• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಸಮಾನತೆ ವಿರೋಧಿ ಎನ್ನುವವರೇ ಎಲ್ಲಿದ್ದೀರಿ:ಅಂತರ್ಜಾತಿ ವಿವಾಹ ಉತ್ತೇಜನಕ್ಕೆ ಮಹಾ ಸರ್ಕಾರ ನಿರ್ಧಾರ

TNN Correspondent Posted On May 7, 2018
0


0
Shares
  • Share On Facebook
  • Tweet It

ಮುಂಬೈ: ಬಿಜೆಪಿ ದಲಿತ ವಿರೋಧಿ, ಮನುವಾದವನ್ನು ಹೇರುವ ಪಕ್ಷ ಎನ್ನುವ ವಿರೋಧಿಗಳ ತೀವ್ರ ವಾಗ್ದಾಳಿಯನ್ನು ಎದುರಿಸಿಯೂ ಬಿಜೆಪಿ ಸರ್ಕಾರವೊಂದು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಲು ನಿರ್ಧರಿಸಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸೂಕ್ತ ರಕ್ಷಣೆ ಒದಗಿಸುವುದು ಮತ್ತು ಪೋಷಣೆ ಮಾಡುವ ನಿಯಮ ತರಲು ನಿರ್ಧರಿಸಿದೆ ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಮೀತಿ ಸಚಿವ ರಾಜಕುಮಾರ ಬದೊಲೆ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಅಂತರ್ಜಾತಿ ವಿವಾಹಕ್ಕೆ ಬಲಿಯಾಗುವವರಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಆದ್ದರಿಂದ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಕ್ಷಣೆ ನೀಡುವ ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ. ಅನ್ಯ ಜಾತಿಯ, ವಿಶೇಷವಾಗಿ ದಮನಕ್ಕೆ ಒಳಗಾಗಿರುವ ಜಾತಿಯ ವ್ಯಕ್ತಿಗಳ ಮಧ್ಯೆ ಮದುವೆಯಾದರೆ ಆ ಜೋಡಿಗಳಿಗೆ ಸೂಕ್ತ ಸಹಾಯಧನ ನೀಡುವುದು, ಮಕ್ಕಳಾದರೂ ವಿಶೇಷ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ.

ಅಂತರ್ಜಾತಿ ವಿವಾಹವಾದವರ ಮಕ್ಕಳಿಗೆ ಶಾಲೆ ಫೀಯಲ್ಲಿ ರಿಯಾಯಿತಿ ನೀಡುವುದು, ಸಾಮಾಜಿಕ ಬಹಿಷ್ಕಾರ ನೀಡಿದರೇ ಸೂಕ್ತ ರಕ್ಷಣೆ ನೀಡುವುದು, ಅಗತ್ಯವಿದ್ದಲ್ಲಿ ಸೂಕ್ತ ಆರ್ಥಿಕ ಸಹಾಯಧನ ನೀಡಲು ಯೋಜಿಸಲಾಗಿದೆ. ಪ್ರಸ್ತುತ ಇರುವ ವಿಶೇಷ ಮದುವೆ ಕಾಯಿದೆಗೆ ಸೂಕ್ತ ಬದಲಾವಣೆ ತರುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿ ಡಾ.ಅಂಬೇಡ್ಕರ್ ಫೌಂಡೇಷನ್ ಅಂತರ್ಜಾತಿ ವಿವಾಹವಾಗುವ ನವದಂಪತಿಗೆ 2.5 ಲಕ್ಷ ರೂಪಾಯಿ ನೀಡುತ್ತದೆ. ಅದೇ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಸಹಾಯಧನ, ಪ್ರೋತ್ಸಾಹ ಧನ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search