• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಸ್ತೆ ಮೇಲೆ ನಮಾಜು ಬೇಡ, ಅದೇನಿದ್ದರೂ ಮಸೀದಿಯಲ್ಲಿ ಇಟ್ಟುಕೊಳ್ಳಿ ಎಂಬ ಖಡಕ್ ನುಡಿ ಯಾರದ್ದು ಗೊತ್ತಾ?

TNN Correspondent Posted On May 7, 2018
0


0
Shares
  • Share On Facebook
  • Tweet It

ಚಂಡೀಗಡ: ದೇಶದಲ್ಲಿ ಹಿಂದೂಗಳ ಆಚರಣೆಗಳೆಂದರೆ ಕಾಂಗ್ರೆಸ್ ಸೇರಿ ಹಲವು ರಾಜಕೀಯ ಪಕ್ಷಗಳು ಒಂದು ಕಲ್ಲು ಎಸೆದು ನೋಡುತ್ತವೆ. ಆದರೆ ಅದೇ ಬೇರೆ ಧರ್ಮದ ಆಚರಣೆಗಳನ್ನು ಕನಿಷ್ಠ ಪ್ರಶ್ನೆ ಮಾಡುವುದಿರಲಿ, ಮೂಢನಂಬಿಕೆಗಳ ಕುರಿತು ಸಹ ಸೊಲ್ಲೆತ್ತುವುದಿಲ್ಲ.

ಆದರೆ ಹರಿಯಾಣದ ಬಿಜೆಪಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಖಡಕ್ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಮುಸ್ಲಿಮರು ನಮಾಜ್ ಮಾಡುವುದನ್ನು ಮಸೀದಿ ಹಾಗೂ ಈದ್ಗಾಗಳಲ್ಲಿ ಇಟ್ಟುಕೊಳ್ಳಿ, ಅದನ್ನು ರಸ್ತೆಗೆ ತರಬೇಡಿ ಎಂದು ಸೂಚನೆ ನೀಡಿದ್ದಾರೆ.

ಹೌದು, ಇತ್ತೀಚೆಗೆ ಹರಿಯಾಣದ ಗುರಗಾಂವ್ ನ ವಾಜಿರಾಬಾದ್, ಅತುಲ್ ಕಟಾರಿಯಾ ಚೌಕ್, ಸೈಬರ್ ಪಾರ್ಕ್, ದಕ್ಷಿಣ ನಗರ ಸೇರಿ ಹಲವೆಡೆ ಹಲವು ಮುಸ್ಲಿಮರು ಬಹಿರಂಗವಾಗಿ ನಮಾಜ್ ಮಾಡಿದ್ದು, ಗಲಾಟೆಗೆ ಕಾರಣವಾಗಿತ್ತು. ಜನರಿಗೆ ತೊಂದರೆಯಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಕ್ರಾಂತಿ ದಳ ಸೇರಿ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು.

ಅಷ್ಟೇ ಅಲ್ಲ, ನಮಾಜ್ ಮಾಡುವವರು ಸಹ ಹಿಂದೂ ಸಂಘಟನೆಗಳ ವಿರುದ್ಧ ತಿರುಗಿಬಿದ್ದು ಪ್ರಕರಣ ಹಿಂಸಾರೂಪ ತಾಳುವ ಲಕ್ಷಣ ಗೋಚರಿಸಿದ್ದವು. ಆಗ ಮಧ್ಯಪ್ರವೇಶಿಸಿದ್ದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದರು. ಆದರೂ ನಮಾಜ್ ಮಾಡುವ ಪದ್ಧತಿ ನಿಲ್ಲದ ಕಾರಣ ಈಗ ರಾಜ್ಯ ಸರ್ಕಾರವೇ ಪ್ರಕಟಣೆ ಹೊರಡಿಸಿದೆ.

ಖಂಡಿತವಾಗಿಯೂ ಯಾವುದೇ ಧರ್ಮದವರು ನಮಾಜು, ಪ್ರಾರ್ಥನೆ ಮಾಡುವುದು ತಪ್ಪಲ್ಲ. ಹಾಗಂತ ಇನ್ನೊಬ್ಬರಿಗೆ ತೊಂದರೆಯಾಗದ ಹಾಗೆ, ಶಾಂತಿ ಕಾಪಾಡುವ ಹಾಗೆ ನೋಡಿಕೊಳ್ಳುವುದು ಸಹ ಮುಖ್ಯ ಎನಿಸುತ್ತದೆ. ಹಾಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಸ್ಲಿಮರು ಮಸೀದಿ ಹಾಗೂ ಈದ್ಗಾಗಳಲ್ಲಿ ಮಾತ್ರ ನಮಾಜ್ ಮಾಡಬೇಕು ಎಂದು ಮನೋಹರ್ ಲಾಲ್ ಖಟ್ಟರ್ ಆದೇಶ ಹೊರಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search