• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹತ್ತು ದಿನದಲ್ಲಿ ಕರ್ನಾಟಕಕ್ಕೆ ಅಬ್ಬರಿಸಲಿವೆ ಮೋದಿ, ಶಾ, ಯೋಗಿ 65 ಅಲೆ, ಸಿಎಂಗಿಲ್ಲಿ ನಡುಕ!

TNN Correspondent Posted On May 1, 2018


  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ದಿನೇದಿನೆ ಚುನಾವಣೆ ಕಾವು ರಂಗೇರುತ್ತಿದೆ. ಆಡಳಿತ ವಿರೋಧಿ ಅಲೆ ರಾಜ್ಯ ಸರ್ಕಾರವನ್ನು ನಲುಗಿಸುತ್ತಿದ್ದರೆ, ಈ ಬಾರಿ ಗೆದ್ದೇ ತೀರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಘಟಾನುಘಟಿಗಳೇ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಇರುವ ಅಲೆ ಮತ್ತಷ್ಟು ಜೋರಾಗಲಿದೆ ಎಂದೇ ಹೇಳಲಾಗುತ್ತಿದೆ.

ಹೌದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಇದರ ನಡುವೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ ಸಹ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಮೂವರುಳ್ಳ ರುಸ್ತುಂ ಜೋಡಿ ಮುಂದಿನ 10 ದಿನದಲ್ಲಿ ಬರೋಬ್ಬರಿ 65 ರ್ಯಾಲಿ ನಡೆಸಲಿದ್ದು, ಎರಡು ಕಡೆ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಡುಕವೇ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 15 ರ್ಯಾಲಿಯಲ್ಲಿ ಪಾಲ್ಗೊಂಡರೆ, ಅಮಿತ್ ಶಾ 30 ಮತ್ತು ಯೋಗಿ ಆದಿತ್ಯನಾಥರು ಬರೋಬ್ಬರಿ 20 ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂರೂ ನಾಯಕರಿಗೆ ರಾಜ್ಯದ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ಸ್ಥಳೀಯ ಮುಖಂಡರು ಸಾಥ್ ನೀಡಲಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಜೋರಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಮೇ 10ರಂದು ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಇದಕ್ಕೂ ಮುನ್ನ ಈ ಮೂವರು ನಾಯಕರು ರಾಜ್ಯದಲ್ಲಿ ಬಿಜೆಪಿ ಪರ ಭರ್ಜರಿಯಾಗಿ ಪ್ರಚಾರ ಮಾಡಲಿದ್ದಾರೆ. ರ್ಯಾಲಿ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಅನುದಾನ, ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.

 

  • Share On Facebook
  • Tweet It


- Advertisement -


Trending Now
ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
Tulunadu News December 6, 2023
9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
Tulunadu News December 6, 2023
Leave A Reply

  • Recent Posts

    • ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!
    • ಜನವರಿ 21 ರ ಮೊದಲೇ ಅಯೋಧ್ಯೆಗೆ ಬಂದರೆ ಉತ್ತಮ ಎಂದು ಟ್ರಸ್ಟ್ ಮನವಿ!
    • ತೆಲಂಗಾಣ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದರೆ, ಕನುಗೋಳು ಹಿಡಿಯುವವರಿಲ್ಲ!
    • ಯುವಕರನ್ನು ಕಿಡ್ನಾಪ್ ಮಾಡಿ ಮದುವೆ ಮಾಡಿಸುವ ಗ್ಯಾಂಗ್ ಪಕ್ಡ್ವಾ!
    • ಡಚ್ ಯುವತಿಯ ಪ್ರೇಮಕ್ಕೆ ಬಿದ್ದ ಯುಪಿ ಯುವಕ, ಕಂಕಣಭಾಗ್ಯ!
    • ಪಾಕ್ ಕ್ರಿಕೆಟಿಗರ ಸ್ವಾಗತಕ್ಕೆ ಸಿಡ್ನಿ ವಿಮಾನ ನಿಲ್ದಾಣದಲ್ಲಿ ಯಾರೂ ಬಂದಿಲ್ಲ!
  • Popular Posts

    • 1
      ಉದಯನಿಧಿ ಮಾಡಿದ ಡ್ಯಾಮೇಜ್ ಸರಿಯಾಗಿಲ್ಲ!
    • 2
      9 ಬಾರಿ ಅಂಬಾರಿ ಹೊತ್ತ ಅರ್ಜುನನಿಗೆ ಸ್ವಲ್ಪವೂ ಮಹತ್ವವಿಲ್ಲವೇ!
    • 3
      ಊರಿನ ಬಹುತೇಕ ಜನ ಒಂದೇ ಬಿಲ್ಡಿಂಗ್ ನಲ್ಲಿ ವಾಸ!
    • 4
      ಇ.0.ಡಿ.ಯಾ ಮೈತ್ರಿಕೂಟದ ಸಭೆಗೆ ನಿತೀಶ್, ಅಖಿಲೇಶ್, ಮಮತಾ ಡೌಟ್!
    • 5
      #ಮೆಲೋಡಿ ಹ್ಯಾಶ್ ಟ್ಯಾಗ್ ಸಿಕ್ಕಾಪಟ್ಟೆ ವೈರಲ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search