• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ನಡಿಯಿತೇ ನಕಲಿ ತನಿಖೆ?

TNN Correspondent Posted On April 21, 2018
0


0
Shares
  • Share On Facebook
  • Tweet It

ಮುಂಬೈ: 2008ರ ಮಾಲೇಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ತರ ವಿಷಯವೊಂದು ಬಹಿರಂಗವಾಗಿದ್ದು, ಪ್ರಕರಣದಲ್ಲಿ ಹಿಂದೂ ಸಂಘಟನೆಯ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅವರನ್ನು ಪ್ರಕರಣದಲ್ಲಿ ಸಿಕ್ಕಿಹಾಕಿಸಲು ಷಡ್ಯಂತ್ರ ನಡೆದಿದೆ ಎಂಬ ಕುರಿತು ಅನುಮಾನಗಳು ಮೂಡುವಂತಾಗಿದೆ.

ಈ ಕುರಿತು ಪ್ರಕರಣದ ತನಿಖಾ ತಂಡದಲ್ಲಿದ್ದ ಅಧಿಕಾರಿಯಾಗಿದ್ದ ಮೆಹಬೂಬ್ ಅಬ್ದುಲ್ ಕರೀಮ್ ಮುಜಾವರ್ ಮಹತ್ವದ ಮಾಹಿತಿ ನೀಡಿದ್ದು, ಮಾಲೇಗಾಂವ್ ಸ್ಫೋಟ ಪ್ರಕರಣ ತನಿಖೆಯೇ ನಕಲಿ ಎನ್ನುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ಪುರೋಹಿತ್ ಅವರನ್ನು ತಪ್ಪಿತಸ್ಥರು ಎಂದು ಸಾಬೀತುಪಡಿಸಲು ತನಿಖೆಯ ಹಾದಿಯನ್ನೇ ಪೊಲೀಸ್ ಅಧಿಕಾರಿಗಳು ಬದಲಿಸಿದ್ದಾರೆ. ಅಲ್ಲದೆ ಸ್ಫೋಟದ ಪ್ರಮುಖ ಆರೋಪಿಗಳಾದ ಸಂದೀಪ್ ದಾಂಗೆ ಹಾಗೂ ರಾಮ್‌ಜೀ ಕಾಲ್ಸಂಗ್ರೆ ಅವರನ್ನು ಎಟಿಎಸ್ ಅಧಿಕಾರಿಗಳು ಎನ್ ಕೌಂಟರ್ ಮಾಡಿ ಬಿಸಾಕಿದ್ದಾರೆ ಎಂದು ವಿವರಿಸಿದ್ದಾರೆ.

ಇದರ ಜತೆಗೆ ಪ್ರಕರಣ ಹಳ್ಳ ಹಿಡಿಸುವ ದಿಸೆಯಲ್ಲಿ ತನಿಖೆ ಕೈಗೊಂಡಿದ್ದು ಹಾಗೂ ಪ್ರಕರಣದ ಆರೋಪಿಗಳನ್ನು ಹತ್ಯೆ ಮಾಡಿರುವ ಕುರಿತು ಸಂಪೂರ್ಣ ದಾಖಲೆ ನನ್ನ ಬಳಿ ಇದ್ದು, ಶೀಘ್ರದಲ್ಲೇ ಸೋಲಾಪುರ ಚೀಫ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರಿಗೆ ಸಲ್ಲಿಕೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಲೇಗಾಂವ್ ಎಂಬಲ್ಲಿ 2008ರ ಸೆಪ್ಟೆಂಬರ್ 29ರಂದು ಬಾಂಬ್ ನಡೆಸಿದ ಬಾಂಬ್ ದಾಳಿಯಲ್ಲಿ 6 ಜನ ಮೃತಪಟ್ಟು, ನೂರಕ್ಕೂ ಅಧಿಕ ಜನ ಗಾಯಗೊಂಡಿದ್ದರು. ಆದಾಗ್ಯೂ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಹಿಂದೂ ಭಯೋತ್ಪಾದನೆ ಇದೆ ಎಂದು ದೇಶಾದ್ಯಂತ ಬೊಬ್ಬೆ ಹಾಕಲಾಗಿತ್ತು.

ಆದರೆ ಎಟಿಎಸ್ ಅಧಿಕಾರಿಯೇ ತನಿಖೆಯನ್ನು ಹಳ್ಳ ಹಿಡಿಸಲಾಗಿದೆ ಎಂದು ತಿಳಿಸಿರುವುದು ಅಂದಿನ ಯುಪಿಎ ಸರ್ಕಾರದ ಮೇಲೂ ಅನುಮಾನ ಮೂಡುವಂತಾಗಿದೆ.

 

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search