• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ ಸುದ್ದಿ 

ಅಮೆರಿಕದ ಒಕ್ಲಾಹಾಮಾ ನಗರದ ಸೆನೆಟ್ ನಲ್ಲಿ ಮೊಳಗಿದ ಸಂಸ್ಕೃತ ಶ್ಲೋಕ

TNN Correspondent Posted On May 2, 2018
0


0
Shares
  • Share On Facebook
  • Tweet It

ಒಕ್ಲಾಹಾಮಾ: ಭಾರತ ಪುರಾತನ ಶ್ಲೋಕಗಳ ಶಕ್ತಿ ವಿಶ್ವಾದ್ಯಂತ ಅನುರಣಿಸುತ್ತಿದ್ದು, ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕದ ಒಕ್ಲಾಹಾಮಾ ನಗರದ ಸೆನೆಟ್ ಆರಂಭವನ್ನು ಸಂಸ್ಕೃತ ಶ್ಲೋಕಗಳನ್ನು ಪಠಿಸುವ ಮೂಲಕ ಆರಂಭಿಸಿದ್ದು, ಭಾರತೀಯ, ಹಿಂದೂ ಸಂಸ್ಕೃತಿಯ ತಾಕತ್ತನ್ನು ವಿಶ್ವಕ್ಕೆ ಮತ್ತೊಮ್ಮೆ ಸಾಬೀತು ಪಡಿಸಿದಂತಾಗಿದೆ.

ಏ.30ರಂದು ಒಕ್ಲಾಹಾಮಾ ನಗರದ ಸೆನೆಟ್ ನ ಸಭೆ ಆರಂಭಕ್ಕೂ ಮುನ್ನ ಯೂನಿವರ್ಸಲ್ ಸೊಸೈಟಿ ಆಫ್ ಹಿಂದೂಯಿಸಂ ಅಧ್ಯಕ್ಷ ರಾಜನ್ ಝಡ್ ಪುರಾತನ ಭಾರತೀಯ ಸಂಸ್ಕೃತ ಗ್ರಂಥಗಳಿಂದ ಆಯ್ದ ಶ್ಲೋಕಗಳನ್ನು ಪಠಿಸುವ ಮೂಲಕ ಸೆನೆಟ್ ಆರಂಭಿಸಿದ್ದು ವಿಶೇಷವಾಗಿತ್ತು. ಸಂಸ್ಕೃತ ಶ್ಲೋಕಗಳನ್ನು ಪಠಿಸಿದ ನಂತರ ರಾಜನ್ ಝಡ್ ಅವರು ಶ್ಲೋಕಗಳ  ಮಹತ್ವವನ್ನು, ಅರ್ಥ, ಗೂಡಾರ್ಥಗಳನ್ನು ಇಂಗ್ಲಿಷ್ ನಲ್ಲಿ ತಿಳಿಸುವ ಮೂಲಕ ಸೆನೆಟ್ ಸದಸ್ಯರಿಗೆ ಶ್ಲೋಕಗಳ ಮಹತ್ವವನ್ನು ಅರುಹಿದರು.

ಋಗವೇದ, ಉಪನಿಷತ್, ಭಗವತ್ ಗೀತಾದಲ್ಲಿರುವ ಮಹತ್ವದ ಶ್ಲೋಕಗಳನ್ನು ಓಂ ಮೂಲ ಮಂತ್ರದೊಂದಿಗೆ ಆರಂಭಿಸಿ, ಅದರಿಂದಲೇ ಅಂತ್ಯಗೊಳಿಸಿದ್ದಾರೆ. ರಾಜನ್ ಝಡ್ ಹಿಂದೂ ಮುಖಂಡರಾಗಿದ್ದು, ‘ಅಸತೋಮಾ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ, ಮೃತ್ಯೋಮ ಅಮೃತಂಗಮಯ’ ಎಂಬ ಶಾಂತಿ ಮಂತ್ರದ ಮಹತ್ವವನ್ನು ಸೆನೆಟ್ ಸದಸ್ಯರಿಗೆ ಇಂಗ್ಲಿಷ್ ನಲ್ಲಿ ತಿಳಿ ಹೇಳುವ ಮೂಲಕ ಸಮಾಜಸೇವೆ, ಜೀವನದ ಪಾಠವನ್ನು ಕೇವಲ ಒಂದೇ ಶ್ಲೋಕದಲ್ಲಿ ತಿಳಿಹೇಳಿದ್ದು ವಿಶೇಷವಾಗಿತ್ತು.

ಅಮೆರಿಕದಲ್ಲಿ 1.1 ಮಿಲಿಯನ್ ಹಿಂದೂಗಳು ವಾಸ ಮಾಡುತ್ತಿದ್ದು, ಹಿಂದೂತ್ವದ ಶಕ್ತಿ ವಿಶ್ವದೆಲ್ಲೆಡೆ ಪಸರಿಸುತ್ತಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿ ನಿಂತಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search