• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹತ್ತು ದಿನದಲ್ಲಿ ಕರ್ನಾಟಕಕ್ಕೆ ಅಬ್ಬರಿಸಲಿವೆ ಮೋದಿ, ಶಾ, ಯೋಗಿ 65 ಅಲೆ, ಸಿಎಂಗಿಲ್ಲಿ ನಡುಕ!

TNN Correspondent Posted On May 1, 2018
0


0
Shares
  • Share On Facebook
  • Tweet It

ಬೆಂಗಳೂರು: ಕರ್ನಾಟಕದಲ್ಲಿ ದಿನೇದಿನೆ ಚುನಾವಣೆ ಕಾವು ರಂಗೇರುತ್ತಿದೆ. ಆಡಳಿತ ವಿರೋಧಿ ಅಲೆ ರಾಜ್ಯ ಸರ್ಕಾರವನ್ನು ನಲುಗಿಸುತ್ತಿದ್ದರೆ, ಈ ಬಾರಿ ಗೆದ್ದೇ ತೀರಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಘಟಾನುಘಟಿಗಳೇ ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಇರುವ ಅಲೆ ಮತ್ತಷ್ಟು ಜೋರಾಗಲಿದೆ ಎಂದೇ ಹೇಳಲಾಗುತ್ತಿದೆ.

ಹೌದು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿ ಅಬ್ಬರದ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಇದರ ನಡುವೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಯೋಗಿ ಆದಿತ್ಯನಾಥ ಸಹ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಈ ಮೂವರುಳ್ಳ ರುಸ್ತುಂ ಜೋಡಿ ಮುಂದಿನ 10 ದಿನದಲ್ಲಿ ಬರೋಬ್ಬರಿ 65 ರ್ಯಾಲಿ ನಡೆಸಲಿದ್ದು, ಎರಡು ಕಡೆ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಡುಕವೇ ಉಂಟಾಗಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 15 ರ್ಯಾಲಿಯಲ್ಲಿ ಪಾಲ್ಗೊಂಡರೆ, ಅಮಿತ್ ಶಾ 30 ಮತ್ತು ಯೋಗಿ ಆದಿತ್ಯನಾಥರು ಬರೋಬ್ಬರಿ 20 ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂರೂ ನಾಯಕರಿಗೆ ರಾಜ್ಯದ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ಸ್ಥಳೀಯ ಮುಖಂಡರು ಸಾಥ್ ನೀಡಲಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆ ಜೋರಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಮೇ 10ರಂದು ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಇದಕ್ಕೂ ಮುನ್ನ ಈ ಮೂವರು ನಾಯಕರು ರಾಜ್ಯದಲ್ಲಿ ಬಿಜೆಪಿ ಪರ ಭರ್ಜರಿಯಾಗಿ ಪ್ರಚಾರ ಮಾಡಲಿದ್ದಾರೆ. ರ್ಯಾಲಿ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಅನುದಾನ, ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.

 

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search