• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಕ್ಸಲ್ ನಿಗ್ರಹಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿರುವ ಆ ಮಾಸ್ಟರ್ ಪ್ಲಾನ್ ಯಾವುದು ಗೊತ್ತಾ?

TNN Correspondent Posted On May 4, 2018
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಸ್ಥಿತಿಗತಿಯೇ ಬದಲಾಗುತ್ತಿದೆ. ಒಂದೆಡೆ ವಿಶ್ವದೆಲ್ಲೆಡೆ ಜಾಸ್ತಿಯಾಗುತ್ತಿರುವ ನರೇಂದ್ರ ಮೋದಿ ಅವರ ಖ್ಯಾತಿ. ಮತ್ತೊಂದೆಡೆ ಜಾಗತಿಕವಾಗಿ ಹೆಚ್ಚಾಗುತ್ತಿರುವ ಭಾರತದ ಗೌರವ. ಇದರ ನಡುವೆಯೇ ಬಾಲ ಮುದುರಿಕೊಂಡು ಕುಳಿತಿರುವ ಚೀನಾ, ಪಾಕಿಸ್ತಾನ,

ಹಾಗಂತ ನರೇಂದ್ರ ಮೋದಿ ಅವರು ಬರೀ ಹೊರಗಿನ ದುಷ್ಟಶಕ್ತಿಗಳ ನಿರ್ನಾಮ ಮಾಡಲು ಮುಂದಾಗಿಲ್ಲ. ಹೊರಗಿನವರ ಜತೆಗೆ ದೇಶದ ಒಳಗಿರುವ ಕಸವನ್ನು ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಇದಕ್ಕೆ ತಾಜಾ ತಾಜಾ ಉದಾಹರಣೆ ಎಂದರೆ ಜಮ್ಮುಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳಿಗೆ ಎನ್ಐಎ ಬಿಟ್ಟು ಅವರ ರೆಕ್ಕೆ ಕತ್ತರಿಸಿದ್ದು. ಕಲ್ಲು ತೂರಾಟಗಾರರಿಗೆ ತಕ್ಕ ಪಾಠ ಕಲಿಸಿದ್ದು.

ಇಂತಹ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ದೇಶದಲ್ಲಿ ತಲೆನೋವಾಗಿರುವ ನಕ್ಸಲರನ್ನು ಮಟ್ಟ ಹಾಕಲು ಮಾಸ್ಟರ್ ಪ್ಲಾನ್ ರೂಪಿಸಿದೆ.

ಹೌದು, ದೇಶದಲ್ಲಿ ನಕ್ಸಲರು ಜಾಸ್ತಿ ಇರುವ ಹತ್ತು ರಾಜ್ಯಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶೀಘ್ರವಾಗಿ ಚಾಲನೆ ನೀಡುವ ಜತೆಗೆ ಅವುಗಳನ್ನು ಮುಗಿಸಬೇಕು ಎಂದು ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಕುರಿತು ಕೇಂದ್ರ ಪರಿಸರ ಸಚಿವಾಲಯ ನಕ್ಸಲ್ ಪೀಡಿತ ಹತ್ತು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಕೂಡಲೇ ಈ ರಾಜ್ಯಗಳಲ್ಲಿ ಕಾಮಗಾರಿ ಮುಗಿಸಬೇಕು ಎಂದು ಸೂಚಿಸಿದ್ದಾರೆ.

ಈ ಯೋಜನೆಗಳು ನಕ್ಸಲರನ್ನು ಮಟ್ಟಹಾಕಲು ಸಹಕಾರಿಯಾಗಲಿದ್ದು, ಎಲ್ಲ ಅರಣ್ಯ ಪ್ರದೇಶಗಳ ಗ್ರಾಮಗಳಿಗೂ ರಸ್ತೆ ನಿರ್ಮಾಣ, ಸೇತುವೆ ನಿರ್ಮಾಣ, ಟೆಲಿಫೋನ್ ಟವರ್ ಗಳ ಸ್ಥಾಪನೆ ಸೇರಿ ಹಲವು ಕಾಮಗಾರಿಗಳು ಕ್ಷಿಪ್ರವಾಗಿ ಮುಗಿದರೆ, ಇದರಿಂದ ನಕ್ಸಲರನ್ನು ಮಟ್ಟಹಾಕಬಹುದು ಎಂಬುದು ಕೇಂದ್ರ ಸರ್ಕಾರದ ಚಿಂತನೆಯಾಗಿದೆ. ರಾಜ್ಯ ಸರ್ಕಾರಗಳೂ ಇದಕ್ಕೆ ಒಪ್ಪಿಗೆ ಸೂಚಿಸಿ ಶೀಘ್ರವಾಗಿ ಕಾಮಗಾರಿ ಮುಗಿಸಿದರೆ ನಕ್ಸಲರ ರೆಕ್ಕೆಪುಕ್ಕ ಕತ್ತರಿಸಿದಂತೆಯೇ ಎಂಬ ಮಾತುಗಳು ಕೇಳಿಬರುತ್ತವೆ. ಕೂಡಲೇ ಹಾಗಾಗಲಿ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search