• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗುಜರಾತಿನಲ್ಲಿ 300 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿಂದೆ ಕಾಂಗ್ರೆಸ್ ಕೈವಾಡವಿದೆಯೇ?

TNN Correspondent Posted On April 29, 2018


  • Share On Facebook
  • Tweet It

ಅಹಮದಾಬಾದ್: ಖಂಡಿತವಾಗಿಯೂ ದೇಶದಲ್ಲಿ ಯಾವುದೇ ವ್ಯಕ್ತಿ ಸ್ವಯಂ ಪ್ರೇರಿತವಾಗಿ ಬೇರೆ ಧರ್ಮಕ್ಕೆ ಮತಾಂತರವಾಗುವ ಎಲ್ಲ ಹಕ್ಕುಗಳೂ ಇವೆ. ಆದರೆ ಗುಜರಾತಿನಲ್ಲಿ ಬರೋಬ್ಬರಿ 300 ದಲಿತರು ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೈವಾಡವಿದೆಯೇ ಎಂಬ ಪ್ರಶ್ನೆ ಹಾಗೂ ಅನುಮಾನ ಮೂಡುತ್ತಿವೆ.

ಹೌದು, ಗುಜರಾತಿನ ಉನಾ ತಾಲೂಕಿನ ಸಂಧಿಯಾ ಎಂಬ ಗ್ರಾಮದಲ್ಲಿ 2016ರಲ್ಲಿ ಗೋರಕ್ಷಕರಿಂದ ಹಲ್ಲೆಗೊಳಗಾದ ಕಾರಣ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ. ಆದರೆ ಈ ಪ್ರತಿಭಟನೆಯನ್ನೇ ಕಾಂಗ್ರೆಸ್ ದಾಳವಾಗಿಸಿಕೊಂಡಿದ್ದು, ಸ್ಥಳೀಯ ಮುಖಂಡರನ್ನು ಬಳಸಿಕೊಂಡು ಮತಾಂತರಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದು ಈಗ ಎರಡು ವರ್ಷಗಳಾಗಿವೆ. ಗೋರಕ್ಷಣೆ ಹೆಸರಲ್ಲಿ ಹಿಂಸೆ ಮಾಡಕೂಡದು ಎಂದು ಪ್ರಧಾನಿ ನರೇಂದ್ರ ಮೋದಿಯವರೇ ತಿಳಿಸಿದ್ದಾರೆ. ಹೀಗೆ ಹಿಂಸೆಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮೋದಿ ಅವರು ಎಲ್ಲ ರಾಜ್ಯ ಸರ್ಕಾರಗಳಿಗೂ ಸೂಚಿಸಿದ್ದಾರೆ. ಹಾಗಾಗಿ ಇತ್ತೀಚೆಗೆ ಗೋರಕ್ಷಣೆ ಹೆಸರಿನಲ್ಲಿ ನಡೆದ ಹಿಂಸಾಚಾರ ಪ್ರಕರಣಗಳೂ ಕಡಿಮೆಯಾಗಿವೆ.

ಹೀಗಿರುವಾಗ ಎರಡು ವರ್ಷದ ಹಿಂದೆ ನಡೆದ ಘಟನೆಯನ್ನೇ ಈಗ ಕೆದಕಲಾಗುತ್ತಿದೆ. ಹಾಗೊಂದು ವೇಳೆ ದಲಿತರಿಗೆ ಗೋರಕ್ಷಕರಿಂದ ಅನ್ಯಾಯವಾದರೆ ಪ್ರತಿಭಟಿಸಿ ನ್ಯಾಯ ಪಡೆಯಲಿ. ಅದು ಬಿಟ್ಟು ಏಕಾಏಕಿ ಹಳೇ ಘಟನೆಯನ್ನು ಎದುರಿಟ್ಟುಕೊಂಡು ಸಾಮೂಹಿಕವಾಗಿ ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಿರುವ ಹಿಂದೆ ಕಾಂಗ್ರೆಸ್ ಸೇರಿ ಹಲವು ಸ್ಥಳೀಯ ಪಕ್ಷಗಳು ಹುನ್ನಾರ ಮಾಡಿವೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆದಾಗ್ಯೂ ದೇಶದಲ್ಲಿ ಕ್ರೈಸ್ತ ಮಿಷನರಿಗಳು, ಲವ್ ಜಿಹಾದ್ ಹೆಸರಿನಲ್ಲಿ ಮುಸ್ಲಿಂ ಮೂಲಭೂತವಾದಿಗಳು ಹಿಂದೂಗಳನ್ನು ಮತಾಂತರಗೊಳಿಸುತ್ತಿರುವ ಬೆನ್ನಲ್ಲೇ ವೋಟಿಗಾಗಿ ರಾಜಕಾರಣಿಗಳು ಮತಾಂತರದ ಅಸ್ತ್ರ ಬಳಸುತ್ತಿದ್ದಾರಾ ಎಂಬ ಪ್ರಶ್ನೆಗಳು ಆತಂಕ ಸೃಷ್ಟಿಸಿವೆ.

  • Share On Facebook
  • Tweet It


- Advertisement -


Trending Now
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
Tulunadu News September 28, 2023
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
Leave A Reply

  • Recent Posts

    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
  • Popular Posts

    • 1
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 2
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 3
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 4
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 5
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search