• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ನಡಿಯಿತೇ ನಕಲಿ ತನಿಖೆ?

TNN Correspondent Posted On April 21, 2018
0


0
Shares
  • Share On Facebook
  • Tweet It

ಮುಂಬೈ: 2008ರ ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ತರ ವಿಷಯವೊಂದು ಬಹಿರಂಗವಾಗಿದ್ದು, ಪ್ರಕರಣದಲ್ಲಿ ಹಿಂದೂ ಸಂಘಟನೆಯ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅವರನ್ನು ಪ್ರಕರಣದಲ್ಲಿ ಸಿಕ್ಕಿಹಾಕಿಸಲು ಷಡ್ಯಂತ್ರ ನಡೆದಿದೆ ಎಂಬ ಕುರಿತು ಅನುಮಾನಗಳು ಮೂಡುವಂತಾಗಿದೆ.

ಈ ಕುರಿತು ಪ್ರಕರಣದ ತನಿಖಾ ತಂಡದಲ್ಲಿದ್ದ ಅಧಿಕಾರಿಯಾಗಿದ್ದ ಮೆಹಬೂಬ್ ಅಬ್ದುಲ್ ಕರೀಮ್ ಮುಜಾವರ್ ಮಹತ್ವದ ಮಾಹಿತಿ ನೀಡಿದ್ದು, ಮಾಲೇಗಾಂವ್ ಸ್ಫೋಟ ಪ್ರಕರಣ ತನಿಖೆಯೇ ನಕಲಿ ಎನ್ನುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಪುರೋಹಿತ್ ಅವರನ್ನು ತಪ್ಪಿತಸ್ಥರು ಎಂದು ಸಾಬೀತುಪಡಿಸಲು ತನಿಖೆಯ ಹಾದಿಯನ್ನೇ ಪೊಲೀಸ್ ಅಧಿಕಾರಿಗಳು ಬದಲಿಸಿದ್ದಾರೆ. ಅಲ್ಲದೆ ಸ್ಫೋಟದ ಪ್ರಮುಖ ಆರೋಪಿಗಳಾದ ಸಂದೀಪ್ ದಾಂಗೆ ಹಾಗೂ ರಾಮ್‌ಜೀ ಕಾಲ್ಸಂಗ್ರೆ ಅವರನ್ನು ಎಟಿಎಸ್ ಅಧಿಕಾರಿಗಳು ಎನ್ ಕೌಂಟರ್ ಮಾಡಿ ಬಿಸಾಕಿದ್ದಾರೆ ಎಂದು ವಿವರಿಸಿದ್ದಾರೆ.

ಇದರ ಜತೆಗೆ ಪ್ರಕರಣ ಹಳ್ಳ ಹಿಡಿಸುವ ದಿಸೆಯಲ್ಲಿ ತನಿಖೆ ಕೈಗೊಂಡಿದ್ದು ಹಾಗೂ ಪ್ರಕರಣದ ಆರೋಪಿಗಳನ್ನು ಹತ್ಯೆ ಮಾಡಿರುವ ಕುರಿತು ಸಂಪೂರ್ಣ ದಾಖಲೆ ನನ್ನ ಬಳಿ ಇದ್ದು, ಶೀಘ್ರದಲ್ಲೇ ಸೋಲಾಪುರ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರಿಗೆ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಲೇಗಾಂವ್ ಎಂಬಲ್ಲಿ 2008ರ ಸೆಪ್ಟೆಂಬರ್ 29ರಂದು ಬಾಂಬ್ ನಡೆಸಿದ ಬಾಂಬ್ ದಾಳಿಯಲ್ಲಿ 6 ಜನ ಮೃತಪಟ್ಟು, ನೂರಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಆದಾಗ್ಯೂ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಹಿಂದೂ ಭಯೋತ್ಪಾದನೆ ಇದೆ ಎಂದು ದೇಶಾದ್ಯಂತ ಬೊಬ್ಬೆ ಹಾಕಲಾಗಿತ್ತು.

ಆದರೆ ಎಟಿಎಸ್ ಅಧಿಕಾರಿಯೇ ತನಿಖೆಯನ್ನು ಹಳ್ಳ ಹಿಡಿಸಲಾಗಿದೆ ಎಂದು ತಿಳಿಸಿರುವುದು ಅಂದಿನ ಯುಪಿಎ ಸರ್ಕಾರದ ಮೇಲೂ ಅನುಮಾನ ಮೂಡುವಂತಾಗಿದೆ.

 

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search