• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತೀಯ ಸಂಸ್ಕೃತಿ ಎತ್ತಿಹಿಡಿದ ಬಿಜೆಪಿ ಸರ್ಕಾರ, ಮಧ್ಯಪ್ರದೇಶದಲ್ಲಿ ಪ್ರೇಮಿಗಳ ದಿನ ಇನ್ನು ಮಾತೃ-ಪಿತೃ ದಿನವಾಗಿ ಆಚರಣೆ!

TNN Correspondent Posted On April 30, 2018
0


0
Shares
  • Share On Facebook
  • Tweet It

ಭೋಪಾಲ್: ಅನಾದಿ ಕಾಲದಿಂದಲೂ ಭಾರತೀಯ ಸಂಸ್ಕೃತಿ, ಸಂಪ್ರದಾಯ ಎಂದರೆ ಅಗಾಧವಾದ ಶ್ರೀಮಂತಿಕೆ ಇದೆ. ಇಡೀ ವಿಶ್ವವೇ ಭಾರತೀಯ ಸಂಸ್ಕೃತಿಯೆಂದರೆ ಹೆಮ್ಮೆಪಡುತ್ತದೆ. ಆದರೆ ಇತ್ತೀಚೆಗೆ ವಿದೇಶಿ ಸಂಸ್ಕೃತಿಗೆ ಮಾರುಹೋಗಿರುವ ನಮ್ಮ ಯುವಜನತೆ ಪ್ರೇಮಿಗಳ ದಿನದಂದು ಪಾರ್ಕ್, ಪಬ್ ಅಂತ ಹುಡುಗಿಯ ಜತೆ ಸುತ್ತಾಡುತ್ತಾರೆ ಹಾಗೂ ಹೀಗೆ ಮಾಡುವುದನ್ನೇ ನಿಜವಾದ ಪ್ರೇಮಿಯ ಲಕ್ಷಣ ಎಂದು ಭಾವಿಸಿದ್ದಾರೆ.

ಆದರೆ ಇದನ್ನು ತೊಲಗಿಸಲು ಮಧ್ಯಪ್ರದೇಶ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ, ಅಂದರೆ 2019ರ ಫೆಬ್ರವರಿ 14ರಿಂದ ಪ್ರೇಮಿಗಳ ದಿನಾಚರಣೆಯನ್ನು ಮಾತೃ-ಪಿತೃಗಳ ಪೂಜಾ ದಿನವಾಗಿ ಆಚರಿಸಲು ನಿರ್ಧರಿಸಿದೆ.

ರಾಜ್ಯ ಶಿಕ್ಷಣ ಇಲಾಖೆ ಈ ಮಹತ್ತರ ನಿರ್ಣಯ ಕೈಗೊಂಡಿದ್ದು, ಏಪ್ರಿಲ್ 23ರಂದು ಸರ್ಕಾರ ಪ್ರಕಟಿಸಿರುವ ವಾರ್ಷಿಕ ಕ್ಯಾಲೆಂಡರ್ ಹಾಗೂ ಶಿರ್ವಿ ಪಂಜಾಂಗದಲ್ಲಿ ಫೆಬ್ರವರಿ 14ರಂದು ಮಾತೃ-ಪಿತೃಗಳ ಪೂಜಾ ದಿನ ಎಂದು ಸೇರಿಸುವ ಮೂಲಕ ಪ್ರೇಮಿಗಳ ದಿನಾಚರಣೆ ಹೆಸರಲ್ಲಿ ವಿದೇಶಿ ಸಂಸ್ಕೃತಿ ಅನಸರಿಸುತ್ತಿದ್ದ ಯುವಜನತೆಗೆ ಪಾಠ ಕಲಿಸಲು ಮುಂದಾಗಿದೆ.

ವಿದ್ಯಾರ್ಥಿಗಳು ಹರೆಯದ ಆಕರ್ಷಣೆ ಹಾಗೂ ವಿದೇಶಿ ಸಂಸ್ಕೃತಿಗೆ ಮಾರು ಹೋಗದೆ, ಹೆತ್ತ ತಂದೆ-ತಾಯಿ ಮೇಲೆ ಜಾಸ್ತಿ ಪ್ರೀತಿ ಹುಟ್ಟುಹಾಕಲು ಹಾಗೂ ಅವರ ಮಹತ್ವ ಅರಿಯುವ ದಿಸೆಯಲ್ಲಿ ಪ್ರೇಮಿಗಳ ದಿನವನ್ನು ಮಾತೃ-ಪಿತೃಗಳ ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ಮಧ್ಯಪ್ರದೇಶ್ ಶಿಕ್ಷಣ ಸಚಿವ ವಾಸುದೇವ್ ದೇವಾನಿ ತಿಳಿಸಿದ್ದಾರೆ.

ಆದಾಗ್ಯೂ ಬಿಜೆಪಿ ಸರ್ಕಾರ ಆಡಳಿತದಲ್ಲಿರುವ ಛತ್ತೀಸ್ ಗಡದಲ್ಲೂ ಸಹ ಫೆಬ್ರವರಿ 14ನ್ನು ಪ್ರೇಮಿಗಳ ದಿನದ ಬದಲಾಗಿ ಮಾತೃ-ಪಿತೃಗಳ ಜನ್ಮದಿನ ಎಂದು ಆಚರಿಸಲಾಗುತ್ತಿದೆ. ಒಟ್ಟಿನಲ್ಲಿ ಹರೆಯದ ಆಕರ್ಷಣೆಗೆ ವಿರಾಮ ನೀಡಿ, ವೃದ್ಧಾಶ್ರಮ ಹೆಚ್ಚಾಗುತ್ತಿರುವ ಇಂದಿನ ಕಾಲಮಾನದಲ್ಲಿ ಸರ್ಕಾರವೇ ಮಾತೃ-ಪಿತೃಗಳ ದಿನ ಆಚರಿಸಲು ಮುಂದಾಗಿರುವುದು ಸಂತಸದ ಸಂಗತಿಯಾಗಿದೆ.

 

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search