• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕ್ಸಲ್ ನಿಗ್ರಹಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಆ ಮಾಸ್ಟರ್ ಪ್ಲಾನ್ ಯಾವುದು ಗೊತ್ತಾ?

TNN Correspondent Posted On May 4, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಸ್ಥಿತಿಗತಿಯೇ ಬದಲಾಗುತ್ತಿದೆ. ಒಂದೆಡೆ ವಿಶ್ವದೆಲ್ಲೆಡೆ ಜಾಸ್ತಿಯಾಗುತ್ತಿರುವ ನರೇಂದ್ರ ಮೋದಿ ಅವರ ಖ್ಯಾತಿ. ಮತ್ತೊಂದೆಡೆ ಜಾಗತಿಕವಾಗಿ ಹೆಚ್ಚಾಗುತ್ತಿರುವ ಭಾರತದ ಗೌರವ. ಇದರ ನಡುವೆಯೇ ಬಾಲ ಮುದುರಿಕೊಂಡು ಕುಳಿತಿರುವ ಚೀನಾ, ಪಾಕಿಸ್ತಾನ,

ಹಾಗಂತ ನರೇಂದ್ರ ಮೋದಿ ಅವರು ಬರೀ ಹೊರಗಿನ ದುಷ್ಟಶಕ್ತಿಗಳ ನಿರ್ನಾಮ ಮಾಡಲು ಮುಂದಾಗಿಲ್ಲ. ಹೊರಗಿನವರ ಜತೆಗೆ ದೇಶದ ಒಳಗಿರುವ ಕಸವನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ತಾಜಾ ತಾಜಾ ಉದಾಹರಣೆ ಎಂದರೆ ಜಮ್ಮುಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳಿಗೆ ಎನ್ಐಎ ಬಿಟ್ಟು ಅವರ ರೆಕ್ಕೆ ಕತ್ತರಿಸಿದ್ದು. ಕಲ್ಲು ತೂರಾಟಗಾರರಿಗೆ ತಕ್ಕ ಪಾಠ ಕಲಿಸಿದ್ದು.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ದೇಶದಲ್ಲಿ ತಲೆನೋವಾಗಿರುವ ನಕ್ಸಲರನ್ನು ಮಟ್ಟ ಹಾಕಲು ಮಾಸ್ಟರ್ ಪ್ಲಾನ್ ರೂಪಿಸಿದೆ.

ಹೌದು, ದೇಶದಲ್ಲಿ ನಕ್ಸಲರು ಜಾಸ್ತಿ ಇರುವ ಹತ್ತು ರಾಜ್ಯಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶೀಘ್ರವಾಗಿ ಚಾಲನೆ ನೀಡುವ ಜತೆಗೆ ಅವುಗಳನ್ನು ಮುಗಿಸಬೇಕು ಎಂದು ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಕೇಂದ್ರ ಪರಿಸರ ಸಚಿವಾಲಯ ನಕ್ಸಲ್ ಪೀಡಿತ ಹತ್ತು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಕೂಡಲೇ ಈ ರಾಜ್ಯಗಳಲ್ಲಿ ಕಾಮಗಾರಿ ಮುಗಿಸಬೇಕು ಎಂದು ಸೂಚಿಸಿದ್ದಾರೆ.

ಈ ಯೋಜನೆಗಳು ನಕ್ಸಲರನ್ನು ಮಟ್ಟಹಾಕಲು ಸಹಕಾರಿಯಾಗಲಿದ್ದು, ಎಲ್ಲ ಅರಣ್ಯ ಪ್ರದೇಶಗಳ ಗ್ರಾಮಗಳಿಗೂ ರಸ್ತೆ ನಿರ್ಮಾಣ, ಸೇತುವೆ ನಿರ್ಮಾಣ, ಟೆಲಿಫೋನ್ ಟವರ್ ಗಳ ಸ್ಥಾಪನೆ ಸೇರಿ ಹಲವು ಕಾಮಗಾರಿಗಳು ಕ್ಷಿಪ್ರವಾಗಿ ಮುಗಿದರೆ, ಇದರಿಂದ ನಕ್ಸಲರನ್ನು ಮಟ್ಟಹಾಕಬಹುದು ಎಂಬುದು ಕೇಂದ್ರ ಸರ್ಕಾರದ ಚಿಂತನೆಯಾಗಿದೆ. ರಾಜ್ಯ ಸರ್ಕಾರಗಳೂ ಇದಕ್ಕೆ ಒಪ್ಪಿಗೆ ಸೂಚಿಸಿ ಶೀಘ್ರವಾಗಿ ಕಾಮಗಾರಿ ಮುಗಿಸಿದರೆ ನಕ್ಸಲರ ರೆಕ್ಕೆಪುಕ್ಕ ಕತ್ತರಿಸಿದಂತೆಯೇ ಎಂಬ ಮಾತುಗಳು ಕೇಳಿಬರುತ್ತವೆ. ಕೂಡಲೇ ಹಾಗಾಗಲಿ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search