• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಮಾತಾಡಲ್ಲ ಮಾತಾಡಲ್ಲ ಅಂದರು, ಆದರೆ ಅವರು ಮಾಡಿಯೇ ತೋರಿಸಿದರಲ್ಲ!

TNN Correspondent Posted On April 22, 2018
0


0
Shares
  • Share On Facebook
  • Tweet It

ಅದು ಕಠುವಾದ ಬಾಲಕಿ ಮೇಲೆ ನಡೆದ ಅತ್ಯಾಚಾರವೇ ಇರಬಹುದು. ಉನ್ನಾವೋ ಎಂಬಲ್ಲಿ ನಡೆದ ಅತ್ಯಾಚಾರದ ಪ್ರಕರಣವೇ ಇರಬಹುದು. ಈ ಎರಡೂ ಪ್ರಕರಣಗಳೂ ಖಂಡನೀಯ ಹಾಗೂ ಆರೋಪಿಗಳನ್ನು ಹಿಡಿದು ಗಲ್ಲಿಗೆ ಏರಿಸಿದರೂ ಅಡ್ಡಿಯಿಲ್ಲ.

ಆದರೆ ಈ ಪ್ರಕರಣವನ್ನೇ ರಾಜಕೀಯವಾಗಿ ಬಳಿಸಿಕೊಂಡ ಪ್ರತಿಪಕ್ಷಗಳು, ಬುದ್ಧಿಜೀವಿಗಳು, ಪ್ರಗತಿಪರರು ದೇಶದ ತುಂಬ ಬೊಬ್ಬೆ ಹಾಕಿದರು. ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟಕಟೆಗೆ ಎಳೆದು ತಂದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕರಣದಲ್ಲಿ ಮಾತೇ ಆಡುತ್ತಿಲ್ಲ, ಅತ್ಯಾಚಾರ ನಡೆದರೂ ಬಾಯಿಬಿಡದ ಮೋದಿ ಮೌನ ತಾಳಿದ್ದಾರೆ. ಇಲ್ಲಿ ಅತ್ಯಾಚಾರ ನಡೆದರೂ ಮೋದಿ ವಿದೇಶಕ್ಕೆ ಹೋಗಿದ್ದಾರೆ ಎಂದೆಲ್ಲ ಘೀಳಿಟ್ಟರು.

ಆದರೆ ಭಾರತಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದ್ದಾರೆ. ಹೌದು, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಅಷ್ಟೇ ಅಲ್ಲ 16 ವರ್ಷ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಜೀವಾವಧಿ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

ಆದರೆ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದಾಗ ದೆಹಲಿ ಎಂದರೆ ರೇಪ್ ಕ್ಯಾಪಿಟಲ್ ಎಂದೇ ಹೆಸರಲಾಗಿತ್ತು. ಇಂದಿಗೂ ದೆಹಲಿ ಅತ್ಯಾಚಾರ ಪ್ರಕರಣಗಳಿಗೆ ಸುದ್ದಿಯಾಗುತ್ತಿದೆ. ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರತವನ್ನು ವಿಶ್ವಮಟ್ಟದಲ್ಲಿ ಸಕಾರಾತ್ಮವಾಗಿ ಸುದ್ದಿಯಾಗುವಂತೆ ಮಾಡಿತು.

ಇಷ್ಟಾದರೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ತರಲು ಚಿಂತಿಸದ ಇದೇ ಕಾಂಗ್ರೆಸ್, ಕಳೆದ ಮೂರು ಅವಧಿಯಿಂದ ಸಂಸದರಾಗಿರುವ ರಾಹುಲ್ ಗಾಂಧಿ ಸೊಲ್ಲೆತ್ತಲಿಲ್ಲ. ಆದರೆ ಉನ್ನಾವೋ, ಕಠುವಾ ಪ್ರಕರಣ ಇಟ್ಟುಕೊಂಡು ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಆದರೆ ನರೇಂದ್ರ ಮೋದಿ ಅವರು ಈಗ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾಯಿದೆ ತರಲು ಮುಂದಾಗಿದ್ದಾರೆ. ಒಬ್ಬ ನಾಯಕನ ವೇಗದ ನಿರ್ಧಾರ ಎಂದರೆ ಅದು ನರೇಂದ್ರ ಮೋದಿ ಅವರಿಂದ ಕಲಿಯಬೇಕು. ಇನ್ನಾದರೂ ಅತ್ಯಾಚಾರ ಪ್ರಕರಣ ನಿಲ್ಲಲಿ ಎಂಬುದೇ ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search