• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗಳ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಹಿಂದೂ ದೇವರ ಫೋಟೋ ಮುದ್ರಿಸಿ ಸೌಹಾರ್ದ ಮೆರೆದ ಆ ಮುಸ್ಲಿಂ ವ್ಯಕ್ತಿ ಯಾರು ಗೊತ್ತೇ?

TNN Correspondent Posted On May 2, 2018
0


0
Shares
  • Share On Facebook
  • Tweet It

ದೇಶದ ಇತಿಹಾಸದ ಉದ್ದಕ್ಕೂ ಅಲ್ಪಸಂಖ್ಯಾತರು ಹಾಗೂ ಹಿಂದೂಗಳ ನಡುವೆ ಕಂದಕ ಸೃಷ್ಟಿಸುವ ಹಲವು ರಾಜಕಾರಣಿಗಳು, 60 ವರ್ಷ ದೇಶವಾಳಿದ ಪಕ್ಷವನ್ನು ನಾವು ನೋಡಿದ್ದೇವೆ. ಇಂದಿಗೂ ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತರಿಗೆ ಅಭದ್ರತೆ ಇದೆ ಎಂದು ಬೊಬ್ಬೆ ಹಾಕುವ ಕಾಂಗ್ರೆಸ್ಸಿಗರು, ಬುದ್ಧಿಜೀವಿಗಳ ಸಂಖ್ಯೆ ಜಾಸ್ತಿಯೇ ಇದೆ.

ಆದರೂ, ಇವರೆಲ್ಲರು ಹೀಗೆ ಬೊಬ್ಬೆ ಹಾಕಿದರೂ, ಉತ್ತರ ಪ್ರದೇಶದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಹಿಂದೂ ದೇವರ ಭಾವಚಿತ್ರ ಮುದ್ರಿಸುವ ಮೂಲಕ ಹಿಂದೂ-ಮುಸ್ಲಿಂ ಸೌಹಾರ್ದಕ್ಕೆ ಮುನ್ನುಡಿ ಬರೆದಿದ್ದಾನೆ.

ಹೌದು, ಉತ್ತರ ಪ್ರದೇಶದ ಸುಲ್ತಾನ್ ಪುರ ಜಿಲ್ಲೆಯ ಬಾಘ್ ಸರಾಯ್ ಎಂಬ ಗ್ರಾಮದ ಮೊಹಮ್ಮದ್ ಸಲೀಂ ಎಂಬಾತನೇ ಇಂತಹ ಸೌಹಾರ್ದಯುತ ನಡೆ ಇಟ್ಟಿದ್ದಾನೆ. ತನ್ನ ಮಗಳ ಮದುವೆ ನಿಶ್ಚಯವಾಗಿದ್ದು, ಸೌಹಾರ್ದದ ಸಂಕೇತವಾಗಿ ಹಿಂದೂ ದೇವರ ಭಾವಚಿತ್ರ ಮುದ್ರಿಸಿದ್ದೇನೆ. ಅಲ್ಲದೆ ರಾಮ ಮತ್ತು ಸೀತೆ ಇರುವ ಕ್ಯಾಲೆಂಡರ್ ಸಹ ಖರೀದಿಸಿದ್ದು, ಹಳ್ಳಿಹಳ್ಳಿಗೂ ತೆರಳಿ ಮದುವೆ ಆಮಂತ್ರಣ ಹಾಗೂ ರಾಮ-ಸೀತೆ ಇರುವ ಕ್ಯಾಲೆಂಡರ್ ನೀಡುತ್ತಿದ್ದೇನೆ ಎಂದು ಸಲೀಂ ತಿಳಿಸಿದ್ದಾರೆ.

ನನಗೆ ಹಿಂದೂ ಧರ್ಮದವರು ಸಹ ಗೆಳೆಯರಿದ್ದಾರೆ. ಅವರಿಗೆ ಅವರದೇ ಆದ ಸಂಪ್ರದಾಯದಲ್ಲಿ ಮದುವೆಗೆ ಸ್ವಾಗತಿಸಲು ಹಿಂದೂ ದೇವತೆಗಳ ಭಾವಚಿತ್ರ ಮುದ್ರಿಸಿದ್ದೇನೆ. ಇದಕ್ಕೆ ವರನ ಕಡೆಯವರೂ ಸಮ್ಮತಿಸಿದ್ದಾರೆ. ಹಿಂದೂ ದೇವತೆಗಳ ಚಿತ್ರ ಇರುವ 350 ಹಾಗೂ ಮುಸ್ಲಿಂ ಸಂಪ್ರದಾಯದಂತೆ 400 ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಧರ್ಮ-ಧರ್ಮಗಳ ನಡುವೆ ಕಂದಕ ಸೃಷ್ಟಿಸುವವರ ನಡುವೆ, ಹಿಂದೂ ದೇವರೆಂದರೆ ಕೀಳಾಗಿ ಕಾಣುವಂತೆ ಬೋಧಿಸುವ ಮುಸ್ಲಿಂ ಮೌಲ್ವಿಗಳು ಇರುವವರ ನಡುವೆ ಮೊಹಮ್ಮದ್ ಸಲೀಂ ಸೌಹಾರ್ದದ ಮೂರ್ತ ರೂಪವಾಗಿ ಕಾಣುತ್ತಾನೆ. ಆ ರಾಮ-ಸೀತೆ ಆಶೀರ್ವಾದ ಇವರ ಮೇಲಿರಲಿ. ಯಾವ ಮೌಲ್ವಿಯೂ ಇದಕ್ಕೆ ಫತ್ವಾ ಹೊರಡಿಸದಿರಲಿ ಎಂಬುದೇ ನಮ್ಮ ಆಶಯವಾಗಿದೆ.

0
Shares
  • Share On Facebook
  • Tweet It




Trending Now
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
  • Popular Posts

    • 1
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 2
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 3
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 4
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • 5
      ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!

  • Privacy Policy
  • Contact
© Tulunadu Infomedia.

Press enter/return to begin your search