• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಪುರಾತನ ಶಿಕ್ಷಣ ಪದ್ಧತಿಗೆ ಜಾಗತಿಕ ಸಮಸ್ಯೆ ಬಗೆಹರಿಸುವ ಶಕ್ತಿ ಇದೆ ಎಂದಿದ್ದು ಯಾರು ಗೊತ್ತೇ?

TNN Correspondent Posted On April 23, 2018
0


0
Shares
  • Share On Facebook
  • Tweet It

ನವದೆಹಲಿ: ಭಾರತೀಯ ಸಂಸ್ಕೃತಿ, ಆಚಾರ, ವಿಚಾರ, ನಡೆ-ನುಡಿ, ಉಡುಗೆ-ತೊಡುಗೆ, ಜ್ಞಾನ ಸಂಪತ್ತು ಎಂದರೆ ಇಡೀ ವಿಶ್ವವೇ ತಲೆದೂಗುತ್ತದೆ. ಮೆಚ್ಚುಗೆಯ ಮಾತು ಕೇಳಿಬರುತ್ತವೆ. ಆದರೂ ಭಾರತದಲ್ಲಿರುವ ಕೆಲವು ಕುತ್ಸಿತ ಮನಸ್ಸುಗಳು ನಮ್ಮ ದೇಶದ ವಿರುದ್ಧವೇ ಮಾತನಾಡುತ್ತವೆ ಎಂಬುದೇ ಬೇಸರ.

ಆದರೇನಂತೆ, ಇತಿಹಾಸದ ಆರಂಭದ ದಿನಗಳಿಂದಲೇ ಭಾರತದ ಮೇಲೆ, ಭಾರತೀಯತೆಯ ಮೇಲೆ ಹಲವರು ದಾಳಿ ಮಾಡಿದರೂ ನಮ್ಮ ಖ್ಯಾತಿಯನ್ನು, ಸತ್ವಯುತ ವಿಚಾರ, ನಡೆ-ನುಡಿಯನ್ನು ಯಾರೂ ಅಲ್ಲಾಡಿಸಲು ಆಗಿಲ್ಲ.

ಇಂತಹ ಶ್ರೀಮಂತ ಸಂಸ್ಕೃತಿಯ ಹೆಗ್ಗಳಿಕೆಗೆ ಮುಕುಟವಿಟ್ಟಂತೆ ಟಿಬೆಟಿಯನ್ ಬೌದ್ಧ ಧರ್ಮ ಗುರು ದಲಾಯಿ ಲಾಮಾ ಮಾತನಾಡಿದ್ದು, ಭಾರತದ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಪುರಾತನ ಶಿಕ್ಷಣ ಪದ್ಧತಿಯ ಅಂಶಗಳನ್ನು ಸೇರಿಸಬೇಕು ಎಂದು ಸಲಹೆ ನೀಡಿದ್ದಾರೆ. ಆ ಮೂಲಕ ಪುರಾತನ ಭಾರತೀಯ ಶಿಕ್ಷಣದ ಹೆಗ್ಗಳಿಕೆ ಬಗ್ಗೆ ಉಲ್ಲೇಖಿಸಿದ್ದಾರೆ.

ಅಷ್ಟೇ ಅಲ್ಲ, ಜರೂರಾಗಿ ಭಾರತದ ಉನ್ನತ ಶಿಕ್ಷಣ ಪದ್ಧತಿಗೆ ಪುರಾತನ ಗುರುಕುಲ ಶಿಕ್ಷಣ ಪದ್ಧತಿಯ ಹಲವು ಅಂಶಗಳನ್ನು ಸೇರಿಸಬೇಕು. ಶೈಕ್ಷಣಿಕ ಪದ್ಧತಿಯ ಸುಧಾರಣೆಯ ಜತೆಗೆ ಜಾಗತಿಕ ತಾಪಮಾನ ಏರಿಕೆ ಹಾಗೂ ಯುದ್ಧಗಳ ವಿರುದ್ಧ ನಾವು ಮಾಡುತ್ತಿರುವ ಹೋರಾಟಕ್ಕೆ ಭಾರತದ ಪುರಾತನ ಶೈಕ್ಷಣಿಕ ಪದ್ಧತಿ ಸಹಕಾರಿಯಾಗುತ್ತದೆ ಎಂದು ದಲಾಯಿ ಹೇಳಿದ್ದಾರೆ.

ಜಾಗತಿಕ ಶಾಂತಿ ಮತ್ತು ಸೌಹಾರ್ದ ಸೃಷ್ಟಿಸುವಲ್ಲಿ ನೈತಿಕತೆ ಮತ್ತು ಸಂಸ್ಕೃತಿಯ ಪಾತ್ರ ಎಂಬ ಕುರಿತು ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಜಾಗತಿಕವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ನಿವಾರಣೆ ಮಾಡುವ ಶಕ್ತಿ ಭಾರತದ ಪುರಾತನ ಶೈಕ್ಷಣಿಕ ಪದ್ಧತಿಗಿದೆ. ಅದರಲ್ಲಿ ಅಡಗಿರುವ ಮೌಲ್ಯಗಳಿಂದ ಹೀಗೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search