• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದರಸಾದಲ್ಲಿ ಬಾಲಕಿಯ ಅತ್ಯಾಚಾರ ಮಾಡಿದವ ಬಾಲಾಪರಾಧಿ ಅಲ್ಲ ಎಂದು ಸಾಬೀತು!

TNN Correspondent Posted On May 2, 2018
0


0
Shares
  • Share On Facebook
  • Tweet It

ನವದೆಹಲಿ: ದೇಶದಲ್ಲಿ ಎಂತಹ ದುರಂತ ನಡೆಯುತ್ತಿದೆ ನೋಡಿ. ಜಮ್ಮು-ಕಾಶ್ಮೀರದ ಕಠುವಾ ಎಂಬಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಇಡೀ ಹಿಂದೂಗಳನ್ನು, ಹಿಂದೂ ದೇವಾಲಯಗಳನ್ನೇ ಕಟಕಟಗೆ ತರಲಾಯಿತು. ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಇಡೀ ದೇವರನ್ನೇ ಪ್ರಶ್ನೆ ಮಾಡಲಾಯಿತು. ಆದರೆ ಏಪ್ರಿಲ್ 21ರಂದು ದೆಹಲಿ ಗಾಜಿಯಾಬಾದ್ ಮಸೀದಿಯೊಂದರಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಕುರಿತು ಯಾವುದೇ ಮಾಧ್ಯಮಗಳು, ಪ್ರತಿಪಕ್ಷಗಳು, ಬುದ್ಧಿಜೀವಿಗಳು ಪ್ರಶ್ನೆ ಮಾಡುತ್ತಿಲ್ಲ.

ಅಷ್ಟೇ ಅಲ್ಲ, ಹೀಗೆ ಮದರಸಾದಲ್ಲಿಯೇ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಗೆ ಶಿಕ್ಷೆ ಪ್ರಮಾಣ ಕಡಿಮೆ ಮಾಡಿಸಲು, ಆತ ಬಾಲಾಪರಾಧಿ ಎಂದು ಸಾಬೀತುಪಡಿಸಲು ಹಲವು ಶಕ್ತಿಗಳು ಪ್ರಯತ್ನಿಸಿದ್ದವು. ಆದರೆ ಈ ವಿಚಾರದಲ್ಲಾದರೂ ಬಾಲಕಿಗೆ ನ್ಯಾಯ ಸಿಗುವ ಲಕ್ಷಣ ಗೋಚರಿಸಿದ್ದು, ಆರೋಪಿ ಬಾಲಾಪರಾಧಿ ಅಲ್ಲ ಎಂದು ವರದಿಯಿಂದ ದೃಢಪಟ್ಟಿದೆ.

ಬಾಲಕಿಯ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಗುಲಾಮ್ ಶಾಹೀದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತ ಬಾಲಾಪರಾಧಿ ಎಂದು ಹೇಳಲಾಗಿತ್ತು. ಆದರೆ ಆತನ ಮೂಳೆಯ ಸಾಮರ್ಥ್ಯ ಮಾಡಿದ ಬಳಿಕ, ಆತ ಬಾಲಾಪರಾಧಿ ಅಲ್ಲ ಎಂದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಾಗ್ಯೂ ಗುಲಾಮ್ ಶಾಹೀದ್ 18 ವರ್ಷದೊಳಗಿನವ ಎಂಬ ಕುರಿತು ಆತನ ಪೋಷಕರು ಸಮರ್ಪಕವಾದ ದಾಖಲೆ ಒದಗಿಸುವಲ್ಲಿಯೂ ವಿಫಲವಾಗಿರುವುದು ಪ್ರಕರಣದಲ್ಲಿ ಆರೋಪಿಗೆ ಕಠಿಣ ಶಿಕ್ಷೆಯಾಗುವ ಲಕ್ಷಣ ಇವೆ. ಇಷ್ಟಾದರೂ ಈ ಪ್ರಕರಣ ಮಾತ್ರ ಸುದ್ದಿಯಾಗುತ್ತಿಲ್ಲ, ಯಾರೂ ಕನಿಷ್ಠ ಖಂಡನೆಯನ್ನೂ ವ್ಯಕ್ತಪಡಿಸಿಲ್ಲ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • 4
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search