• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ನಡಿಯಿತೇ ನಕಲಿ ತನಿಖೆ?

TNN Correspondent Posted On April 21, 2018
0


0
Shares
  • Share On Facebook
  • Tweet It

ಮುಂಬೈ: 2008ರ ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ತರ ವಿಷಯವೊಂದು ಬಹಿರಂಗವಾಗಿದ್ದು, ಪ್ರಕರಣದಲ್ಲಿ ಹಿಂದೂ ಸಂಘಟನೆಯ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅವರನ್ನು ಪ್ರಕರಣದಲ್ಲಿ ಸಿಕ್ಕಿಹಾಕಿಸಲು ಷಡ್ಯಂತ್ರ ನಡೆದಿದೆ ಎಂಬ ಕುರಿತು ಅನುಮಾನಗಳು ಮೂಡುವಂತಾಗಿದೆ.

ಈ ಕುರಿತು ಪ್ರಕರಣದ ತನಿಖಾ ತಂಡದಲ್ಲಿದ್ದ ಅಧಿಕಾರಿಯಾಗಿದ್ದ ಮೆಹಬೂಬ್ ಅಬ್ದುಲ್ ಕರೀಮ್ ಮುಜಾವರ್ ಮಹತ್ವದ ಮಾಹಿತಿ ನೀಡಿದ್ದು, ಮಾಲೇಗಾಂವ್ ಸ್ಫೋಟ ಪ್ರಕರಣ ತನಿಖೆಯೇ ನಕಲಿ ಎನ್ನುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಪುರೋಹಿತ್ ಅವರನ್ನು ತಪ್ಪಿತಸ್ಥರು ಎಂದು ಸಾಬೀತುಪಡಿಸಲು ತನಿಖೆಯ ಹಾದಿಯನ್ನೇ ಪೊಲೀಸ್ ಅಧಿಕಾರಿಗಳು ಬದಲಿಸಿದ್ದಾರೆ. ಅಲ್ಲದೆ ಸ್ಫೋಟದ ಪ್ರಮುಖ ಆರೋಪಿಗಳಾದ ಸಂದೀಪ್ ದಾಂಗೆ ಹಾಗೂ ರಾಮ್‌ಜೀ ಕಾಲ್ಸಂಗ್ರೆ ಅವರನ್ನು ಎಟಿಎಸ್ ಅಧಿಕಾರಿಗಳು ಎನ್ ಕೌಂಟರ್ ಮಾಡಿ ಬಿಸಾಕಿದ್ದಾರೆ ಎಂದು ವಿವರಿಸಿದ್ದಾರೆ.

ಇದರ ಜತೆಗೆ ಪ್ರಕರಣ ಹಳ್ಳ ಹಿಡಿಸುವ ದಿಸೆಯಲ್ಲಿ ತನಿಖೆ ಕೈಗೊಂಡಿದ್ದು ಹಾಗೂ ಪ್ರಕರಣದ ಆರೋಪಿಗಳನ್ನು ಹತ್ಯೆ ಮಾಡಿರುವ ಕುರಿತು ಸಂಪೂರ್ಣ ದಾಖಲೆ ನನ್ನ ಬಳಿ ಇದ್ದು, ಶೀಘ್ರದಲ್ಲೇ ಸೋಲಾಪುರ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರಿಗೆ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಲೇಗಾಂವ್ ಎಂಬಲ್ಲಿ 2008ರ ಸೆಪ್ಟೆಂಬರ್ 29ರಂದು ಬಾಂಬ್ ನಡೆಸಿದ ಬಾಂಬ್ ದಾಳಿಯಲ್ಲಿ 6 ಜನ ಮೃತಪಟ್ಟು, ನೂರಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಆದಾಗ್ಯೂ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಹಿಂದೂ ಭಯೋತ್ಪಾದನೆ ಇದೆ ಎಂದು ದೇಶಾದ್ಯಂತ ಬೊಬ್ಬೆ ಹಾಕಲಾಗಿತ್ತು.

ಆದರೆ ಎಟಿಎಸ್ ಅಧಿಕಾರಿಯೇ ತನಿಖೆಯನ್ನು ಹಳ್ಳ ಹಿಡಿಸಲಾಗಿದೆ ಎಂದು ತಿಳಿಸಿರುವುದು ಅಂದಿನ ಯುಪಿಎ ಸರ್ಕಾರದ ಮೇಲೂ ಅನುಮಾನ ಮೂಡುವಂತಾಗಿದೆ.

 

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search