• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಅವರು ಮಾತಾಡಲ್ಲ ಮಾತಾಡಲ್ಲ ಅಂದರು, ಆದರೆ ಅವರು ಮಾಡಿಯೇ ತೋರಿಸಿದರಲ್ಲ!

TNN Correspondent Posted On April 22, 2018
0


0
Shares
  • Share On Facebook
  • Tweet It

ಅದು ಕಠುವಾದ ಬಾಲಕಿ ಮೇಲೆ ನಡೆದ ಅತ್ಯಾಚಾರವೇ ಇರಬಹುದು. ಉನ್ನಾವೋ ಎಂಬಲ್ಲಿ ನಡೆದ ಅತ್ಯಾಚಾರದ ಪ್ರಕರಣವೇ ಇರಬಹುದು. ಈ ಎರಡೂ ಪ್ರಕರಣಗಳೂ ಖಂಡನೀಯ ಹಾಗೂ ಆರೋಪಿಗಳನ್ನು ಹಿಡಿದು ಗಲ್ಲಿಗೆ ಏರಿಸಿದರೂ ಅಡ್ಡಿಯಿಲ್ಲ.

ಆದರೆ ಈ ಪ್ರಕರಣವನ್ನೇ ರಾಜಕೀಯವಾಗಿ ಬಳಿಸಿಕೊಂಡ ಪ್ರತಿಪಕ್ಷಗಳು, ಬುದ್ಧಿಜೀವಿಗಳು, ಪ್ರಗತಿಪರರು ದೇಶದ ತುಂಬ ಬೊಬ್ಬೆ ಹಾಕಿದರು. ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟಕಟೆಗೆ ಎಳೆದು ತಂದರು. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕರಣದಲ್ಲಿ ಮಾತೇ ಆಡುತ್ತಿಲ್ಲ, ಅತ್ಯಾಚಾರ ನಡೆದರೂ ಬಾಯಿಬಿಡದ ಮೋದಿ ಮೌನ ತಾಳಿದ್ದಾರೆ. ಇಲ್ಲಿ ಅತ್ಯಾಚಾರ ನಡೆದರೂ ಮೋದಿ ವಿದೇಶಕ್ಕೆ ಹೋಗಿದ್ದಾರೆ ಎಂದೆಲ್ಲ ಘೀಳಿಟ್ಟರು.

ಆದರೆ ಭಾರತಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತಂದಿದ್ದಾರೆ. ಹೌದು, 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ತರಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಅಷ್ಟೇ ಅಲ್ಲ 16 ವರ್ಷ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಜೀವಾವಧಿ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ.

ಆದರೆ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದ್ದಾಗ ದೆಹಲಿ ಎಂದರೆ ರೇಪ್ ಕ್ಯಾಪಿಟಲ್ ಎಂದೇ ಹೆಸರಲಾಗಿತ್ತು. ಇಂದಿಗೂ ದೆಹಲಿ ಅತ್ಯಾಚಾರ ಪ್ರಕರಣಗಳಿಗೆ ಸುದ್ದಿಯಾಗುತ್ತಿದೆ. ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭಾರತವನ್ನು ವಿಶ್ವಮಟ್ಟದಲ್ಲಿ ಸಕಾರಾತ್ಮವಾಗಿ ಸುದ್ದಿಯಾಗುವಂತೆ ಮಾಡಿತು.

ಇಷ್ಟಾದರೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ತರಲು ಚಿಂತಿಸದ ಇದೇ ಕಾಂಗ್ರೆಸ್, ಕಳೆದ ಮೂರು ಅವಧಿಯಿಂದ ಸಂಸದರಾಗಿರುವ ರಾಹುಲ್ ಗಾಂಧಿ ಸೊಲ್ಲೆತ್ತಲಿಲ್ಲ. ಆದರೆ ಉನ್ನಾವೋ, ಕಠುವಾ ಪ್ರಕರಣ ಇಟ್ಟುಕೊಂಡು ನರೇಂದ್ರ ಮೋದಿ ಅವರನ್ನು ಟೀಕಿಸಿದರು. ಆದರೆ ನರೇಂದ್ರ ಮೋದಿ ಅವರು ಈಗ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾಯಿದೆ ತರಲು ಮುಂದಾಗಿದ್ದಾರೆ. ಒಬ್ಬ ನಾಯಕನ ವೇಗದ ನಿರ್ಧಾರ ಎಂದರೆ ಅದು ನರೇಂದ್ರ ಮೋದಿ ಅವರಿಂದ ಕಲಿಯಬೇಕು. ಇನ್ನಾದರೂ ಅತ್ಯಾಚಾರ ಪ್ರಕರಣ ನಿಲ್ಲಲಿ ಎಂಬುದೇ ನಮ್ಮ ಆಶಯ.

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search