• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರ್ನಾಟಕ ಪೊಲೀಸರಿಗೆ ಕೇಸರಿ ಪಟ್ಟ ಕಟ್ಟಿದ ಮೇವಾನಿಗೆ ಖಡಕ್ ಉತ್ತರ

TNN Correspondent Posted On May 5, 2018


  • Share On Facebook
  • Tweet It

ಚಿಕ್ಕಮಗಳೂರು: ಪ್ರಶ್ನಿಸುವುದನ್ನೇ ಕಾಯಕ ಮಾಡಿಕೊಂಡಿರುವ ಜಿಗ್ನೇಶ್ ಮೇವಾನಿ, ಪ್ರಕಾಶ ರೈ ಅವರಂಥವರಿಗೆ ದೇಶದ ಸಂವಿಧಾನದ ಅಡಿಯಲ್ಲಿ ಕೈಗೊಂಡಿರುವ ನಿಯಮಗಳನ್ನೇ ಪ್ರಶ್ನಿಸುವ, ಆಡಳಿತ ವ್ಯವಸ್ಥೆಯನ್ನು ಕೀಳಾಗಿ ನೋಡುವ ಪ್ರವೃತಿ ಮುಂದುವರಿದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ ದಾಖಲಿಸಿದಕ್ಕೆ ಮೇವಾನಿ ಪೊಲೀಸರನ್ನೇ ನಿಂದಿಸಿ ಟ್ವೀಟ್ ಮಾಡಿದ್ದರು. ಮೇವಾನಿ ಟ್ವೀಟ್ ಗೆ ಖಡಕ್ ಉತ್ತರ ನೀಡಿದ್ದಾರೆ.

ಮೇವಾನಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಪೊಲೀಸರು, ‘ಕಾರ್ಯಕ್ರಮ ರದ್ದುಪಡಿಸುವಲ್ಲಿ ಪೊಲೀಸರ ಪಾತ್ರವಿಲ್ಲ. ಚುನಾವಣಾಧಿಕಾರಿ ದೂರಿನಂತೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸರ ವೃತ್ತಿಧರ್ಮ  ಪ್ರಶ್ನಿಸಬೇಡಿ.. ಮುಂದಿನ ಬಾರಿ ಈ ರೀತಿ ಬಾಲಿಶ ಹೇಳಿಕೆ ನೀಡಬೇಡಿ.. ಪ್ರೌಢತೆಯಿಂದ ವರ್ತಿಸಿ ಎಂದು ಖಡಕ್ ಉತ್ತರ ನೀಡಿದ್ದಾರೆ.  ಮೇವಾನಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್‌ಪಿ ಕೆ. ಅಣ್ಣಾಮಲೈ, ಪೊಲೀಸರ ಕರ್ತವ್ಯನಿಷ್ಠೆಯನ್ನು ಪ್ರಶ್ನಿಸುವುದು ನೋವು ಉಂಟು ಮಾಡಿದೆ’ ಎಂದು ಹೇಳಿದರು.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಹೋರಾಟ ಗೀತೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್‌ ರಾಜ್ ಮತ್ತು ಕಲ್ಕುಳಿ ವಿಠಲ್ ಹೆಗ್ಡೆ ಸಹಿತ 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಾರ್ಯಕ್ರಮ ಸಂಘಟಿಸಲು ಅನುಮತಿ ಕೋರಿ ಪತ್ರ ಬರೆದಿದ್ದರೂ, ಅನುಮತಿ ನೀಡದಿದ್ದರೂ, ಆದರೂ ನೂರಾರು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು. ಈ ಕುರಿತು ಚುನಾವಣೆ ವೀಕ್ಷಕಿ ತುಷಾರಮಣಿ ಪೊಲೀಸರಿಗೆ ದೂರು ನೀಡಿದ್ದರು.

ನೀತಿ ಸಂಹಿತೆ ಉಲ್ಲಂಘನೆ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಈ ಬಗ್ಗೆ ಆಕ್ಷೇಪಿಸಿದ್ದ ಮೇವಾನಿ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾನು ಮತ್ತು ಪ್ರಕಾಶ್‌ ರಾಜ್‌ಗೆ ಮಾತನಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಕರ್ನಾಟಕ ಪೊಲೀಸರು ಕೇಸರಿಕರಣಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

One more childish attempt to silence our voice. Me and @prakashraaj are nt allowed to speak at Chittamanglore for reasons best know to saffronized police of Karnataka. Fact that they can't ignore us indicates that BJP is scared of citizens who raise real concrete issue like jobs

— Jignesh Mevani (@jigneshmevani80) May 3, 2018

  • Share On Facebook
  • Tweet It


- Advertisement -


Trending Now
ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
Tulunadu News September 28, 2023
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
Tulunadu News September 28, 2023
Leave A Reply

  • Recent Posts

    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
  • Popular Posts

    • 1
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 2
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 3
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 4
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 5
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search