• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದೇಶದಲ್ಲಿ ನೆಲೆಸಿರುವವರಲ್ಲಿ ಭಾರತೀಯರೇ ಅಚ್ಚು ಮೆಚ್ಚು, ಹೊಡೆಯಿರಿ ನಮ್ಮ ಸಂಸ್ಕೃತಿಗೊಂದು ಸೆಲ್ಯೂಟು!

TNN Correspondent Posted On May 7, 2018
0


0
Shares
  • Share On Facebook
  • Tweet It

ಆದಿ-ಅನಾದಿ ಕಾಲದಿಂದಲೂ ಭಾರತೀಯ ಸಂಸ್ಕೃತಿ, ಆಚಾರ-ವಿಚಾರ, ಸಂಪ್ರದಾಯ, ಉಡುಗೆ-ತೊಡುಗೆ, ಮಾತು, ಸಂವಹನ, ಜ್ಞಾನ… ಹೀಗೆ ಭಾರತದ ಪ್ರತಿಯೊಂದೂ ವಿಶ್ವದೆಲ್ಲೆಡೆ ಮೆಚ್ಚುಗೆ ಪಡೆದಿದೆ. ಅದರಲ್ಲೂ ವೈವಿಧ್ಯತೆಯಲ್ಲೂ ಏಕತೆ ಸಾಧಿಸುವ ಹಿಂದೂಸ್ಥಾನ ಎಂದರೆ ಎಲ್ಲರೂ ಗೌರವ ಕೊಡುತ್ತಾರೆ. ನಾವೂ ಹಾಗೆಯೇ ಬದುಕಿದ್ದೇವೆ.

ಈಗ ಭಾರತದ ಸಂಪ್ರದಾಯ, ಭಾರತೀಯರ ವರ್ತನೆ ಸೇರಿ ಹಲವು ಅಂಶಗಳಿಂದಾಗಿ ಭಾರತಕ್ಕೆ ಮತ್ತೊಂದು ಮುಕುಟ ಲಭಿಸಿದ್ದು, ಎಲ್ಲರೂ ಸಂಭ್ರಮಪಡುವ ಅಂಶವೊಂದು ಬಹಿರಂಗವಾಗಿದೆ.

ಹೌದು, ಬ್ರಿಟನ್ನಿನಲ್ಲಿ ನೆಲೆಸಿರುವ ಎಲ್ಲ ವಿದೇಶಿಗರಲ್ಲಿ ಭಾರತೀಯರೇ ಎಲ್ಲರಿಗೂ ಅಚ್ಚು ಮೆಚ್ಚು ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲ ಶತ್ರು ರಾಷ್ಟ್ರ ಪಾಕಿಸ್ತಾನ ಮತ್ತು ಬಾಂಗ್ಲಾದೇಶಿಯರಿಗಿಂತಲೂ ಎಲ್ಲರಿಗೂ ಭಾರತೀಯರೇ ಇಷ್ಟ ಎಂದು ಯು ಗೋವ್ ಪೋಲ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ಈ ಕುರಿತು ವರದಿ ತಯಾರಿಸಲು ಸಂಸ್ಥೆ ಸುಮಾರು 25 ಪ್ರಶ್ನೆಗಳನ್ನು ತಯಾರಿಸಿ 1,668 ಬ್ರಿಟಿಷರನ್ನು ಸಂದರ್ಶನ ಮಾಡಿದ್ದು, ಅವರಲ್ಲಿ ಬಹುತೇಕರು ಭಾರತೀಯರೇ ನಮಗೆ ಅಚ್ಚುಮೆಚ್ಚು ಎಂದು ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಟನ್ನಿಗೆ ವಲಸೆ ಹೋಗಿ ಅಲ್ಲಿ ನೆಲೆಸಿರುವ ಭಾರತೀಯರ ಆಚಾರ-ವಿಚಾರ, ಸಂವಹನ, ವರ್ತನೆ ಸೇರಿ ಹಲವು ವಿಷಯಗಳು ನಮಗೆ ಇಷ್ಟ ಎಂದು ಬಹುತೇಕ ಬ್ರಿಟಿಷರು ಭಾರತೀಯರನ್ನೇ ಇಷ್ಟಪಟ್ಟಿದ್ದಾರೆ. ನಂತರ ಸ್ಥಾನವನ್ನು ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳು ಪಡೆದಿವೆ. ಈ ರಾಷ್ಟ್ರಗಳ ಜನರ ಕುರಿತು ಬ್ರಿಟಿಷರು ಅಷ್ಟೇನೂ ಸಕಾರಾತ್ಮಕವಾಗಿ ಅಭಿಪ್ರಾಯ ಮಂಡಿಸಿಲ್ಲ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಭಾರತ ಪಾಶ್ಚಿಮಾತ್ಯ ಸಂಸ್ಕೃತಿಗೆ ಒಗ್ಗಿ ಹೋಗಿದೆ ಎಂದು ಗುಲ್ಲೆಬ್ಬಿಸುತ್ತಿರುವವ ಬೆನ್ನಲ್ಲಿ, ನಮ್ಮನ್ನಾಳಿದ ಬ್ರಿಟಿಷರ ನಾಡಿನಲ್ಲೂ ನಾವು, ನಮ್ಮವರು ಭಾರತೀಯತನವನ್ನು ಮೆರೆಯುವ ಮೂಲಕ ಸಕಾರಾತ್ಮಕ ಅಭಿಪ್ರಾಯ ಮೂಡಿಸಿರುವುದು ಪ್ರತಿ ಭಾರತೀಯನೂ ಹೆಮ್ಮೆಪಡುವ ಸಂಗತಿಯಾಗಿದೆ.

 

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search