• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎಂಥಾ ವ್ಯತ್ಯಾಸ: 25 ವರ್ಷದ ನಂತರ ತ್ರಿಪುರಾ ಸಿಎಂ ಕಚೇರಿಯಲ್ಲಿ ಹಾರಿತು ತ್ರಿವರ್ಣ ಧ್ವಜ

TNN Correspondent Posted On May 3, 2018


  • Share On Facebook
  • Tweet It

ಅಗರ್ತಲಾ: ತ್ರಿಪುರಾದಲ್ಲಿ 25 ವರ್ಷಗಳ ಕಮ್ಯುನಿಸ್ಟ್ ಆಡಳಿತಕ್ಕೆ ಅಂತ್ಯ ಹಾಡಿದ ಬಿಜೆಪಿ ಕ್ರಾಂತಿಕ್ರಾರಿ ನಿರ್ಧಾರಗಳ ಮೂಲಕ ಗಮನ ಸೆಳೆಯುತ್ತಿದೆ. ರಾಜ್ಯದಲ್ಲಿ ಹೊಸ ಹೊಸ ಬದಲಾವಣೆಗಳನ್ನು ಜಾರಿಗೆ ತರುತ್ತದೆ. ಜೊತೆ ಜೊತೆ ದೇಶ ಭಕ್ತಿಯನ್ನು, ರಾಷ್ಟ್ರಪ್ರೇಮವನ್ನು ಬಿತ್ತುವಲ್ಲಿ ತ್ರಿಪುರಾ ಸಿಎಂ ಮೊದಲ ಸಾಲಿನಲ್ಲಿ ನಿಂತಿದ್ದು, ಅಭಿವೃದ್ಧಿಯ ಜೊತೆಗೆ ರಾಷ್ಟ್ರಪ್ರೇಮವನ್ನು ಬಿತ್ತುತ್ತಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ನಿಂತಿರುವುದು 25 ವರ್ಷದ ನಂತರ ತ್ರಿಪುರಾ ಸಿಎಂ ಕಚೇರಿಯಲ್ಲಿ ತ್ರಿವರ್ಣ ಧ್ವಜ ಅಳವಡಿಸಿರುವುದು.

ತ್ರಿಪುರಾದಲ್ಲಿ 25 ವರ್ಷ ಆಡಳಿತ ನಡೆಸಿದ ಕಮ್ಯುನಿಸ್ಟರು ರಾಷ್ಟ್ರಪ್ರೇಮಕ್ಕಿಂತ ತನ್ನ ಪಕ್ಷದ ಪ್ರೇಮವೇ ಹೆಚ್ಚು ಎಂಬಂತೆ ವರ್ತಿಸಿದ್ದರು. ರಾಷ್ಟ್ರಧ್ವಜ, ರಾಷ್ಟ್ರಗೀತೆಗೆ ಕಮ್ಯುನಿಸ್ಟರು ಗೌರವ ನೀಡುವುದು, ಸೂಕ್ತ ಸ್ಥಾನ ಮಾನ ನೀಡಿದ್ದು ಕಡಿಮೆಯೇ. ಇದೀಗ ತ್ರಿಪುರಾದಲ್ಲಿ ರಾಷ್ಟ್ರಪ್ರೇಮಿ ಪಕ್ಷ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ತ್ರಿಪುರಾದ ಚಿತ್ರಣವೇ ಬದಲಾಯಿಸುವತ್ತ ಚಿತ್ತ ಇಟ್ಟಿರುವುದು ಗಮನಾರ್ಹ.

ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಸಿಎಂ ಕಚೇರಿಯಲ್ಲಿ ತ್ರಿವರ್ಣ ಧ್ವಜವನ್ನು ಅಳವಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ ಕಮ್ಯುನಿಸ್ಟರು 25 ವರ್ಷದಿಂದ ರಾಷ್ಟ್ರಧ್ವಜಕ್ಕೆ ನೀಡಿದ ಗೌರವ ಎಂಥಾದ್ದು ಎಂಬುದನ್ನು ಸೂಚ್ಯವಾಗಿ ಸಾರಿದ್ದಾರೆ.

ಕಮ್ಯುನಿಸ್ಟರಿಂದ ದೇಶದ್ರೋಹದ ಆರೋಪ

ಚೀನಾ ಪ್ರಭಾವಕ್ಕೆ ಒಳಗಾಗಿರುವ ಭಾರತದ ಕಮ್ಯುನಿಸ್ಟ್ ಪಕ್ಷ ಬಹುತೇಕ ಬಾರಿ ದೇಶವಿರೋಧಿ ನಿಲುವುಗಳಿಗೆ ಬೆಂಬಲ ನೀಡುತ್ತಲೇ ಬಂದಿದೆ. ಅಲ್ಲದೇ ಚೀನಾ ಜೊತೆಗೆ ಸಂಬಂಧವಿಟ್ಟುಕೊಂಡು, ದೇಶದ್ರೋಹಿ ಚಟುವಟಿಕೆಗೆ ಪರೋಕ್ಷ ಪ್ರೇರಣೆ ನೀಡುತ್ತಿದೆ. ಅಲ್ಲದೇ 1946ರಲ್ಲಿ ಭಾರತದ ಕಮ್ಯುನಿಸ್ಟ್ ಪಕ್ಷ ಪಾಕಿಸ್ತಾನ ವಿಭಜನೆಗೆ ಬೆಂಬಲ ನೀಡಿತ್ತು. ಇದು ಕಮ್ಯುನಿಸ್ಟರ್ ದೇಶ ವಿರೋಧಿ ನೀತಿಗೆ ಪ್ರಮುಖ ಸಾಕ್ಷಿಯಾಗಿ ನಿಲ್ಲುತ್ತದೆ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search