• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಯೋಧನಿಗೆ ಬೆದರಿಕೆ ಹಾಕಿದ್ದ ಉಗ್ರ ಕೆಲವೇ ತಾಸುಗಳಲ್ಲಿ ಹೆಣವಾದ ಎಂದರೆ ಯೋಧನ ಕೆಚ್ಚೆದೆ ಎಂಥಾದ್ದಿರಬೇಕು!

TNN Correspondent Posted On May 5, 2018
0


0
Shares
  • Share On Facebook
  • Tweet It

ಶ್ರೀನಗರ: ಕಳೆದ ವಾರ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಮೀರ್ ಟೈಗರ್‌ನನ್ನು ಭಾರತೀಯ ‘ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ಮಾಡಿ ಬಿಸಾಕುವ ಮೂಲಕ ಶೌರ್ಯತನ ಮೆರೆದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ.

ಹೀಗೆ, ಹಿಜ್ಬುಲ್ ಕ್ರಿಮಿಯನ್ನು ಹತ್ಯೆ ಮಾಡುವ ಶೌರ್ಯದ ಹಿಂದೆ ಯೋಧರೊಬ್ಬರ ಶೌರ್ಯ ಹಾಗೂ ಚಾಣಾಕ್ಷತನದ ನಡೆ ಇದೆ ಎಂಬುದು ತುಂಬ ಜನರಿಗೆ ಗೊತ್ತಿಲ್ಲ.

ಹೌದು, ‘ಭದ್ರತಾ ಸಿಬ್ಬಂದಿ ತನ್ನನ್ನು ಹತ್ಯೆ ಮಾಡುವ ಮುನ್ನ ಉಗ್ರ ಸಮೀರ್ ಟೈಗರ್ 44ನೇ ರಾಷ್ಟ್ರೀಯ ರೈಫಲ್ಸ್ ನ ಮೇಜರ್ ರೋಹಿತ್ ಶುಕ್ಲಾ ಅವರಿಗೆ ಬೆದರಿಕೆ ಹಾಕಿದ್ದ. ಆದರೆ ಇದರಿಂದ ಕುಪಿತಗೊಂಡ ಮೇಜರ್ ರೋಹಿತ್ ಶುಕ್ಲಾ ಪುಲ್ವಾಮಾದಲ್ಲಿ ಉಗ್ರ ತಂಗಿದ್ದ ಸ್ಥಳಕ್ಕೆ ಸೇನೆ ನುಗ್ಗಿಸಿ ಆತ ಕೊನೆಯುಸಿರು ಎಳೆಯುವಂತೆ ಮಾಡಿದರು.

ಹೀಗೆ ರೋಹಿತ್ ಶುಕ್ಲಾ ಸೈನ್ಯವನ್ನು ಮುನ್ನಡೆಸಿ ಪುಲ್ವಾಮಾದಲ್ಲಿ ಉಗ್ರ ಅಡಗಿದ್ದ ತಾಣದ ಮೇಲೆ ಸಿಬ್ಬಂದಿ ಗುಂಡಿನ ಸುರಿಮಳೆಗೈಯುತ್ತಲ್ಲೇ ಬೆಚ್ಚಿಬಿದ್ದ ಸಮೀರ್ ಆಗಯಾ ಎಂದು ಕಿರುಚಿರುವ ಕುರಿತ ವೀಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಲ್ಲದೆ ಭಾರತೀಯ ಸೈನಿಕರ ಮೇಲೆ ನಮಗಿರುವ ಹೆಮ್ಮೆಯೂ ಇಮ್ಮಡಿಯಾಗಿದೆ.

2016ರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಸೈನಿಕರ ಗುಂಡಿಗೆ ಹತ್ಯೆಯಾದ ಬಳಿಕ ಚುರುಕಿನ ಸಂಘಟನೆಯಲ್ಲಿ ತೊಡಗಿದ್ದ ಸಮೀರ್, ಸುಮಾರು 11 ಉಗ್ರರ ನಾಯಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲದೆ ಹಲವು ದಾಳಿಗಳ ರೂವಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಎನ್ನಲಾಗುತ್ತಿತ್ತು. ಆದರೇನಂತೆ ಯೋಧನಿಗೆ ಸವಾಲು ಹಾಕಿದ ಆತನ ಪ್ರಾಣ ಪಕ್ಷಿ  ಕ್ಷಣಮಾತ್ರದಲ್ಲೇ ಹಾರಿಹೋಯಿತು.

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search