• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಇದೇ ಕಪಿಲ್ ಸಿಬಲ್ 2010ರಲ್ಲಿ ನ್ಯಾಯಮೂರ್ತಿಗಳ ಮಹಾಭಿಯೋಗ ವಿರೋಧಿಸಿದ್ದರು ಗೊತ್ತಾ?

TNN Correspondent Posted On April 24, 2018
0


0
Shares
  • Share On Facebook
  • Tweet It

ದೆಹಲಿ: ಈ ಕಾಂಗ್ರೆಸ್ಸಿಗರು ಎಂತಹ ಊಸರವಳ್ಳಿ, ಇಬ್ಬಂದಿತನದ ಸಂಸ್ಕೃತಿಯವರು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದವರು ಆಗಾಗ ಭಾರತದ ಪ್ರಜಾಪ್ರಭುತ್ವ ಉಳಿಸಿ ಎಂದು ಬೊಬ್ಬೆ ಹಾಕುವುದೇ ದೊಡ್ಡ ಅಣಕವಾಗಿ ಕಾಣುತ್ತದೆ.

ಇಂಥಾದ್ದೇ ಅಣಕವೊಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿಷಯದಲ್ಲಿ ಬಹಿರಂಗವಾಗಿದ್ದು, ಕಾಂಗ್ರೆಸ್ಸಿನ ಇಬ್ಬಂದಿತನ ಢಾಳಾಗಿದೆ. ಹೌದು, ದೇಶಾದ್ಯಂತ ಸುಪ್ರೀಂ ಕೋರ್ಟ್ ಮುಖ್ಯಮಂತ್ರಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮಹಾಭಿಯೋಗಕ್ಕೆ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳು ಸಜ್ಜಾಗಿವೆ. ಈಗಾಗಲೇ ಈ ಮನವಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

ಹೀಗೆ ಕ್ಷುಲ್ಲಕ ಕಾರಣಕ್ಕಾಗಿ ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಹಿ ಹಾಕಿದ್ದ ನೋಟಿಸ್ ಅನ್ನು ಉಪರಾಷ್ಟ್ರಪತಿಯವರಿಗೆ ಸಲ್ಲಿಸಿದ್ದರು. ಆದರೆ ಉಪರಾಷ್ಟ್ರಪತಿಯವರು ನೋಟಿಸ್ ತಿರಸ್ಕರಿಸಿದ್ದರು. ಆಗ ಬಾಯಿಬಿಟ್ಟ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್, ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ಆಗಲೇಬೇಕು. ನಾವು ನ್ಯಾಯಾಲಯದ ಮೆಟ್ಟಿಲು ಏರುತ್ತೇವೆ ಎಂದು ತಿಳಿಸಿದ್ದಾರೆ.

ಎಂತಹ ವಿಪರ್ಯಾಸ ನೋಡಿ, ಇದೇ ಕಪಿಲ್ ಸಿಬಲ್, 2010ರಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡುವಾಗ, ರಾಜಕಾರಣಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಮಹಾಭಿಯೋಗ ಮಂಡಿಸುವುದು ಅನ್ಯಾಯದ ಸಂಗತಿ ಎಂದಿದ್ದರು. ಆದರೆ ಈಗ ಅವರೇ ಮಹಾಭಿಯೋಗದ ಪರವಾಗಿ ನಿಂತು ನ್ಯಾಯಾಲಯದ ಮೆಟ್ಟಿಲು ಹತ್ತಲು ಹೊರಟಿರುವುದು ಕಾಂಗ್ರೆಸ್ಸಿಗರ ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search