• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಹಿಂದೂ ದೇವರ ಫೋಟೋ ಮುದ್ರಿಸಿ ಸೌಹಾರ್ದ ಮೆರೆದ ಆ ಮುಸ್ಲಿಂ ವ್ಯಕ್ತಿ ಯಾರು ಗೊತ್ತೇ?

TNN Correspondent Posted On May 2, 2018
0


0
Shares
  • Share On Facebook
  • Tweet It

ದೇಶದ ಇತಿಹಾಸದ ಉದ್ದಕ್ಕೂ ಅಲ್ಪಸಂಖ್ಯಾತರು ಹಾಗೂ ಹಿಂದೂಗಳ ನಡುವೆ ಕಂದಕ ಸೃಷ್ಟಿಸುವ ಹಲವು ರಾಜಕಾರಣಿಗಳು, 60 ವರ್ಷ ದೇಶವಾಳಿದ ಪಕ್ಷವನ್ನು ನಾವು ನೋಡಿದ್ದೇವೆ. ಇಂದಿಗೂ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ಅಭದ್ರತೆ ಇದೆ ಎಂದು ಬೊಬ್ಬೆ ಹಾಕುವ ಕಾಂಗ್ರೆಸ್ಸಿಗರು, ಬುದ್ಧಿಜೀವಿಗಳ ಸಂಖ್ಯೆ ಜಾಸ್ತಿಯೇ ಇದೆ.

ಆದರೂ, ಇವರೆಲ್ಲರು ಹೀಗೆ ಬೊಬ್ಬೆ ಹಾಕಿದರೂ, ಉತ್ತರ ಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಹಿಂದೂ ದೇವರ ಭಾವಚಿತ್ರ ಮುದ್ರಿಸುವ ಮೂಲಕ ಹಿಂದೂ-ಮುಸ್ಲಿಂ ಸೌಹಾರ್ದಕ್ಕೆ ಮುನ್ನುಡಿ ಬರೆದಿದ್ದಾನೆ.

ಹೌದು, ಉತ್ತರ ಪ್ರದೇಶದ ಸುಲ್ತಾನ್ ಪುರ ಜಿಲ್ಲೆಯ ಬಾಘ್ ಸರಾಯ್ ಎಂಬ ಗ್ರಾಮದ ಮೊಹಮ್ಮದ್ ಸಲೀಂ ಎಂಬಾತನೇ ಇಂತಹ ಸೌಹಾರ್ದಯುತ ನಡೆ ಇಟ್ಟಿದ್ದಾನೆ. ತನ್ನ ಮಗಳ ಮದುವೆ ನಿಶ್ಚಯವಾಗಿದ್ದು, ಸೌಹಾರ್ದದ ಸಂಕೇತವಾಗಿ ಹಿಂದೂ ದೇವರ ಭಾವಚಿತ್ರ ಮುದ್ರಿಸಿದ್ದೇನೆ. ಅಲ್ಲದೆ ರಾಮ ಮತ್ತು ಸೀತೆ ಇರುವ ಕ್ಯಾಲೆಂಡರ್ ಸಹ ಖರೀದಿಸಿದ್ದು, ಹಳ್ಳಿಹಳ್ಳಿಗೂ ತೆರಳಿ ಮದುವೆ ಆಮಂತ್ರಣ ಹಾಗೂ ರಾಮ-ಸೀತೆ ಇರುವ ಕ್ಯಾಲೆಂಡರ್ ನೀಡುತ್ತಿದ್ದೇನೆ ಎಂದು ಸಲೀಂ ತಿಳಿಸಿದ್ದಾರೆ.

ನನಗೆ ಹಿಂದೂ ಧರ್ಮದವರು ಸಹ ಗೆಳೆಯರಿದ್ದಾರೆ. ಅವರಿಗೆ ಅವರದೇ ಆದ ಸಂಪ್ರದಾಯದಲ್ಲಿ ಮದುವೆಗೆ ಸ್ವಾಗತಿಸಲು ಹಿಂದೂ ದೇವತೆಗಳ ಭಾವಚಿತ್ರ ಮುದ್ರಿಸಿದ್ದೇನೆ. ಇದಕ್ಕೆ ವರನ ಕಡೆಯವರೂ ಸಮ್ಮತಿಸಿದ್ದಾರೆ. ಹಿಂದೂ ದೇವತೆಗಳ ಚಿತ್ರ ಇರುವ 350 ಹಾಗೂ ಮುಸ್ಲಿಂ ಸಂಪ್ರದಾಯದಂತೆ 400 ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಧರ್ಮ-ಧರ್ಮಗಳ ನಡುವೆ ಕಂದಕ ಸೃಷ್ಟಿಸುವವರ ನಡುವೆ, ಹಿಂದೂ ದೇವರೆಂದರೆ ಕೀಳಾಗಿ ಕಾಣುವಂತೆ ಬೋಧಿಸುವ ಮುಸ್ಲಿಂ ಮೌಲ್ವಿಗಳು ಇರುವವರ ನಡುವೆ ಮೊಹಮ್ಮದ್ ಸಲೀಂ ಸೌಹಾರ್ದದ ಮೂರ್ತ ರೂಪವಾಗಿ ಕಾಣುತ್ತಾನೆ. ಆ ರಾಮ-ಸೀತೆ ಆಶೀರ್ವಾದ ಇವರ ಮೇಲಿರಲಿ. ಯಾವ ಮೌಲ್ವಿಯೂ ಇದಕ್ಕೆ ಫತ್ವಾ ಹೊರಡಿಸದಿರಲಿ ಎಂಬುದೇ ನಮ್ಮ ಆಶಯವಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search