• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಲಕಿಯ ವೀಸಾ ಸಮಸ್ಯೆ ಬಗೆಹರಿಸುವ ಭರವಸೆ! ಇದ್ದರೆ ಇರಬೇಕು ಇಂಥ ವಿದೇಶಾಂಗ ಸಚಿವೆ

TNN Correspondent Posted On May 1, 2018
0


0
Shares
  • Share On Facebook
  • Tweet It

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೋ, ಅದೇ ರೀತಿ ಅವರ ಸಂಪುಟದ ಸಚಿವರು ಸಹ ಹಾಗೆಯೇ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದು ಈ ನಾಲ್ಕು ವರ್ಷಗಳಲ್ಲಿ ಹಲವು ಬಾರಿ ಸಾಬೀತಾಗಿದೆ. ಇದಕ್ಕೆ ಸ್ಪಷ್ಟ ನಿದರ್ಶನ ಎಂದರೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್!

ಹೌದು, ಸುಷ್ಮಾ ಸ್ವರಾಜ್ ವಿದೇಶಾಂಗ ಖಾತೆ ವಹಿಸಿಕೊಂಡ ಬಳಿಕ ವಿಶ್ವದ ಯಾವುದೇ ಮೂಲೆಯಲ್ಲಿ ಭಾರತೀಯರಿಗೆ ತೊಂದರೆಯಾದರೆ, ರಾಜತಾಂತ್ರಿಕವಾಗಿ ಸಮಸ್ಯೆ ಎದುರಾದರೆ ತಕ್ಷಣ ಧಾವಿಸುತ್ತಾರೆ. ಹೀಗೆ ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ನೂರಾರು ಜನರನ್ನು ರಕ್ಷಿಸಿದ್ದಾರೆ.

ಇಂತಹ ಸುಷ್ಮಾ ಸ್ವರಾಜ್ ಈಗ ಭಾರತದಲ್ಲಿ 14 ವರ್ಷದ ಬಾಲಕಿಗೆ ಲಂಡನ್ ತೆರಳಲು ವೀಸಾ ಸಮಸ್ಯೆ ಎದುರಾಗಿದ್ದು,ಈ ಸಮಸ್ಯೆ ನಿವಾರಿಸುವುದಾಗಿ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ದೆಹಲಿಯ ಸಂಗಮ್ ವಿಹಾರ್ ಪ್ರದೇಶದಲ್ಲಿ ನೆಲೆಸಿರುವ ಅರ್ಪಿತಾ ತಿವಾರಿ ಲಂಡನ್ ನಲ್ಲಿ ನಡೆಯುವ ಗ್ಲೋಬಲ್ ಕಾನ್ಫರೆನ್ಸ್ ಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದು, ಮೇ 3ರಂದು ವಿಮಾನ ಬುಕ್ ಮಾಡಿದ್ದರು. ಆದರೆ ವೀಸಾ ಸಿಗದ ಕಾರಣ ತೊಂದರೆಯಾಗಿದೆ. ಈ ಕುರಿತು ಬಾಲಕಿ ಸುಷ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದರು.

ಇದರಿಂದ ಎಚ್ಚೆತ್ತುಕೊಂಡ ಸುಷ್ಮಾ ಸ್ವರಾಜ್, ವಿದೇಶಾಂಗ ಸಚಿವಾಲಯ ಹಾಗೂ ಅಧಿಕಾರಿಗಳು ನಿಮ್ಮ ಜತೆ ಸಂಪರ್ಕದಲ್ಲಿರುತ್ತಾರೆ. ಕೂಡಲೇ ನಿಮ್ಮ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.

ಒಟ್ಟಿನಲ್ಲಿ ಯಾವುದೇ ಒಂದು ಸರ್ಕಾರ ಸಾಮಾನ್ಯ ಜನರ ಜತೆ ನಿಂತರೆ, ಅವರ ಕಷ್ಟ ಸುಖಕ್ಕೆ ಸ್ಪಂದಿಸಿದರೆ ಆ ರಾಜ್ಯ ರಾಮರಾಜ್ಯ ಆಗುತ್ತದೆ ಎಂಬ ಮಾತಿದೆ. ಅದರಂತೆ ಕೇಂದ್ರ ಸರ್ಕಾರ ಆಡಳಿತ ನಡೆಸುತ್ತಿರುವುದು ಸಂತಸದ ಸಂಗತಿಯಾಗಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search