• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಸ್ತಾನಕ್ಕೆ ತೊಡೆ ಕಟ್ಟಿ ಮುಗಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಗೆ ಮೋದಿ ಚಾಲನೆ! ಇದು 56 ಇಂಚಿನ ಎದೆಯ ತಾಕತ್ತು!

TNN Correspondent Posted On April 30, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಪಾಕಿಸ್ತಾನದ ಉಪಟಳ ಕಡಿಮೆಯಾಗಿದೆ. ಮೋದಿ ಅವರೂ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿಸಿ ತಕ್ಕ ಪಾಠ ಕಲಿಸಿದರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಉಗ್ರರ ಪೋಷಣೆಯ ರಾಷ್ಟ್ರ ಎಂಬುದನ್ನು ಬಿಂಬಿಸಿದರು. ಇಂತಹ ಗಂಡೆದೆಯ ಪ್ರಧಾನಿಯ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ.

ಹೌದು, ಜಮ್ಮು-ಕಾಶ್ಮೀರದ ಗುರೇಜ್ ನಲ್ಲಿ ನಿರ್ಮಿಸಿದ ಕಿಶನ್ ಗಂಗಾ ಜಲವಿದ್ಯುತ್ ಯೋಜನೆಯನ್ನು ಪಾಕಿಸ್ತಾನದ ವಿರೋಧದ ಮಧ್ಯೆಯೂ ಪೂರ್ಣಗೊಳಿಸಿದ್ದು, ಮೇ ಮೊದಲ ವಾರದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಇದರಿಂದ ಉಪಟಳ ಮಾಡಿದ್ದ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ.

ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾಗಿದ್ದು, ಇದು ಕಿಶನ್ ಗಂಗಾ ನದಿಗೆ ಅಡ್ಡಲಾಗಿ 37 ಮೀಟರ್ ಎತ್ತರದ ಅಣೆಕಟ್ಟಾಗಿದೆ. ಈ ಯೋಜನೆಯಿಂದ ವಾರ್ಷಿಕ 1,713 ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದ್ದು, ಭಾರತದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಆದರೆ ಈ ಯೋಜನೆಯನ್ನು ಯಕಃಶ್ಚಿತ್ ತಡೆಯಲು ಹಲವು ಬಾರಿ ಪ್ರಯತ್ನಿಸಿತ್ತು. ಇಂಡಸ್ ನದಿ ಒಪ್ಪಂದದಂತೆ ವಿಶ್ವಸಂಸ್ಥೆಯ ಮೆಟ್ಟಿಲೇರಿ ಯೋಜನೆಗೆ ಅಡ್ಡಗಾಲು ಹಾಕಲು ಯತ್ನಿಸಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಹಾಗೂ ಪಾಕಿಸ್ತಾನದ ಹುರುಳಿಲ್ಲದ ವಾದಕ್ಕೆ ಬೆಲೆ ಸಿಗದೆ ಈಗ ಯೋಜನೆ ಪೂರ್ಣಗೊಂಡಿದೆ.

ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತಹ 56 ಇಂಚಿನ ಎದೆಯುಳ್ಳ ನಾಯಕನನ್ನು ಹೊಂದಿರುವ ನಾವು ಹೆಮ್ಮೆಪಡುವ ಮೂಲಕ ಮೋದಿ ಅವರು ತಮಗೆ ಗುಂಡಿಗೆ ಇದೆ ಎಂಬುದನ್ನು ಸಾಬೀತುಪಡಿಸುತ್ತಲೇ ಇದ್ದಾರೆ. ಇದಕ್ಕೆ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ ಕಿಶನ್ ಗಂಗಾ ಜಲವಿದ್ಯುತ್ ಯೋಜನೆ ಮುಗಿಸಿದ್ದೇ ಉತ್ತಮ ನಿದರ್ಶನವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search