• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಪುರಾತನ ಶಿಕ್ಷಣ ಪದ್ಧತಿಗೆ ಜಾಗತಿಕ ಸಮಸ್ಯೆ ಬಗೆಹರಿಸುವ ಶಕ್ತಿ ಇದೆ ಎಂದಿದ್ದು ಯಾರು ಗೊತ್ತೇ?

TNN Correspondent Posted On April 23, 2018
0


0
Shares
  • Share On Facebook
  • Tweet It

ನವದೆಹಲಿ: ಭಾರತೀಯ ಸಂಸ್ಕೃತಿ, ಆಚಾರ, ವಿಚಾರ, ನಡೆ-ನುಡಿ, ಉಡುಗೆ-ತೊಡುಗೆ, ಜ್ಞಾನ ಸಂಪತ್ತು ಎಂದರೆ ಇಡೀ ವಿಶ್ವವೇ ತಲೆದೂಗುತ್ತದೆ. ಮೆಚ್ಚುಗೆಯ ಮಾತು ಕೇಳಿಬರುತ್ತವೆ. ಆದರೂ ಭಾರತದಲ್ಲಿರುವ ಕೆಲವು ಕುತ್ಸಿತ ಮನಸ್ಸುಗಳು ನಮ್ಮ ದೇಶದ ವಿರುದ್ಧವೇ ಮಾತನಾಡುತ್ತವೆ ಎಂಬುದೇ ಬೇಸರ.

ಆದರೇನಂತೆ, ಇತಿಹಾಸದ ಆರಂಭದ ದಿನಗಳಿಂದಲೇ ಭಾರತದ ಮೇಲೆ, ಭಾರತೀಯತೆಯ ಮೇಲೆ ಹಲವರು ದಾಳಿ ಮಾಡಿದರೂ ನಮ್ಮ ಖ್ಯಾತಿಯನ್ನು, ಸತ್ವಯುತ ವಿಚಾರ, ನಡೆ-ನುಡಿಯನ್ನು ಯಾರೂ ಅಲ್ಲಾಡಿಸಲು ಆಗಿಲ್ಲ.

ಇಂತಹ ಶ್ರೀಮಂತ ಸಂಸ್ಕೃತಿಯ ಹೆಗ್ಗಳಿಕೆಗೆ ಮುಕುಟವಿಟ್ಟಂತೆ ಟಿಬೆಟಿಯನ್ ಬೌದ್ಧ ಧರ್ಮ ಗುರು ದಲಾಯಿ ಲಾಮಾ ಮಾತನಾಡಿದ್ದು, ಭಾರತದ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಪುರಾತನ ಶಿಕ್ಷಣ ಪದ್ಧತಿಯ ಅಂಶಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪುರಾತನ ಭಾರತೀಯ ಶಿಕ್ಷಣದ ಹೆಗ್ಗಳಿಕೆ ಬಗ್ಗೆ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ಜರೂರಾಗಿ ಭಾರತದ ಉನ್ನತ ಶಿಕ್ಷಣ ಪದ್ಧತಿಗೆ ಪುರಾತನ ಗುರುಕುಲ ಶಿಕ್ಷಣ ಪದ್ಧತಿಯ ಹಲವು ಅಂಶಗಳನ್ನು ಸೇರಿಸಬೇಕು. ಶೈಕ್ಷಣಿಕ ಪದ್ಧತಿಯ ಸುಧಾರಣೆಯ ಜತೆಗೆ ಜಾಗತಿಕ ತಾಪಮಾನ ಏರಿಕೆ ಹಾಗೂ ಯುದ್ಧಗಳ ವಿರುದ್ಧ ನಾವು ಮಾಡುತ್ತಿರುವ ಹೋರಾಟಕ್ಕೆ ಭಾರತದ ಪುರಾತನ ಶೈಕ್ಷಣಿಕ ಪದ್ಧತಿ ಸಹಕಾರಿಯಾಗುತ್ತದೆ ಎಂದು ದಲಾಯಿ ಹೇಳಿದ್ದಾರೆ.

ಜಾಗತಿಕ ಶಾಂತಿ ಮತ್ತು ಸೌಹಾರ್ದ ಸೃಷ್ಟಿಸುವಲ್ಲಿ ನೈತಿಕತೆ ಮತ್ತು ಸಂಸ್ಕೃತಿಯ ಪಾತ್ರ ಎಂಬ ಕುರಿತು ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಜಾಗತಿಕವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿ ಭಾರತದ ಪುರಾತನ ಶೈಕ್ಷಣಿಕ ಪದ್ಧತಿಗಿದೆ. ಅದರಲ್ಲಿ ಅಡಗಿರುವ ಮೌಲ್ಯಗಳಿಂದ ಹೀಗೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search