• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಸಂಸ್ಕೃತಿ ಎತ್ತಿಹಿಡಿದ ಬಿಜೆಪಿ ಸರ್ಕಾರ, ಮಧ್ಯಪ್ರದೇಶದಲ್ಲಿ ಪ್ರೇಮಿಗಳ ದಿನ ಇನ್ನು ಮಾತೃ-ಪಿತೃ ದಿನವಾಗಿ ಆಚರಣೆ!

TNN Correspondent Posted On April 30, 2018
0


0
Shares
  • Share On Facebook
  • Tweet It

ಭೋಪಾಲ್: ಅನಾದಿ ಕಾಲದಿಂದಲೂ ಭಾರತೀಯ ಸಂಸ್ಕೃತಿ, ಸಂಪ್ರದಾಯ ಎಂದರೆ ಅಗಾಧವಾದ ಶ್ರೀಮಂತಿಕೆ ಇದೆ. ಇಡೀ ವಿಶ್ವವೇ ಭಾರತೀಯ ಸಂಸ್ಕೃತಿಯೆಂದರೆ ಹೆಮ್ಮೆಪಡುತ್ತದೆ. ಆದರೆ ಇತ್ತೀಚೆಗೆ ವಿದೇಶಿ ಸಂಸ್ಕೃತಿಗೆ ಮಾರುಹೋಗಿರುವ ನಮ್ಮ ಯುವಜನತೆ ಪ್ರೇಮಿಗಳ ದಿನದಂದು ಪಾರ್ಕ್, ಪಬ್ ಅಂತ ಹುಡುಗಿಯ ಜತೆ ಸುತ್ತಾಡುತ್ತಾರೆ ಹಾಗೂ ಹೀಗೆ ಮಾಡುವುದನ್ನೇ ನಿಜವಾದ ಪ್ರೇಮಿಯ ಲಕ್ಷಣ ಎಂದು ಭಾವಿಸಿದ್ದಾರೆ.

ಆದರೆ ಇದನ್ನು ತೊಲಗಿಸಲು ಮಧ್ಯಪ್ರದೇಶ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ, ಅಂದರೆ 2019ರ ಫೆಬ್ರವರಿ 14ರಿಂದ ಪ್ರೇಮಿಗಳ ದಿನಾಚರಣೆಯನ್ನು ಮಾತೃ-ಪಿತೃಗಳ ಪೂಜಾ ದಿನವಾಗಿ ಆಚರಿಸಲು ನಿರ್ಧರಿಸಿದೆ.

ರಾಜ್ಯ ಶಿಕ್ಷಣ ಇಲಾಖೆ ಈ ಮಹತ್ತರ ನಿರ್ಣಯ ಕೈಗೊಂಡಿದ್ದು, ಏಪ್ರಿಲ್ 23ರಂದು ಸರ್ಕಾರ ಪ್ರಕಟಿಸಿರುವ ವಾರ್ಷಿಕ ಕ್ಯಾಲೆಂಡರ್ ಹಾಗೂ ಶಿರ್ವಿ ಪಂಜಾಂಗದಲ್ಲಿ ಫೆಬ್ರವರಿ 14ರಂದು ಮಾತೃ-ಪಿತೃಗಳ ಪೂಜಾ ದಿನ ಎಂದು ಸೇರಿಸುವ ಮೂಲಕ ಪ್ರೇಮಿಗಳ ದಿನಾಚರಣೆ ಹೆಸರಲ್ಲಿ ವಿದೇಶಿ ಸಂಸ್ಕೃತಿ ಅನಸರಿಸುತ್ತಿದ್ದ ಯುವಜನತೆಗೆ ಪಾಠ ಕಲಿಸಲು ಮುಂದಾಗಿದೆ.

ವಿದ್ಯಾರ್ಥಿಗಳು ಹರೆಯದ ಆಕರ್ಷಣೆ ಹಾಗೂ ವಿದೇಶಿ ಸಂಸ್ಕೃತಿಗೆ ಮಾರು ಹೋಗದೆ, ಹೆತ್ತ ತಂದೆ-ತಾಯಿ ಮೇಲೆ ಜಾಸ್ತಿ ಪ್ರೀತಿ ಹುಟ್ಟುಹಾಕಲು ಹಾಗೂ ಅವರ ಮಹತ್ವ ಅರಿಯುವ ದಿಸೆಯಲ್ಲಿ ಪ್ರೇಮಿಗಳ ದಿನವನ್ನು ಮಾತೃ-ಪಿತೃಗಳ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ಮಧ್ಯಪ್ರದೇಶ್ ಶಿಕ್ಷಣ ಸಚಿವ ವಾಸುದೇವ್ ದೇವಾನಿ ತಿಳಿಸಿದ್ದಾರೆ.

ಆದಾಗ್ಯೂ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಛತ್ತೀಸ್ ಗಡದಲ್ಲೂ ಸಹ ಫೆಬ್ರವರಿ 14ನ್ನು ಪ್ರೇಮಿಗಳ ದಿನದ ಬದಲಾಗಿ ಮಾತೃ-ಪಿತೃಗಳ ಜನ್ಮದಿನ ಎಂದು ಆಚರಿಸಲಾಗುತ್ತಿದೆ. ಒಟ್ಟಿನಲ್ಲಿ ಹರೆಯದ ಆಕರ್ಷಣೆಗೆ ವಿರಾಮ ನೀಡಿ, ವೃದ್ಧಾಶ್ರಮ ಹೆಚ್ಚಾಗುತ್ತಿರುವ ಇಂದಿನ ಕಾಲಮಾನದಲ್ಲಿ ಸರ್ಕಾರವೇ ಮಾತೃ-ಪಿತೃಗಳ ದಿನ ಆಚರಿಸಲು ಮುಂದಾಗಿರುವುದು ಸಂತಸದ ಸಂಗತಿಯಾಗಿದೆ.

 

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search