• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ ಸುದ್ದಿ 

ಅಮೆರಿಕದ ಒಕ್ಲಾಹಾಮಾ ನಗರದ ಸೆನೆಟ್ ನಲ್ಲಿ ಮೊಳಗಿದ ಸಂಸ್ಕೃತ ಶ್ಲೋಕ

TNN Correspondent Posted On May 2, 2018
0


0
Shares
  • Share On Facebook
  • Tweet It

ಒಕ್ಲಾಹಾಮಾ: ಭಾರತ ಪುರಾತನ ಶ್ಲೋಕಗಳ ಶಕ್ತಿ ವಿಶ್ವಾದ್ಯಂತ ಅನುರಣಿಸುತ್ತಿದ್ದು, ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕದ ಒಕ್ಲಾಹಾಮಾ ನಗರದ ಸೆನೆಟ್ ಆರಂಭವನ್ನು ಸಂಸ್ಕೃತ ಶ್ಲೋಕಗಳನ್ನು ಪಠಿಸುವ ಮೂಲಕ ಆರಂಭಿಸಿದ್ದು, ಭಾರತೀಯ, ಹಿಂದೂ ಸಂಸ್ಕೃತಿಯ ತಾಕತ್ತನ್ನು ವಿಶ್ವಕ್ಕೆ ಮತ್ತೊಮ್ಮೆ ಸಾಬೀತು ಪಡಿಸಿದಂತಾಗಿದೆ.

ಏ.30ರಂದು ಒಕ್ಲಾಹಾಮಾ ನಗರದ ಸೆನೆಟ್ ನ ಸಭೆ ಆರಂಭಕ್ಕೂ ಮುನ್ನ ಯೂನಿವರ್ಸಲ್ ಸೊಸೈಟಿ ಆಫ್ ಹಿಂದೂಯಿಸಂ ಅಧ್ಯಕ್ಷ ರಾಜನ್ ಝಡ್ ಪುರಾತನ ಭಾರತೀಯ ಸಂಸ್ಕೃತ ಗ್ರಂಥಗಳಿಂದ ಆಯ್ದ ಶ್ಲೋಕಗಳನ್ನು ಪಠಿಸುವ ಮೂಲಕ ಸೆನೆಟ್ ಆರಂಭಿಸಿದ್ದು ವಿಶೇಷವಾಗಿತ್ತು. ಸಂಸ್ಕೃತ ಶ್ಲೋಕಗಳನ್ನು ಪಠಿಸಿದ ನಂತರ ರಾಜನ್ ಝಡ್ ಅವರು ಶ್ಲೋಕಗಳ  ಮಹತ್ವವನ್ನು, ಅರ್ಥ, ಗೂಡಾರ್ಥಗಳನ್ನು ಇಂಗ್ಲಿಷ್ ನಲ್ಲಿ ತಿಳಿಸುವ ಮೂಲಕ ಸೆನೆಟ್ ಸದಸ್ಯರಿಗೆ ಶ್ಲೋಕಗಳ ಮಹತ್ವವನ್ನು ಅರುಹಿದರು.

ಋಗವೇದ, ಉಪನಿಷತ್, ಭಗವತ್ ಗೀತಾದಲ್ಲಿರುವ ಮಹತ್ವದ ಶ್ಲೋಕಗಳನ್ನು ಓಂ ಮೂಲ ಮಂತ್ರದೊಂದಿಗೆ ಆರಂಭಿಸಿ, ಅದರಿಂದಲೇ ಅಂತ್ಯಗೊಳಿಸಿದ್ದಾರೆ. ರಾಜನ್ ಝಡ್ ಹಿಂದೂ ಮುಖಂಡರಾಗಿದ್ದು, ‘ಅಸತೋಮಾ ಸದ್ಗಮಯ, ತಮಸೋಮಾ ಜ್ಯೋತಿರ್ಗಮಯ, ಮೃತ್ಯೋಮ ಅಮೃತಂಗಮಯ’ ಎಂಬ ಶಾಂತಿ ಮಂತ್ರದ ಮಹತ್ವವನ್ನು ಸೆನೆಟ್ ಸದಸ್ಯರಿಗೆ ಇಂಗ್ಲಿಷ್ ನಲ್ಲಿ ತಿಳಿ ಹೇಳುವ ಮೂಲಕ ಸಮಾಜಸೇವೆ, ಜೀವನದ ಪಾಠವನ್ನು ಕೇವಲ ಒಂದೇ ಶ್ಲೋಕದಲ್ಲಿ ತಿಳಿಹೇಳಿದ್ದು ವಿಶೇಷವಾಗಿತ್ತು.

ಅಮೆರಿಕದಲ್ಲಿ 1.1 ಮಿಲಿಯನ್ ಹಿಂದೂಗಳು ವಾಸ ಮಾಡುತ್ತಿದ್ದು, ಹಿಂದೂತ್ವದ ಶಕ್ತಿ ವಿಶ್ವದೆಲ್ಲೆಡೆ ಪಸರಿಸುತ್ತಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿ ನಿಂತಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search