• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶ ಭಕ್ತಿಗಿದು ಸಾಕ್ಷಿ: ಜಿನ್ನಾ ಭಾವಚಿತ್ರ ಸುಟ್ಟವರಿಗೆ ಒಂದು ಲಕ್ಷ ಬಹುಮಾನ ಎಂದ ಮುಸ್ಲಿಂ ಮುಖಂಡ

TNN Correspondent Posted On May 5, 2018
0


0
Shares
  • Share On Facebook
  • Tweet It

ರಾಮಪುರ: ಭಾರತವನ್ನು ಪಾಕಿಸ್ತಾನದ ಹೆಸರಲ್ಲಿ ಒಡೆದು, ಲಕ್ಷಾಂತರ ಹಿಂದೂಗಳ ಮಾರಣಹೋಮಕ್ಕೆ ಕಾರಣನಾದ ಪಾಕಿಸ್ತಾನದ ಜನಕ ಮಹಮ್ಮದ್ ಅಲಿ ಜಿನ್ನಾ ಮತ್ತು ಅವರ ರೀತಿಯ ವ್ಯಕ್ತಿತ್ವವನ್ನು ಹೊಂದಿದವರ ಭಾವಚಿತ್ರಗಳನ್ನು ಸುಟ್ಟವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸುವ ಮೂಲಕ ಅಖಂಡ ಭಾರತದ ಕಲ್ಪನೆಯನ್ನು ಉತ್ತರ ಪ್ರದೇಶದ ಅಖಿಲ ಭಾರತೀಯ ಮುಸ್ಲಿಂ ಮಹಾಸಂಘದ ಅಧ್ಯಕ್ಷ ಫರಾತ್ ಅಲಿ ಖಾನ್ ಬಿತ್ತಿದ್ದಾರೆ.

ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಭಾರತ ವಿಭಜಕ ಮಹಮ್ಮದ ಅಲಿ ಜಿನ್ನಾ ಭಾವಚಿತ್ರ ಅಳವಡಿಸಿರುವುದನ್ನು ತೆಗೆಯಬೇಕು ಎಂಬುದರ ಕುರಿತು ಉಂಟಾದ ಗಲಭೆಯ ಕುರಿತು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ಅಲಿಘಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಜಿನ್ನಾ ಭಾವಚಿತ್ರ ತೆಗೆಯಬೇಕು ಎಂದು ರಾಷ್ಟ್ರಭಕ್ತ ಸಂಘಟನೆಗಳು ಆಗ್ರಹಿಸಿ, ಪ್ರತಿಭಟನೆ ನಡೆಸಿದ್ದವು. ಇದನ್ನು ವಿರೋಧಿಸಿ ಕೆಲ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇದರಿಂದ ವಿಶ್ವವಿದ್ಯಾಲಯದಲ್ಲಿ ಗಲಭೆಗಳು ನಡೆದಿದ್ದವು. ಜಿನ್ನಾ ಭಾವಚಿತ್ರ ಅಳವಡಿಸಿದಕ್ಕೆ ರಾಷ್ಟ್ರಾಧ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಗಲಭೆ ಕುರಿತು ಫರಾತ್ ಅಲಿ ಖಾನ್  ಆಕ್ರೋಶ ವ್ಯಕ್ತಪಡಿಸಿದ್ದು, ಜಿನ್ನಾ ಭಾವಚಿತ್ರವನ್ನು ಅಲಿಘಡಂ ಮುಸ್ಲಿಂ ವಿಶ್ವವಿದ್ಯಾಲಯದಿಂದ ತೆಗೆದು ಹಾಕಬೇಕು. ಪಾಕಿಸ್ತಾನದ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳಿಲ್ಲ. ನಾವೇಕೆ ಭಾರತದಲ್ಲಿ ದೇಶವಿರೋಧಿಗಳ ಭಾವಚಿತ್ರವನ್ನು ಅಳವಡಿಸಬೇಕು. ಜಿನ್ನಾ ತರಹದ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದು ಹಾಕಬೇಕು. ಯಾರಾದರೂ ಮಹಮ್ಮದ್ ಅಲಿ ಜಿನ್ನಾ ಮತ್ತು ಆತರದ ವ್ಯಕ್ತಿಗಳ ಭಾವ ಚಿತ್ರ ಮತ್ತು ಪೋಸ್ಟರ್ ಗಳನ್ನು ಬಹಿರಂಗವಾಗಿ ಸುಟ್ಟುಹಾಕಿದರೇ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ದೇಶವಿರೋಧಿ ಕೆಲ ಮುಸ್ಲಿಂ ಸಂಘಟನೆಗಳಿಗೆ ತಕ್ಕ ಉತ್ತರವನ್ನು ಫರಾತ್ ಅಲಿ ಖಾನ್ ನೀಡಿದ್ದಾರೆ.

#WATCH: Farhat Ali Khan, National Head of All-India Muslim Mahasangh says, 'I appeal everyone to tear & burn down posters of Jinnah & people like him. I announce a reward of Rs 1 Lakh for the one who burns down the poster.' (04.05.2018) pic.twitter.com/HLUcJBhw4R

— ANI UP/Uttarakhand (@ANINewsUP) May 4, 2018

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search