• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

60 ವರ್ಷ ದೇಶವಾಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ನರೇಂದ್ರ ಮೋದಿ ನಾಲ್ಕೇ ವರ್ಷದಲ್ಲಿ ಮಾಡಿ ತೋರಿಸಿದ್ದಾರೆ ನೋಡಿ!

TNN Correspondent Posted On April 29, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನೋಟು ನಿಷೇಧ, ಜಿಎಸ್ಟಿ ಜಾರಿ ಮಾಡಿ ದೇಶದ ಆರ್ಥಿಕ ಸ್ಥಿತಿಯನ್ನು ಔನ್ನತ್ಯಕ್ಕೇರಿಸುತ್ತಿದ್ದಾರೆ. ಪಾಕಿಸ್ತಾನ, ಚೀನಾಕ್ಕೆ ಗುಟುರು ಹಾಕಿ ಭಾರತವೆಂದರೆ ಭಯಪಡುವಂತೆ ಮಾಡಿದ್ದಾರೆ. ಹಲವು ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿದ್ದಾರೆ. ವಿದೇಶದಲ್ಲೂ ತಮ್ಮ ಪ್ರಭಾವ ಬೀರಿ ಭಾರತದ ಪ್ರಭೆಯನ್ನು ಆಕಾಶದೆತ್ತರಕ್ಕೆ ಕೊಂಡೊಯುತ್ತಿದ್ದಾರೆ.

ಆದರೆ ಅಭಿವೃದ್ಧಿ ಎಂದರೆ ಕೆಜಿಗೆಷ್ಟು ಎಂದು ಕೇಳುವ ಕಾಂಗ್ರೆಸ್ ಸೇರಿ ಹಲವು ವಿರೋಧಪಕ್ಷಗಳು ಮೋದಿ ಏನೂ ಮಾಡಿಲ್ಲ ಎಂದು ಬೊಬ್ಬೆ ಹಾಕುತ್ತವೆ. ಆದರೂ ಕಾಂಗ್ರೆಸ್ಸನ್ನು ನಂಬದ ಜನ ದೇಶದ 22 ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ಮೋದಿ ಅವರಿಗೆ ವಿಶ್ವಾಸ ತೋರಿದ್ದಾರೆ.

ಇಂತಹ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು 60 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ಕೇವಲ ನಾಲ್ಕು ವರ್ಷಗಳಲ್ಲೇ ಮಾಡುವ ಮೂಲಕ ತಾವು ಅಭಿವೃದ್ಧಿ ಪರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹೌದು, ದೇಶವನ್ನು ಆರು ದಶಕ ಆಳಿದ್ದ ಕಾಂಗ್ರೆಸ್ ಪ್ರತೀ ಗ್ರಾಮಕ್ಕೂ ವಿದ್ಯುತ್ ಕಲ್ಪಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿತ್ತು.

ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೀನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆ ಜಾರಿಗೊಳಿಸಿದರು. ಈಗ ಯೋಜನೆ ಶೇಕಡಾ ನೂರಕ್ಕೆ ನೂರರಷ್ಟು ಸಫಲವಾಗಿದ್ದು, ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶನಿವಾರ ಸಂಜೆ ವೇಳೆಗೆ ಮಣಿಪುರದ ಲೇಯಿಸಂಗ್ ಎಂಬ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ದೇಶದ ಪ್ರತಿ ಗ್ರಾಮವೂ ವಿದ್ಯುತ್ ಸಂಪರ್ಕ ಪಡೆದಂತಾಗಿದೆ. ಸರ್ಕಾರದ ಮಾಹಿತಿ ಪ್ರಕಾರ ದೇಶದ 5,97,464 ಗ್ರಾಮಗಳಿಗೂ ವಿದ್ಯುತ್ ನೀಡಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search