• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಪುರಾತನ ಶಿಕ್ಷಣ ಪದ್ಧತಿಗೆ ಜಾಗತಿಕ ಸಮಸ್ಯೆ ಬಗೆಹರಿಸುವ ಶಕ್ತಿ ಇದೆ ಎಂದಿದ್ದು ಯಾರು ಗೊತ್ತೇ?

TNN Correspondent Posted On April 23, 2018
0


0
Shares
  • Share On Facebook
  • Tweet It

ನವದೆಹಲಿ: ಭಾರತೀಯ ಸಂಸ್ಕೃತಿ, ಆಚಾರ, ವಿಚಾರ, ನಡೆ-ನುಡಿ, ಉಡುಗೆ-ತೊಡುಗೆ, ಜ್ಞಾನ ಸಂಪತ್ತು ಎಂದರೆ ಇಡೀ ವಿಶ್ವವೇ ತಲೆದೂಗುತ್ತದೆ. ಮೆಚ್ಚುಗೆಯ ಮಾತು ಕೇಳಿಬರುತ್ತವೆ. ಆದರೂ ಭಾರತದಲ್ಲಿರುವ ಕೆಲವು ಕುತ್ಸಿತ ಮನಸ್ಸುಗಳು ನಮ್ಮ ದೇಶದ ವಿರುದ್ಧವೇ ಮಾತನಾಡುತ್ತವೆ ಎಂಬುದೇ ಬೇಸರ.

ಆದರೇನಂತೆ, ಇತಿಹಾಸದ ಆರಂಭದ ದಿನಗಳಿಂದಲೇ ಭಾರತದ ಮೇಲೆ, ಭಾರತೀಯತೆಯ ಮೇಲೆ ಹಲವರು ದಾಳಿ ಮಾಡಿದರೂ ನಮ್ಮ ಖ್ಯಾತಿಯನ್ನು, ಸತ್ವಯುತ ವಿಚಾರ, ನಡೆ-ನುಡಿಯನ್ನು ಯಾರೂ ಅಲ್ಲಾಡಿಸಲು ಆಗಿಲ್ಲ.

ಇಂತಹ ಶ್ರೀಮಂತ ಸಂಸ್ಕೃತಿಯ ಹೆಗ್ಗಳಿಕೆಗೆ ಮುಕುಟವಿಟ್ಟಂತೆ ಟಿಬೆಟಿಯನ್ ಬೌದ್ಧ ಧರ್ಮ ಗುರು ದಲಾಯಿ ಲಾಮಾ ಮಾತನಾಡಿದ್ದು, ಭಾರತದ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಪುರಾತನ ಶಿಕ್ಷಣ ಪದ್ಧತಿಯ ಅಂಶಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪುರಾತನ ಭಾರತೀಯ ಶಿಕ್ಷಣದ ಹೆಗ್ಗಳಿಕೆ ಬಗ್ಗೆ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ಜರೂರಾಗಿ ಭಾರತದ ಉನ್ನತ ಶಿಕ್ಷಣ ಪದ್ಧತಿಗೆ ಪುರಾತನ ಗುರುಕುಲ ಶಿಕ್ಷಣ ಪದ್ಧತಿಯ ಹಲವು ಅಂಶಗಳನ್ನು ಸೇರಿಸಬೇಕು. ಶೈಕ್ಷಣಿಕ ಪದ್ಧತಿಯ ಸುಧಾರಣೆಯ ಜತೆಗೆ ಜಾಗತಿಕ ತಾಪಮಾನ ಏರಿಕೆ ಹಾಗೂ ಯುದ್ಧಗಳ ವಿರುದ್ಧ ನಾವು ಮಾಡುತ್ತಿರುವ ಹೋರಾಟಕ್ಕೆ ಭಾರತದ ಪುರಾತನ ಶೈಕ್ಷಣಿಕ ಪದ್ಧತಿ ಸಹಕಾರಿಯಾಗುತ್ತದೆ ಎಂದು ದಲಾಯಿ ಹೇಳಿದ್ದಾರೆ.

ಜಾಗತಿಕ ಶಾಂತಿ ಮತ್ತು ಸೌಹಾರ್ದ ಸೃಷ್ಟಿಸುವಲ್ಲಿ ನೈತಿಕತೆ ಮತ್ತು ಸಂಸ್ಕೃತಿಯ ಪಾತ್ರ ಎಂಬ ಕುರಿತು ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಜಾಗತಿಕವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿ ಭಾರತದ ಪುರಾತನ ಶೈಕ್ಷಣಿಕ ಪದ್ಧತಿಗಿದೆ. ಅದರಲ್ಲಿ ಅಡಗಿರುವ ಮೌಲ್ಯಗಳಿಂದ ಹೀಗೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search