗಿ ತೊಡಗಿದ್ದಾರೆ. ತಾವೊಬ್ಬ ಸಮಾಜವಾದಿ ಎಂದು ಹೇಳಿಕೊಳ್ಳುವ ಅವರು 750 ಕೆ.ಜಿ. ತೂಕದ ಸೇಬಿನ ಹಾರ ಹಾಕಿಕೊಂಡು ಪೋಸ್ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತವಿರೋಧಿ ಅಲೆಯಿದ್ದರೂ ಶತಾಯ-ಗತಾಯ ಗೆಲ್ಲಲು ಸಿಎಂ ಚಿಂತನೆ ನಡೆಸಿದ್ದಾರೆ.

ಆದರೆ ಇದೆಲ್ಲದರ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹತ್ತಿರದ ಸಂಬಂಧಿಯೊಬ್ಬರು ಬೆಂಗಳೂರಿನ ಸಂಗೀತಗಾರರೊಬ್ಬರಿಗೆ 1.50 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹೌದು, ಬೆಂಗಳೂರಿನ ಹನುಮಂತನಗರದಲ್ಲಿ ನೆಲೆಸಿರುವ ಸಂಗೀತಗಾರರಾದ ಶಿವಾನಂದ ಎಂಬುವವರ ಬಳಿ 2016ರಲ್ಲಿ ಬಂದ ಶ್ರೀ ಪಾತಾಳೇಶ್ವರ ಸಾಂಸ್ಕೃತಿಕ ಕಲಾ ಟ್ರಸ್ಟ್ ಎಂಬ ಸಂಸ್ಥೆ ಸಂಸ್ಥಾಪ ಹಾಗೂ ಸಂಗೀತಗಾರರೂ ಆಗಿರುವ ಬಸವರಾಜು ಎಂಬುವವರು ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯಿಂದ ಸಂಗೀತ ಕಾರ್ಯಕ್ರಮಕ್ಕಾಗಿ ಆರ್ಡರ್ ಬರುತ್ತವೆ. ಅದಕ್ಕಾಗಿ ನೀವು 1.50 ಲಕ್ಷ ರೂ, ನೀಡಬೇಕು ಎಂದು ತಿಳಿಸಿದ್ದಾರೆ.

ಇದಕ್ಕೆ ಒಪ್ಪಿದ ಶಿವಾನಂದ್ 1.50 ಲಕ್ಷ ರೂಪಾಯಿಯನ್ನು ಬಸವರಾಜು ಅವರಿಗೆ ನೀಡಿದ್ದಾರೆ. ಆದರೆ ಕೆಲವು ತಿಂಗಳಾದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆರ್ಡರ್ ಬರದೇ ಇರುವುದನ್ನು ಕಂಡ ಶಿವಾನಂದ್ ಬಸವರಾಜು ಅವರಿಗೆ ಕರೆ ಮಾಡಿದ್ದಾರೆ. ಇದಕ್ಕೆ ಬಸವರಾಜು ಪ್ರತಿಕ್ರಿಯೆ ನೀಡಿಲ್ಲ ಎಂದು ಶಿವಾನಂದ್ ದೂರಿದ್ದಾರೆ.

ಕೊನಗೆ ಇದರಿಂದ ಬೇಸತ್ತ ಶಿವಾನಂದ್ ಈಗ ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯದ ಪ್ರಕರಣವನ್ನು ತನಿಖೆ ಮಾಡಬೇಕು ಎಂದು ಸೂಚಿಸಿದೆ.

ಅಷ್ಟೇ ಅಲ್ಲ, 2017ರಲ್ಲಿ ಶಿವಾನಂದ್ ಅವರು ಬಸವರಾಜ್ ಅವರನ್ನು ಭೇಟಿ ಮಾಡಿ ಹಣ ನೀಡುವಂತೆ ಕೇಳಿದರೆ, ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ಬಳಿಕ ಅವರ ಸ್ಮರಣಾರ್ಥವಾಗಿ ಕಾರ್ಯಕ್ರಮ ಆಯೋಜಿಸಿ, ಬಡವರಿಗೆ ಪುಸ್ತಕ ಪೆನ್ನು ನೀಡಲು ಆ ಹಣ ಉಪಯೋಗಿಸಲಾಗಿದೆ ಎಂದು ಬಸವರಾಜು ತಿಳಿಸಿರುವುದಾಗಿ ಶಿವಾನಂದ ದೂರಿದ್ದಾರೆ.

ಒಟ್ಟಿನಲ್ಲಿ ಚುನಾವಣೆ ಹೊಸ್ತಿಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಂಬಂಧಿಕರೊಬ್ಬರು ಸಂಗೀತಗಾರನಿಗೆ ಒಂದೂವರೆ ಲಕ್ಷ ರೂಪಾಯಿ ಮೋಸ ಮಾಡಿರುವ ಪ್ರಕರಣ ಹೊರಬಿದ್ದಿದ್ದು ಸಿದ್ದರಾಮಯ್ಯನವರಿಗೆ ಹಿನ್ನಡೆ ತಂದಿದೆ. ಆದರೆ ಈ ಕುರಿತು ಸಿಎಂ ಹೇಗೆ ಪ್ರತಿಕ್ರಿಯಿಸುತ್ತಾರೋ?

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search