• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಮಾತಾಡಲ್ಲ ಮಾತಾಡಲ್ಲ ಅಂದರು, ಆದರೆ ಅವರು ಮಾಡಿಯೇ ತೋರಿಸಿದರಲ್ಲ!

TNN Correspondent Posted On April 22, 2018
0


0
Shares
  • Share On Facebook
  • Tweet It

ಅದು ಕಠುವಾದ ಬಾಲಕಿ ಮೇಲೆ ನಡೆದ ಅತ್ಯಾಚಾರವೇ ಇರಬಹುದು. ಉನ್ನಾವೋ ಎಂಬಲ್ಲಿ ನಡೆದ ಅತ್ಯಾಚಾರದ ಪ್ರಕರಣವೇ ಇರಬಹುದು. ಈ ಎರಡೂ ಪ್ರಕರಣಗಳೂ ಖಂಡನೀಯ ಹಾಗೂ ಆರೋಪಿಗಳನ್ನು ಹಿಡಿದು ಗಲ್ಲಿಗೆ ಏರಿಸಿದರೂ ಅಡ್ಡಿಯಿಲ್ಲ.

ಆದರೆ ಈ ಪ್ರಕರಣವನ್ನೇ ರಾಜಕೀಯವಾಗಿ ಬಳಿಸಿಕೊಂಡ ಪ್ರತಿಪಕ್ಷಗಳು, ಬುದ್ಧಿಜೀವಿಗಳು, ಪ್ರಗತಿಪರರು ದೇಶದ ತುಂಬ ಬೊಬ್ಬೆ ಹಾಕಿದರು. ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟಕಟೆಗೆ ಎಳೆದು ತಂದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕರಣದಲ್ಲಿ ಮಾತೇ ಆಡುತ್ತಿಲ್ಲ, ಅತ್ಯಾಚಾರ ನಡೆದರೂ ಬಾಯಿಬಿಡದ ಮೋದಿ ಮೌನ ತಾಳಿದ್ದಾರೆ. ಇಲ್ಲಿ ಅತ್ಯಾಚಾರ ನಡೆದರೂ ಮೋದಿ ವಿದೇಶಕ್ಕೆ ಹೋಗಿದ್ದಾರೆ ಎಂದೆಲ್ಲ ಘೀಳಿಟ್ಟರು.

ಆದರೆ ಭಾರತಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದ್ದಾರೆ. ಹೌದು, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಅಷ್ಟೇ ಅಲ್ಲ 16 ವರ್ಷ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಜೀವಾವಧಿ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

ಆದರೆ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದಾಗ ದೆಹಲಿ ಎಂದರೆ ರೇಪ್ ಕ್ಯಾಪಿಟಲ್ ಎಂದೇ ಹೆಸರಲಾಗಿತ್ತು. ಇಂದಿಗೂ ದೆಹಲಿ ಅತ್ಯಾಚಾರ ಪ್ರಕರಣಗಳಿಗೆ ಸುದ್ದಿಯಾಗುತ್ತಿದೆ. ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರತವನ್ನು ವಿಶ್ವಮಟ್ಟದಲ್ಲಿ ಸಕಾರಾತ್ಮವಾಗಿ ಸುದ್ದಿಯಾಗುವಂತೆ ಮಾಡಿತು.

ಇಷ್ಟಾದರೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ತರಲು ಚಿಂತಿಸದ ಇದೇ ಕಾಂಗ್ರೆಸ್, ಕಳೆದ ಮೂರು ಅವಧಿಯಿಂದ ಸಂಸದರಾಗಿರುವ ರಾಹುಲ್ ಗಾಂಧಿ ಸೊಲ್ಲೆತ್ತಲಿಲ್ಲ. ಆದರೆ ಉನ್ನಾವೋ, ಕಠುವಾ ಪ್ರಕರಣ ಇಟ್ಟುಕೊಂಡು ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಆದರೆ ನರೇಂದ್ರ ಮೋದಿ ಅವರು ಈಗ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾಯಿದೆ ತರಲು ಮುಂದಾಗಿದ್ದಾರೆ. ಒಬ್ಬ ನಾಯಕನ ವೇಗದ ನಿರ್ಧಾರ ಎಂದರೆ ಅದು ನರೇಂದ್ರ ಮೋದಿ ಅವರಿಂದ ಕಲಿಯಬೇಕು. ಇನ್ನಾದರೂ ಅತ್ಯಾಚಾರ ಪ್ರಕರಣ ನಿಲ್ಲಲಿ ಎಂಬುದೇ ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search