• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

60 ವರ್ಷ ದೇಶವಾಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ನರೇಂದ್ರ ಮೋದಿ ನಾಲ್ಕೇ ವರ್ಷದಲ್ಲಿ ಮಾಡಿ ತೋರಿಸಿದ್ದಾರೆ ನೋಡಿ!

TNN Correspondent Posted On April 29, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ನೋಟು ನಿಷೇಧ, ಜಿಎಸ್ಟಿ ಜಾರಿ ಮಾಡಿ ದೇಶದ ಆರ್ಥಿಕ ಸ್ಥಿತಿಯನ್ನು ಔನ್ನತ್ಯಕ್ಕೇರಿಸುತ್ತಿದ್ದಾರೆ. ಪಾಕಿಸ್ತಾನ, ಚೀನಾಕ್ಕೆ ಗುಟುರು ಹಾಕಿ ಭಾರತವೆಂದರೆ ಭಯಪಡುವಂತೆ ಮಾಡಿದ್ದಾರೆ. ಹಲವು ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುತ್ತಿದ್ದಾರೆ. ವಿದೇಶದಲ್ಲೂ ತಮ್ಮ ಪ್ರಭಾವ ಬೀರಿ ಭಾರತದ ಪ್ರಭೆಯನ್ನು ಆಕಾಶದೆತ್ತರಕ್ಕೆ ಕೊಂಡೊಯುತ್ತಿದ್ದಾರೆ.

ಆದರೆ ಅಭಿವೃದ್ಧಿ ಎಂದರೆ ಕೆಜಿಗೆಷ್ಟು ಎಂದು ಕೇಳುವ ಕಾಂಗ್ರೆಸ್ ಸೇರಿ ಹಲವು ವಿರೋಧಪಕ್ಷಗಳು ಮೋದಿ ಏನೂ ಮಾಡಿಲ್ಲ ಎಂದು ಬೊಬ್ಬೆ ಹಾಕುತ್ತವೆ. ಆದರೂ ಕಾಂಗ್ರೆಸ್ಸನ್ನು ನಂಬದ ಜನ ದೇಶದ 22 ರಾಜ್ಯಗಳಲ್ಲಿ ಬಿಜೆಪಿಗೆ ಅಧಿಕಾರ ನೀಡುವ ಮೂಲಕ ಮೋದಿ ಅವರಿಗೆ ವಿಶ್ವಾಸ ತೋರಿದ್ದಾರೆ.

ಇಂತಹ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು 60 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಮಾಡದ ಕೆಲಸವನ್ನು ಕೇವಲ ನಾಲ್ಕು ವರ್ಷಗಳಲ್ಲೇ ಮಾಡುವ ಮೂಲಕ ತಾವು ಅಭಿವೃದ್ಧಿ ಪರ ಎಂಬುದನ್ನು ಸಾಬೀತುಪಡಿಸಿದ್ದಾರೆ. ಹೌದು, ದೇಶವನ್ನು ಆರು ದಶಕ ಆಳಿದ್ದ ಕಾಂಗ್ರೆಸ್ ಪ್ರತೀ ಗ್ರಾಮಕ್ಕೂ ವಿದ್ಯುತ್ ಕಲ್ಪಿಸಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದಂತೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿತ್ತು.

ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೀನದಯಾಳು ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಜಾರಿಗೊಳಿಸುವ ಮೂಲಕ ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸೌಲಭ್ಯ ಕಲ್ಪಿಸುವ ಮಹತ್ತರ ಯೋಜನೆ ಜಾರಿಗೊಳಿಸಿದರು. ಈಗ ಯೋಜನೆ ಶೇಕಡಾ ನೂರಕ್ಕೆ ನೂರರಷ್ಟು ಸಫಲವಾಗಿದ್ದು, ದೇಶದ ಪ್ರತೀ ಗ್ರಾಮಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶನಿವಾರ ಸಂಜೆ ವೇಳೆಗೆ ಮಣಿಪುರದ ಲೇಯಿಸಂಗ್ ಎಂಬ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ದೇಶದ ಪ್ರತಿ ಗ್ರಾಮವೂ ವಿದ್ಯುತ್ ಸಂಪರ್ಕ ಪಡೆದಂತಾಗಿದೆ. ಸರ್ಕಾರದ ಮಾಹಿತಿ ಪ್ರಕಾರ ದೇಶದ 5,97,464 ಗ್ರಾಮಗಳಿಗೂ ವಿದ್ಯುತ್ ನೀಡಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search