• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಸಮಾನತೆ ವಿರೋಧಿ ಎನ್ನುವವರೇ ಎಲ್ಲಿದ್ದೀರಿ:ಅಂತರ್ಜಾತಿ ವಿವಾಹ ಉತ್ತೇಜನಕ್ಕೆ ಮಹಾ ಸರ್ಕಾರ ನಿರ್ಧಾರ

TNN Correspondent Posted On May 7, 2018
0


0
Shares
  • Share On Facebook
  • Tweet It

ಮುಂಬೈ: ಬಿಜೆಪಿ ದಲಿತ ವಿರೋಧಿ, ಮನುವಾದವನ್ನು ಹೇರುವ ಪಕ್ಷ ಎನ್ನುವ ವಿರೋಧಿಗಳ ತೀವ್ರ ವಾಗ್ದಾಳಿಯನ್ನು ಎದುರಿಸಿಯೂ ಬಿಜೆಪಿ ಸರ್ಕಾರವೊಂದು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸೂಕ್ತ ರಕ್ಷಣೆ ಒದಗಿಸುವುದು ಮತ್ತು ಪೋಷಣೆ ಮಾಡುವ ನಿಯಮ ತರಲು ನಿರ್ಧರಿಸಿದೆ ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಮೀತಿ ಸಚಿವ ರಾಜಕುಮಾರ ಬದೊಲೆ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಅಂತರ್ಜಾತಿ ವಿವಾಹಕ್ಕೆ ಬಲಿಯಾಗುವವರಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದ್ದರಿಂದ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಕ್ಷಣೆ ನೀಡುವ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ. ಅನ್ಯ ಜಾತಿಯ, ವಿಶೇಷವಾಗಿ ದಮನಕ್ಕೆ ಒಳಗಾಗಿರುವ ಜಾತಿಯ ವ್ಯಕ್ತಿಗಳ ಮಧ್ಯೆ ಮದುವೆಯಾದರೆ ಆ ಜೋಡಿಗಳಿಗೆ ಸೂಕ್ತ ಸಹಾಯಧನ ನೀಡುವುದು, ಮಕ್ಕಳಾದರೂ ವಿಶೇಷ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ.

ಅಂತರ್ಜಾತಿ ವಿವಾಹವಾದವರ ಮಕ್ಕಳಿಗೆ ಶಾಲೆ ಫೀಯಲ್ಲಿ ರಿಯಾಯಿತಿ ನೀಡುವುದು, ಸಾಮಾಜಿಕ ಬಹಿಷ್ಕಾರ ನೀಡಿದರೇ ಸೂಕ್ತ ರಕ್ಷಣೆ ನೀಡುವುದು, ಅಗತ್ಯವಿದ್ದಲ್ಲಿ ಸೂಕ್ತ ಆರ್ಥಿಕ ಸಹಾಯಧನ ನೀಡಲು ಯೋಜಿಸಲಾಗಿದೆ. ಪ್ರಸ್ತುತ ಇರುವ ವಿಶೇಷ ಮದುವೆ ಕಾಯಿದೆಗೆ ಸೂಕ್ತ ಬದಲಾವಣೆ ತರುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿ ಡಾ.ಅಂಬೇಡ್ಕರ್ ಫೌಂಡೇಷನ್ ಅಂತರ್ಜಾತಿ ವಿವಾಹವಾಗುವ ನವದಂಪತಿಗೆ 2.5 ಲಕ್ಷ ರೂಪಾಯಿ ನೀಡುತ್ತದೆ. ಅದೇ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಸಹಾಯಧನ, ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search