• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕರ್ನಾಟಕ ಪೊಲೀಸರಿಗೆ ಕೇಸರಿ ಪಟ್ಟ ಕಟ್ಟಿದ ಮೇವಾನಿಗೆ ಖಡಕ್ ಉತ್ತರ

TNN Correspondent Posted On May 5, 2018


  • Share On Facebook
  • Tweet It

ಚಿಕ್ಕಮಗಳೂರು: ಪ್ರಶ್ನಿಸುವುದನ್ನೇ ಕಾಯಕ ಮಾಡಿಕೊಂಡಿರುವ ಜಿಗ್ನೇಶ್ ಮೇವಾನಿ, ಪ್ರಕಾಶ ರೈ ಅವರಂಥವರಿಗೆ ದೇಶದ ಸಂವಿಧಾನದ ಅಡಿಯಲ್ಲಿ ಕೈಗೊಂಡಿರುವ ನಿಯಮಗಳನ್ನೇ ಪ್ರಶ್ನಿಸುವ, ಆಡಳಿತ ವ್ಯವಸ್ಥೆಯನ್ನು ಕೀಳಾಗಿ ನೋಡುವ ಪ್ರವೃತಿ ಮುಂದುವರಿದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ  ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ ದಾಖಲಿಸಿದಕ್ಕೆ ಮೇವಾನಿ ಪೊಲೀಸರನ್ನೇ ನಿಂದಿಸಿ ಟ್ವೀಟ್ ಮಾಡಿದ್ದರು. ಮೇವಾನಿ ಟ್ವೀಟ್ ಗೆ ಖಡಕ್ ಉತ್ತರ ನೀಡಿದ್ದಾರೆ.

ಮೇವಾನಿ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಪೊಲೀಸರು, ‘ಕಾರ್ಯಕ್ರಮ ರದ್ದುಪಡಿಸುವಲ್ಲಿ ಪೊಲೀಸರ ಪಾತ್ರವಿಲ್ಲ. ಚುನಾವಣಾಧಿಕಾರಿ ದೂರಿನಂತೆ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸರ ವೃತ್ತಿಧರ್ಮ  ಪ್ರಶ್ನಿಸಬೇಡಿ.. ಮುಂದಿನ ಬಾರಿ ಈ ರೀತಿ ಬಾಲಿಶ ಹೇಳಿಕೆ ನೀಡಬೇಡಿ.. ಪ್ರೌಢತೆಯಿಂದ ವರ್ತಿಸಿ ಎಂದು ಖಡಕ್ ಉತ್ತರ ನೀಡಿದ್ದಾರೆ.  ಮೇವಾನಿ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಚಿಕ್ಕಮಗಳೂರು ಎಸ್‌ಪಿ ಕೆ. ಅಣ್ಣಾಮಲೈ, ಪೊಲೀಸರ ಕರ್ತವ್ಯನಿಷ್ಠೆಯನ್ನು ಪ್ರಶ್ನಿಸುವುದು ನೋವು ಉಂಟು ಮಾಡಿದೆ’ ಎಂದು ಹೇಳಿದರು.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಮತ್ತು ಹೋರಾಟ ಗೀತೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದ ಜಿಗ್ನೇಶ್ ಮೇವಾನಿ, ನಟ ಪ್ರಕಾಶ್‌ ರಾಜ್ ಮತ್ತು ಕಲ್ಕುಳಿ ವಿಠಲ್ ಹೆಗ್ಡೆ ಸಹಿತ 18 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಕಾರ್ಯಕ್ರಮ ಸಂಘಟಿಸಲು ಅನುಮತಿ ಕೋರಿ ಪತ್ರ ಬರೆದಿದ್ದರೂ, ಅನುಮತಿ ನೀಡದಿದ್ದರೂ, ಆದರೂ ನೂರಾರು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿ, ನೀತಿ ಸಂಹಿತೆ ಉಲ್ಲಂಘಿಸಲಾಗಿತ್ತು. ಈ ಕುರಿತು ಚುನಾವಣೆ ವೀಕ್ಷಕಿ ತುಷಾರಮಣಿ ಪೊಲೀಸರಿಗೆ ದೂರು ನೀಡಿದ್ದರು.

ನೀತಿ ಸಂಹಿತೆ ಉಲ್ಲಂಘನೆ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಈ ಬಗ್ಗೆ ಆಕ್ಷೇಪಿಸಿದ್ದ ಮೇವಾನಿ, ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ನಾನು ಮತ್ತು ಪ್ರಕಾಶ್‌ ರಾಜ್‌ಗೆ ಮಾತನಾಡಲು ಪೊಲೀಸರು ಅವಕಾಶ ನೀಡಲಿಲ್ಲ. ಕರ್ನಾಟಕ ಪೊಲೀಸರು ಕೇಸರಿಕರಣಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

One more childish attempt to silence our voice. Me and @prakashraaj are nt allowed to speak at Chittamanglore for reasons best know to saffronized police of Karnataka. Fact that they can't ignore us indicates that BJP is scared of citizens who raise real concrete issue like jobs

— Jignesh Mevani (@jigneshmevani80) May 3, 2018

  • Share On Facebook
  • Tweet It


- Advertisement -


Trending Now
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
Tulunadu News June 27, 2022
Leave A Reply

  • Recent Posts

    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
  • Popular Posts

    • 1
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 2
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 3
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 4
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 5
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search