• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ ಪುರಾತನ ಶಿಕ್ಷಣ ಪದ್ಧತಿಗೆ ಜಾಗತಿಕ ಸಮಸ್ಯೆ ಬಗೆಹರಿಸುವ ಶಕ್ತಿ ಇದೆ ಎಂದಿದ್ದು ಯಾರು ಗೊತ್ತೇ?

TNN Correspondent Posted On April 23, 2018


  • Share On Facebook
  • Tweet It

ನವದೆಹಲಿ: ಭಾರತೀಯ ಸಂಸ್ಕೃತಿ, ಆಚಾರ, ವಿಚಾರ, ನಡೆ-ನುಡಿ, ಉಡುಗೆ-ತೊಡುಗೆ, ಜ್ಞಾನ ಸಂಪತ್ತು ಎಂದರೆ ಇಡೀ ವಿಶ್ವವೇ ತಲೆದೂಗುತ್ತದೆ. ಮೆಚ್ಚುಗೆಯ ಮಾತು ಕೇಳಿಬರುತ್ತವೆ. ಆದರೂ ಭಾರತದಲ್ಲಿರುವ ಕೆಲವು ಕುತ್ಸಿತ ಮನಸ್ಸುಗಳು ನಮ್ಮ ದೇಶದ ವಿರುದ್ಧವೇ ಮಾತನಾಡುತ್ತವೆ ಎಂಬುದೇ ಬೇಸರ.

ಆದರೇನಂತೆ, ಇತಿಹಾಸದ ಆರಂಭದ ದಿನಗಳಿಂದಲೇ ಭಾರತದ ಮೇಲೆ, ಭಾರತೀಯತೆಯ ಮೇಲೆ ಹಲವರು ದಾಳಿ ಮಾಡಿದರೂ ನಮ್ಮ ಖ್ಯಾತಿಯನ್ನು, ಸತ್ವಯುತ ವಿಚಾರ, ನಡೆ-ನುಡಿಯನ್ನು ಯಾರೂ ಅಲ್ಲಾಡಿಸಲು ಆಗಿಲ್ಲ.

ಇಂತಹ ಶ್ರೀಮಂತ ಸಂಸ್ಕೃತಿಯ ಹೆಗ್ಗಳಿಕೆಗೆ ಮುಕುಟವಿಟ್ಟಂತೆ ಟಿಬೆಟಿಯನ್ ಬೌದ್ಧ ಧರ್ಮ ಗುರು ದಲಾಯಿ ಲಾಮಾ ಮಾತನಾಡಿದ್ದು, ಭಾರತದ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಪುರಾತನ ಶಿಕ್ಷಣ ಪದ್ಧತಿಯ ಅಂಶಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪುರಾತನ ಭಾರತೀಯ ಶಿಕ್ಷಣದ ಹೆಗ್ಗಳಿಕೆ ಬಗ್ಗೆ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ಜರೂರಾಗಿ ಭಾರತದ ಉನ್ನತ ಶಿಕ್ಷಣ ಪದ್ಧತಿಗೆ ಪುರಾತನ ಗುರುಕುಲ ಶಿಕ್ಷಣ ಪದ್ಧತಿಯ ಹಲವು ಅಂಶಗಳನ್ನು ಸೇರಿಸಬೇಕು. ಶೈಕ್ಷಣಿಕ ಪದ್ಧತಿಯ ಸುಧಾರಣೆಯ ಜತೆಗೆ ಜಾಗತಿಕ ತಾಪಮಾನ ಏರಿಕೆ ಹಾಗೂ ಯುದ್ಧಗಳ ವಿರುದ್ಧ ನಾವು ಮಾಡುತ್ತಿರುವ ಹೋರಾಟಕ್ಕೆ ಭಾರತದ ಪುರಾತನ ಶೈಕ್ಷಣಿಕ ಪದ್ಧತಿ ಸಹಕಾರಿಯಾಗುತ್ತದೆ ಎಂದು ದಲಾಯಿ ಹೇಳಿದ್ದಾರೆ.

ಜಾಗತಿಕ ಶಾಂತಿ ಮತ್ತು ಸೌಹಾರ್ದ ಸೃಷ್ಟಿಸುವಲ್ಲಿ ನೈತಿಕತೆ ಮತ್ತು ಸಂಸ್ಕೃತಿಯ ಪಾತ್ರ ಎಂಬ ಕುರಿತು ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಜಾಗತಿಕವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿ ಭಾರತದ ಪುರಾತನ ಶೈಕ್ಷಣಿಕ ಪದ್ಧತಿಗಿದೆ. ಅದರಲ್ಲಿ ಅಡಗಿರುವ ಮೌಲ್ಯಗಳಿಂದ ಹೀಗೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
Tulunadu News February 1, 2023
Leave A Reply

  • Recent Posts

    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
  • Popular Posts

    • 1
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 2
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 3
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 4
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 5
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search