• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಲಕಿಯ ವೀಸಾ ಸಮಸ್ಯೆ ಬಗೆಹರಿಸುವ ಭರವಸೆ! ಇದ್ದರೆ ಇರಬೇಕು ಇಂಥ ವಿದೇಶಾಂಗ ಸಚಿವೆ

TNN Correspondent Posted On May 1, 2018
0


0
Shares
  • Share On Facebook
  • Tweet It

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೋ, ಅದೇ ರೀತಿ ಅವರ ಸಂಪುಟದ ಸಚಿವರು ಸಹ ಹಾಗೆಯೇ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಈ ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಸಾಬೀತಾಗಿದೆ. ಇದಕ್ಕೆ ಸ್ಪಷ್ಟ ನಿದರ್ಶನ ಎಂದರೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್!

ಹೌದು, ಸುಷ್ಮಾ ಸ್ವರಾಜ್ ವಿದೇಶಾಂಗ ಖಾತೆ ವಹಿಸಿಕೊಂಡ ಬಳಿಕ ವಿಶ್ವದ ಯಾವುದೇ ಮೂಲೆಯಲ್ಲಿ ಭಾರತೀಯರಿಗೆ ತೊಂದರೆಯಾದರೆ, ರಾಜತಾಂತ್ರಿಕವಾಗಿ ಸಮಸ್ಯೆ ಎದುರಾದರೆ ತಕ್ಷಣ ಧಾವಿಸುತ್ತಾರೆ. ಹೀಗೆ ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ನೂರಾರು ಜನರನ್ನು ರಕ್ಷಿಸಿದ್ದಾರೆ.

ಇಂತಹ ಸುಷ್ಮಾ ಸ್ವರಾಜ್ ಈಗ ಭಾರತದಲ್ಲಿ 14 ವರ್ಷದ ಬಾಲಕಿಗೆ ಲಂಡನ್ ತೆರಳಲು ವೀಸಾ ಸಮಸ್ಯೆ ಎದುರಾಗಿದ್ದು,ಈ ಸಮಸ್ಯೆ ನಿವಾರಿಸುವುದಾಗಿ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನೆಲೆಸಿರುವ ಅರ್ಪಿತಾ ತಿವಾರಿ ಲಂಡನ್ ನಲ್ಲಿ ನಡೆಯುವ ಗ್ಲೋಬಲ್ ಕಾನ್ಫರೆನ್ಸ್ ಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು, ಮೇ 3ರಂದು ವಿಮಾನ ಬುಕ್ ಮಾಡಿದ್ದರು. ಆದರೆ ವೀಸಾ ಸಿಗದ ಕಾರಣ ತೊಂದರೆಯಾಗಿದೆ. ಈ ಕುರಿತು ಬಾಲಕಿ ಸುಷ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದರು.

ಇದರಿಂದ ಎಚ್ಚೆತ್ತುಕೊಂಡ ಸುಷ್ಮಾ ಸ್ವರಾಜ್, ವಿದೇಶಾಂಗ ಸಚಿವಾಲಯ ಹಾಗೂ ಅಧಿಕಾರಿಗಳು ನಿಮ್ಮ ಜತೆ ಸಂಪರ್ಕದಲ್ಲಿರುತ್ತಾರೆ. ಕೂಡಲೇ ನಿಮ್ಮ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಒಟ್ಟಿನಲ್ಲಿ ಯಾವುದೇ ಒಂದು ಸರ್ಕಾರ ಸಾಮಾನ್ಯ ಜನರ ಜತೆ ನಿಂತರೆ, ಅವರ ಕಷ್ಟ ಸುಖಕ್ಕೆ ಸ್ಪಂದಿಸಿದರೆ ಆ ರಾಜ್ಯ ರಾಮರಾಜ್ಯ ಆಗುತ್ತದೆ ಎಂಬ ಮಾತಿದೆ. ಅದರಂತೆ ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿಯಾಗಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search