• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

60 ವರ್ಷ ದೇಶವಾಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ನರೇಂದ್ರ ಮೋದಿ ನಾಲ್ಕೇ ವರ್ಷದಲ್ಲಿ ಮಾಡಿ ತೋರಿಸಿದ್ದಾರೆ ನೋಡಿ!

TNN Correspondent Posted On April 29, 2018


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನೋಟು ನಿಷೇಧ, ಜಿಎಸ್ಟಿ ಜಾರಿ ಮಾಡಿ ದೇಶದ ಆರ್ಥಿಕ ಸ್ಥಿತಿಯನ್ನು ಔನ್ನತ್ಯಕ್ಕೇರಿಸುತ್ತಿದ್ದಾರೆ. ಪಾಕಿಸ್ತಾನ, ಚೀನಾಕ್ಕೆ ಗುಟುರು ಹಾಕಿ ಭಾರತವೆಂದರೆ ಭಯಪಡುವಂತೆ ಮಾಡಿದ್ದಾರೆ. ಹಲವು ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿದ್ದಾರೆ. ವಿದೇಶದಲ್ಲೂ ತಮ್ಮ ಪ್ರಭಾವ ಬೀರಿ ಭಾರತದ ಪ್ರಭೆಯನ್ನು ಆಕಾಶದೆತ್ತರಕ್ಕೆ ಕೊಂಡೊಯುತ್ತಿದ್ದಾರೆ.

ಆದರೆ ಅಭಿವೃದ್ಧಿ ಎಂದರೆ ಕೆಜಿಗೆಷ್ಟು ಎಂದು ಕೇಳುವ ಕಾಂಗ್ರೆಸ್ ಸೇರಿ ಹಲವು ವಿರೋಧಪಕ್ಷಗಳು ಮೋದಿ ಏನೂ ಮಾಡಿಲ್ಲ ಎಂದು ಬೊಬ್ಬೆ ಹಾಕುತ್ತವೆ. ಆದರೂ ಕಾಂಗ್ರೆಸ್ಸನ್ನು ನಂಬದ ಜನ ದೇಶದ 22 ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ಮೋದಿ ಅವರಿಗೆ ವಿಶ್ವಾಸ ತೋರಿದ್ದಾರೆ.

ಇಂತಹ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು 60 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ಕೇವಲ ನಾಲ್ಕು ವರ್ಷಗಳಲ್ಲೇ ಮಾಡುವ ಮೂಲಕ ತಾವು ಅಭಿವೃದ್ಧಿ ಪರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹೌದು, ದೇಶವನ್ನು ಆರು ದಶಕ ಆಳಿದ್ದ ಕಾಂಗ್ರೆಸ್ ಪ್ರತೀ ಗ್ರಾಮಕ್ಕೂ ವಿದ್ಯುತ್ ಕಲ್ಪಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿತ್ತು.

ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೀನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆ ಜಾರಿಗೊಳಿಸಿದರು. ಈಗ ಯೋಜನೆ ಶೇಕಡಾ ನೂರಕ್ಕೆ ನೂರರಷ್ಟು ಸಫಲವಾಗಿದ್ದು, ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶನಿವಾರ ಸಂಜೆ ವೇಳೆಗೆ ಮಣಿಪುರದ ಲೇಯಿಸಂಗ್ ಎಂಬ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ದೇಶದ ಪ್ರತಿ ಗ್ರಾಮವೂ ವಿದ್ಯುತ್ ಸಂಪರ್ಕ ಪಡೆದಂತಾಗಿದೆ. ಸರ್ಕಾರದ ಮಾಹಿತಿ ಪ್ರಕಾರ ದೇಶದ 5,97,464 ಗ್ರಾಮಗಳಿಗೂ ವಿದ್ಯುತ್ ನೀಡಲಾಗಿದೆ ಎಂದು ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
Tulunadu News March 22, 2023
Leave A Reply

  • Recent Posts

    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
  • Popular Posts

    • 1
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 2
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 3
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 4
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 5
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search