• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜೈಲಿನಲ್ಲಿ ಶಿಕ್ಷೆ ಅನುಭವಿಸುತಿರೋ ಲಾಲು ಯಾದವ್ ಭೇಟಿ ಮಾಡೋ ರಾಗಾ ಸಾಚಾತನ ಎಂಥಾದ್ದು?

ತೇಜಸ್ವಿ ಪ್ರತಾಪ ಮೈಸೂರು Posted On May 1, 2018
0


0
Shares
  • Share On Facebook
  • Tweet It

ರಾಜ್ಯದಲ್ಲಿ ಚುನಾವಣೆ ಬಿಸಿ ತೀವ್ರವಾಗಿರೋ ಕಾಲದಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯೇ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಆಡಳಿತ ನೀಡದಿರುವುದು ಒಂದೆಡೆಯಾದರೇ, ಬಲಿಷ್ಠ ನಾಯಕತ್ವವಿಲ್ಲದೆ ಒದ್ದಾಡುತ್ತಿದೆ. ಇನ್ನು ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಲೇಬೇಕು. ಮೋದಿ, ಷಾ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕಲು ಹರಸಾಹಸ ಪಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಉರುಳಿಸುತ್ತಿರುವ ದಾಳಗಳು ಅದಕ್ಕೆ ತಿರುಗುಬಾಣವಾಗುತ್ತಿರುವುದು ಪದೇ ಪದೆ ಸಾಬೀತಾಗುತ್ತಿದೆ.

ಕರ್ನಾಟಕದಲ್ಲಿ ಐದು ವರ್ಷ ಆಡಳಿತ ನಡೆಸಿದ್ದೇ ಸಾಧನೆ ಎಂಬಂತೆ ಬಿಂಬಿಸುತ್ತಿರುವ ಸಿಎಂ ಸೇರಿ ಎಲ್ಲ ಕಾಂಗ್ರೆಸ್ಸಿಗರು ಭ್ರಷ್ಟಾಚಾರ ನಿಯಂತ್ರಣದಲ್ಲಿ ವಿಫಲರಾಗಿರುವುದು ಲೋಕಾಯುಕ್ತ ಮುಚ್ಚಿಸಿದಾಗಲೇ ಸಾಬೀತಾಗಿದೆ. ಅಲ್ಲದೇ ಬಿಜೆಪಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ಸಿಗರು ನಿರಂತರವಾಗಿ ಜೈಲಿಗೆ ಹೋಗಿ ಬಂದವರು ಎಂಬ ಆರೋಪ ಮಾಡುತ್ತಿದ್ದಾರೆ. ಬಿಎಸ್ ವೈ ಅವರ ವಿರುದ್ಧದ ಪ್ರಕರಣಗಳಲ್ಲಿ ಕೋರ್ಟ್ ಖುಲಾಸೆ ನೀಡಿದೆ ಎಂಬ ಅರಿವು ಇದ್ದರೂ, ಕಾಂಗ್ರೆಸ್ಸಿಗರು ಜಾಣಮೌನ ವಹಿಸುತ್ತಿದ್ದಾರೆ. ಇತ್ತ ಆರೋಪ ಮುಕ್ತ ಬಿಎಸ್ ವೈ ವಿರುದ್ಧ ಬೊಗಳೇ ಬಿಡುವ ಕಾಂಗ್ರೆಸ್ಸಿಗರ ಯುವರಾಜ ರಾಹುಲ್ ಗಾಂಧಿ, ಮೇವು ಹಗರಣದ ಅಪರಾಧಿ, ಜೈಲಿನಲ್ಲೇ ಜೀವನ ನಡೆಸುತ್ತಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಅವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸುತ್ತಾರೆ. ದೆಹಲಿಯ ಅಖಿಲ ಭಾರತೀಯ ವೈದ್ಯ ವಿಜ್ಞಾನ ಸಂಸ್ಥೆ (ಏಮ್ಸ್) ನಲ್ಲಿ ರಾಗಾ ಲಾಲುರನ್ನು ಭೇಟಿ ಮಾಡಿದ್ದಾರೆ. ಇದು ಕಾಂಗ್ರೆಸ್ಸಿಗರ ಎಡಬಿಡಂಗಿತನಕ್ಕೆ ಸಾಕ್ಷಿಯಾಗಿ ನಿಲ್ಲುತ್ತದೆ.

ಆರೋಪ ಮುಕ್ತರು ಮತ್ತು ಕೋರ್ಟ್ ನಿಂದ ಛೀ ಮಾರಿ ಹಾಕಿಸಿಕೊಂಡು ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ವ್ಯಕ್ತಿಯ ಮಧ್ಯೆ ಅದೆಷ್ಟು ಭಿನ್ನತೆ ಇದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಸೇರಿ ಎಲ್ಲ ಕಾಂಗ್ರೆಸ್ಸಿಗರು ಅರ್ಥ ಮಾಡಿಕೊಳ್ಳಬೇಕು. ರಾಹುಲ್ ಗಾಂಧಿ ಜೈಲುವಾಸಿ ಲಾಲು ಪ್ರಸಾಧ್ ಯಾದವ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಎಷ್ಟು ಸಾಚಾತನದಿಂದ ಕೂಡಿದೆ ಎಂಬುದು ಸಾಬೀತು ಮಾಡಿದೆ. ಬಿಎಸ್ ಯಡಿಯೂರಪ್ಪ ವಿರುದ್ಧದ ಭಾಗಶಃ ಪ್ರಕರಣಗಳಿಗೆ ಕೋರ್ಟ್ ಇತಿಶ್ರೀ ಹಾಡಿದೆ. ಅವರನ್ನು ವಿನಾಕಾರಣ ಪ್ರಕರಣಗಳಲ್ಲಿ ಸಿಲುಕಿಸಿರುವುದು ಕೋರ್ಟ್ ನಿಂದಲೇ ತಿಳಿದುಬಂದಿದೆ.

ಇತ್ತ ದೇಶ ಆತಂಕದ ಸ್ಥಿತಿಯಲ್ಲಿ ಗಡಿಯಲ್ಲಿ ಸೈನಿಕರು ಗುದ್ದಾಡುತ್ತಿರುವಾಗ ಚೀನಾ ರಾಯಭಾರಿಯೊಂದಿಗೆ ಮಾತುಕತೆಗೆ ಇಳಿಯುವ ರಾಹುಲ್ ಗಾಂಧಿ ಸೇರಿ ಇಡೀ ಕಾಂಗ್ರೆಸ್ ಮತ್ತು ಎಡಬಿಡಂಗಿಗಳ ಗ್ಯಾಂಗ್ ತಮ್ಮ ಸಾಚಾತನವನ್ನು ಕೇವಲ ಮಾತಿನಲ್ಲಿ ತೋರಿಸದೇ ಕೃತಿಯಲ್ಲೂ ಇಳಿಸಬೇಕು.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
ತೇಜಸ್ವಿ ಪ್ರತಾಪ ಮೈಸೂರು June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
ತೇಜಸ್ವಿ ಪ್ರತಾಪ ಮೈಸೂರು June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search