• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಯೋತ್ಪಾದಕ ಬುರ್ಹಾನ ವಾನಿ ಬಂಟರೆಲ್ಲರೂ ಖಲ್ಲಾಸ್

TNN Correspondent Posted On May 7, 2018
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಯನ್ನು ಬಲಿಷ್ಠಗೊಳಿಸಿ, ತನ್ನದೇ ತಂಡವನ್ನು ಕಟ್ಟಿಕೊಂಡು ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಬುರ್ಹಾನ ವಾನಿಯನ್ನು ನಮ್ಮ ಸೇನೆ ಹೊಡೆದುರುಳಿಸಿತು. ನಂತರ ವಾನಿ ಬಂಟರೆಲ್ಲ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿದ್ದರು. ವಾನಿ ಮೃತನಾದ ನಂತರ ಕೆರಳಿದ ಇವರನ್ನು ಸದೆಬಡೆಯುವ ಕೆಲಸವನ್ನು ನಮ್ಮ ಸೈನ್ಯ ನಿರಂತರವಾಗಿ ಮಾಡುತ್ತಿದೆ. ಅದಕ್ಕೆ ಸಾಕ್ಷಿ ಭಾನುವಾರ ನಡೆದ ಭಯೋತ್ಪಾದಕ ಮೇಲಿನ ಯಶಸ್ವಿ ದಾಳಿ ಮತ್ತು ದಾಳಿಯಲ್ಲಿ ವಾನಿ ಬಂಟ ಪದ್ದರ ಹತ್ಯೆ  ನಂತರ ವಾನಿಯ ಎಲ್ಲ ಸಂಘಡಿಗರ ಅಂತ್ಯವಾದಂತಾಗಿದೆ.

ಯಶಸ್ವಿ ಕಾರ್ಯಾಚರಣೆ ನಡೆಸಿರುವ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಾನಿ ಮತ್ತು ಆತನ ಸಂಗಡಿಗರ ಗುಂಪುಳ್ಳ ಭಾವಚಿತ್ರದಲ್ಲಿರುವ ಎಲ್ಲ ಭಯೋತ್ಪಾದಕರನ್ನು ಭಾರತೀಯ ಸೈನ್ಯ ಯಶಸ್ವಿಯಾಗಿ ಮುಗಿಸುತ್ತಾ ಬಂದಿದ್ದು, ಇದೀಗ ಶನಿವಾರ, ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಬುರ್ಹಾನ ವಾನಿಯ ಇಡೀ ತಂಡ ಸರ್ವನಾಶ ವಾಗಿರುವ ಶುಭ ಸುದ್ಧಿ ಬೆಳಕಿಗೆ ಬಂದಿದೆ.

ಭಾನುವಾರ ಅಂತ್ಯವಾದ ಕಾರ್ಯಾಚರಣೆಯಲ್ಲಿ ಹೊರ ಬಿದ್ದ ಮಾಹಿತಿ ಪ್ರಕಾರ ಬುರ್ಹಾನ ವಾನಿಯ 11 ಜನರ ತಂಡದ ಎಲ್ಲ ಸದಸ್ಯರ ಅಂತ್ಯವಾಗಿರುವ ಮಾಹಿತಿ ಹೊರ ಬಿದ್ದಿದೆ. ವಾನಿ ಜೊತೆ ಉತ್ತಮ ಸಂಬಂಧ ಹೊಂದಿದ್ದ ಪದ್ದರ ಎಂಬಾತನೂ ಕೂಡ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ. ಭಾಗಶಃ ವಾನಿ ತಂಡ 11 ಜನರಲ್ಲಿ 10 ಜನರ ಅಂತ್ಯವಾಗಿದೆ. ಇನ್ನೊಬ್ಬ ಜೈಲಿನಲ್ಲಿದ್ದಾನೆ.

ಆದಿಲ್ ಖಂಡೆ, ನಿಸ್ಸಾರ್ ಪಂಡಿತ್, ಅಫಾಕ್ ಭಟ್, ಸಬ್ಜಾರ್ ಭಟ್, ಅನೀಸ್, ಇಷ್ಫಾಕ್ ಧರ್, ವಾಸೀಮ್ ಮಲ್ಹಾ ಮತ್ತು ವಾಸೀಮ್ ಶಾ ಅಂತ್ಯವಾಗಿದ್ದು, ತಾರೀಖ್ ಪಂಡಿತ್ ಜೈಲಿನಲ್ಲಿದ್ದಾನೆ. ಭಾನುವಾರ ನಡೆದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಐದು ಉಗ್ರರು ಹತರಾಗಿದ್ದರು. ಅದರಲ್ಲಿ ವಾನಿ ಸಹಚರರು ಇದ್ದರು. ಇದೀಗ ವಾನಿಯ ಇಡೀ ತಂಡ ಸರ್ವನಾಶವಾಗಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search