• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೇನೆ ಬಲಪಡಿಸಲು ಮೋದಿ ದಿಟ್ಟ ಹೆಜ್ಜೆ, ಸೈನ್ಯಕ್ಕಾಗಿ ಖರ್ಚು ಮಾಡುವ ಟಾಪ್ 5 ರಾಷ್ಟ್ರಗಳಲ್ಲಿ ಭಾರತವೂ ಒಂದು!

TNN Correspondent Posted On May 2, 2018
0


0
Shares
  • Share On Facebook
  • Tweet It

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಭಾರತೀಯ ಸೇನೆ ಯಾವ ರಾಷ್ಟ್ರವನ್ನು ಬೇಕಾದರೂ ಎದುರಿಸಬಲ್ಲೆ ಎಂಬ ಶಕ್ತಿ ಪಡೆದಿದೆ. ಅದಕ್ಕೆ ಮೇಕ್ ಇನ್ ಇಂಡಿಯಾ ಮೂಲಕ ಶಸ್ತ್ರಾಸ್ತ್ರ ತಯಾರಿ, ವಿದೇಶದಿಂದ ಆಮದು, ಸೇನಾ ಶಸ್ತ್ರಾಸ್ತ್ರಗಳ ಆಧುನೀಕರಣ ಸೇರಿ ಹಲವು ಅಂಶಗಳು ಕಾರಣವಾಗಿವೆ. ಹಾಗಾಗಿಯೇ ನಮ್ಮ ಸೇನೆ ಯಾವಾಗಲೂ ಯುದ್ಧಸನ್ನದ್ಧವಾಗಿರುವ ಜತೆಗೆ, ವೈರಿ ರಾಷ್ಟ್ರದ ಎದೆ ನಡುಗಿಸುವಂತಹ ಶಕ್ತಿ ಪಡೆದಿದೆ.

ಹಾಗಂತ, ಸೇನೆ ಬಲಪಡಿಸುವುದು ಎಂದರೆ ಅದು ನೂರಾರು ಕೋಟಿ ರೂಪಾಯಿಯಲ್ಲಿ ಮುಗಿದುಹೋಗುವುದಿಲ್ಲ. ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿಯಬೇಕಾಗುತ್ತದೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮರ್ಪಕವಾಗಿ ಮಾಡಿದ್ದು, 2017ರಲ್ಲಿ ಸೇನೆ ಬಲಪಡಿಸಲು ಖರ್ಚು ಮಾಡಿದ ವಿಶ್ವದ ಎಲ್ಲ ರಾಷ್ಟ್ರಗಳಲ್ಲೇ ಭಾರತಕ್ಕೆ ಐದನೇ ಸ್ಥಾನ ಲಭಿಸಿದೆ.

ಸ್ವೀಡನ್ ನ ಸ್ಟಾಕ್ ಹೋಂ ಇಂಟರ್ ನ್ಯಾಷನಲ್ ಪೀಸ್ ರಿಸರ್ಚ್ ಸಂಸ್ಥೆಯ ವರದಿ ಪ್ರಕಾರ ಭಾರತ ಸೈನ್ಯಕ್ಕಾಗಿ ಹೆಚ್ಚು ಹಣ ಖರ್ಚು ಮಾಡುವ ಟಾಪ್ 5 ದೇಶಗಳಲ್ಲಿ ಸ್ಥಾನ ಪಡೆದಿದೆ ಎಂದು ತಿಳಿಸಿದೆ.

ಅಂದರೆ 2017ರಲ್ಲಿ ಜಾಗತಿಕವಾಗಿ ಎಲ್ಲ ರಾಷ್ಟ್ರಗಳು 1.73 ಲಕ್ಷ ಕೋಟಿ ಡಾಲರ್ ವ್ಯಯಿಸಿದ್ದು, ಇದರಲ್ಲಿ ಭಾರತ ಮತ್ತು ಚೀನಾದ ಪಾಲೇ ಶೇ.60ರಷ್ಟಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ. 2017ರಲ್ಲಿ ಚೀನಾ ಸೇನೆ ಬಲಪಡಿಸಲು 228 ಬಿಲಿಯನ್ ಅಮೆರಿಕನ್ ಡಾಲರ್ ಹಣ ವ್ಯಯಿಸಿದರೆ, ಭಾರತ 63.9 ಬಿಲಿಯನ್ ಡಾಲರ್ ಖರ್ಚು ಮಾಡಿದೆ. ಅಂದರೆ ಇದು 2016ರಲ್ಲಿ ಖರ್ಚು ಮಾಡಿದ ಹಣಕ್ಕಿಂತ ಶೇ.5.5ರಷ್ಟು ಜಾಸ್ತಿಯಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಬರೀ ದೀಪಾವಳಿಗೊಮ್ಮೆ ಗಡಿಗೆ ತೆರಳಿ ಸೈನಿಕರ ಜತೆ ದೀಪಾವಳಿ ಆಚರಿಸದೆ, ಸೈನಿಕರ ಆತ್ಮಸ್ಥೈರ್ಯ ಮತ್ತು ಭಾರತದ ಶಕ್ತಿ ವೃದ್ಧಿಸಲು ಅಪಾರ ಪ್ರಮಾಣದ ಹಣ ವ್ಯಯಿಸುತ್ತಿದ್ದಾರೆ. ಅದಕ್ಕಾಗಿಯೇ ಭಾರತ ಇಂದು ಜಾಗತಿಕವಾಗಿ ಎದೆಸೆಟೆದು ನಿಲ್ಲುವಂತಾಗಿದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search