• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

60 ವರ್ಷ ದೇಶವಾಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ನರೇಂದ್ರ ಮೋದಿ ನಾಲ್ಕೇ ವರ್ಷದಲ್ಲಿ ಮಾಡಿ ತೋರಿಸಿದ್ದಾರೆ ನೋಡಿ!

TNN Correspondent Posted On April 29, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನೋಟು ನಿಷೇಧ, ಜಿಎಸ್ಟಿ ಜಾರಿ ಮಾಡಿ ದೇಶದ ಆರ್ಥಿಕ ಸ್ಥಿತಿಯನ್ನು ಔನ್ನತ್ಯಕ್ಕೇರಿಸುತ್ತಿದ್ದಾರೆ. ಪಾಕಿಸ್ತಾನ, ಚೀನಾಕ್ಕೆ ಗುಟುರು ಹಾಕಿ ಭಾರತವೆಂದರೆ ಭಯಪಡುವಂತೆ ಮಾಡಿದ್ದಾರೆ. ಹಲವು ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿದ್ದಾರೆ. ವಿದೇಶದಲ್ಲೂ ತಮ್ಮ ಪ್ರಭಾವ ಬೀರಿ ಭಾರತದ ಪ್ರಭೆಯನ್ನು ಆಕಾಶದೆತ್ತರಕ್ಕೆ ಕೊಂಡೊಯುತ್ತಿದ್ದಾರೆ.

ಆದರೆ ಅಭಿವೃದ್ಧಿ ಎಂದರೆ ಕೆಜಿಗೆಷ್ಟು ಎಂದು ಕೇಳುವ ಕಾಂಗ್ರೆಸ್ ಸೇರಿ ಹಲವು ವಿರೋಧಪಕ್ಷಗಳು ಮೋದಿ ಏನೂ ಮಾಡಿಲ್ಲ ಎಂದು ಬೊಬ್ಬೆ ಹಾಕುತ್ತವೆ. ಆದರೂ ಕಾಂಗ್ರೆಸ್ಸನ್ನು ನಂಬದ ಜನ ದೇಶದ 22 ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ಮೋದಿ ಅವರಿಗೆ ವಿಶ್ವಾಸ ತೋರಿದ್ದಾರೆ.

ಇಂತಹ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು 60 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ಕೇವಲ ನಾಲ್ಕು ವರ್ಷಗಳಲ್ಲೇ ಮಾಡುವ ಮೂಲಕ ತಾವು ಅಭಿವೃದ್ಧಿ ಪರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹೌದು, ದೇಶವನ್ನು ಆರು ದಶಕ ಆಳಿದ್ದ ಕಾಂಗ್ರೆಸ್ ಪ್ರತೀ ಗ್ರಾಮಕ್ಕೂ ವಿದ್ಯುತ್ ಕಲ್ಪಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿತ್ತು.

ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೀನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆ ಜಾರಿಗೊಳಿಸಿದರು. ಈಗ ಯೋಜನೆ ಶೇಕಡಾ ನೂರಕ್ಕೆ ನೂರರಷ್ಟು ಸಫಲವಾಗಿದ್ದು, ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶನಿವಾರ ಸಂಜೆ ವೇಳೆಗೆ ಮಣಿಪುರದ ಲೇಯಿಸಂಗ್ ಎಂಬ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ದೇಶದ ಪ್ರತಿ ಗ್ರಾಮವೂ ವಿದ್ಯುತ್ ಸಂಪರ್ಕ ಪಡೆದಂತಾಗಿದೆ. ಸರ್ಕಾರದ ಮಾಹಿತಿ ಪ್ರಕಾರ ದೇಶದ 5,97,464 ಗ್ರಾಮಗಳಿಗೂ ವಿದ್ಯುತ್ ನೀಡಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search